ಸುಳ್ಯ: ಸೋಮವಾರ, ಮಂಗಳವಾರ ಎರಡೂ ದಿನವೂ ಭಾರೀ ಮಳೆಯಾಗಿದೆ. ನಾಳೆ ಹೇಗಿದೆ? ನಾಳೆಯೂ ಹವಾಮಾನ ಇಲಾಖೆಯ ಪ್ರಕಾರ ಉತ್ತಮ ಮಳೆಯಾಗಲಿದೆ. ಕರಾವಳಿ ಹಾಗೂ ಒಳನಾಡಿನಲ್ಲಿ ಉತ್ತಮ ಮಳೆಯಾಗಲಿದೆ.
ಹೀಗಾಗಿ ಕರಾವಳಿ ಜಿಲ್ಲೆಯಲ್ಲಿ , ಕೊಡಗು ಪ್ರದೇಶದಲ್ಲಿ ರೆಡ್ ಎಲರ್ಟ್ ಘೊಷಣೆ ಮಾಡಲಾಗಿದೆ. ರೆಡ್ ಎಲರ್ಟ್ ಎಂದರೆ ಎಲ್ಲಾ ರೀತಿಯಲ್ಲೂ ಸನ್ನದ್ಧವಾದ ಸ್ಥಿತಿ. ಶಾಲೆ ಕಾಲೇಜುಗಳಿಗೆ ರಜೆ ನೀಡುವುದು ಹಾಗೂ ಗಂಜಿಕೇಂದ್ರದಿಂದ ತೊಡಗಿ ಅಗತ್ಯ ಇದ್ದ ಕಡೆ ಸ್ಥಳಾಂತರವರೆಗೂ ಸಿದ್ಧತೆ ನಡೆಸುವುದು ಇದರಲ್ಲಿ ಒಳಗೊಂಡಿದೆ. ಹೀಗಾಗಿ ಎಲ್ಲರೂ ನಾಳೆಯ ದಿನವೂ ಭಾರೀ ಮಳೆಯ ನಿರೀಕ್ಷೆಯಲ್ಲಿಯೇ ಸಿದ್ಧತೆ ಮಾಡಿಕೊಳ್ಳಬೇಕಾಗಿದೆ.
ಕೊಡಗು ಜಿಲ್ಲೆಯಲ್ಲಿ ಆ.5ರಿಂದ 7ರ ಬೆಳಗಿನವರೆಗೆ 115.6ಮಿ.ಮೀ.ನಿಂದ 204.4.ಮಿ.ಮೀ.ನಷ್ಟು ಮಳೆಯಾಗಲಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು , ಇದೀಗ ರೆಡ್ ಅಲರ್ಟ್ ಘೋಷಿಸಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ರೆಡ್ ಅಲರ್ಟ್ ಘೊಷಣೆ ಮಾಡಲಾಗಿದೆ. ಗೋವಾದಿಂದ ಕರಾವಳಿ ತೀರ ಕೇರಳದವರೆಗೆ ಮಳೆ ಕಾಡಲಿದೆ.
ಇದೇ ಸಂದರ್ಭ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದ್ದು ಇದರ ಪರಿಣಾಮವೂ ಕಾಡಲಿದೆ.
ಕಳೆದ 24 ಗಂಟೆಯಲ್ಲಿ ಗುತ್ತಿಗಾರು ಪ್ರದೇಶದಲ್ಲಿ 192 ಮಿಮೀ ಮಳೆಯಾದರೆ ಬಾಳಿಲದಲ್ಲಿ 159 ಮಿಮೀ ಮಳೆಯಾಗಿತ್ತು. ಕಡಬದಲ್ಲಿ 108 ಮಿಮೀ ಮಳೆಯಾಗಿದೆ. ಈಗಲೂ ಮಳೆ ಸುರಿಯುತ್ತಿದ್ದು ಹೊಳೆ, ನದಿಗಳು ತುಂಬಿ ಹರಿಯುತ್ತಿವೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…
ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…
ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…
ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…
ಬೇಸಗೆಯ ಸಮಯದಲ್ಲಿ ದೇಹದ ನೀರಿನ ಕೊರತೆ ತಪ್ಪಿಸಲು watermelon, melon, strawberry ಸೇರಿದಂತೆ…
ಭಾರತದ ಕೃಷಿಯಲ್ಲಿ ಮುಂದಿನ ದೊಡ್ಡ ಕ್ರಾಂತಿ ಕೃತಕ ಬುದ್ಧಿಮತ್ತೆ (Artificial Intelligence) AI)ಮೂಲಕ…