ಸುಳ್ಯ: ಸೋಮವಾರ, ಮಂಗಳವಾರ ಎರಡೂ ದಿನವೂ ಭಾರೀ ಮಳೆಯಾಗಿದೆ. ನಾಳೆ ಹೇಗಿದೆ? ನಾಳೆಯೂ ಹವಾಮಾನ ಇಲಾಖೆಯ ಪ್ರಕಾರ ಉತ್ತಮ ಮಳೆಯಾಗಲಿದೆ. ಕರಾವಳಿ ಹಾಗೂ ಒಳನಾಡಿನಲ್ಲಿ ಉತ್ತಮ ಮಳೆಯಾಗಲಿದೆ.
ಹೀಗಾಗಿ ಕರಾವಳಿ ಜಿಲ್ಲೆಯಲ್ಲಿ , ಕೊಡಗು ಪ್ರದೇಶದಲ್ಲಿ ರೆಡ್ ಎಲರ್ಟ್ ಘೊಷಣೆ ಮಾಡಲಾಗಿದೆ. ರೆಡ್ ಎಲರ್ಟ್ ಎಂದರೆ ಎಲ್ಲಾ ರೀತಿಯಲ್ಲೂ ಸನ್ನದ್ಧವಾದ ಸ್ಥಿತಿ. ಶಾಲೆ ಕಾಲೇಜುಗಳಿಗೆ ರಜೆ ನೀಡುವುದು ಹಾಗೂ ಗಂಜಿಕೇಂದ್ರದಿಂದ ತೊಡಗಿ ಅಗತ್ಯ ಇದ್ದ ಕಡೆ ಸ್ಥಳಾಂತರವರೆಗೂ ಸಿದ್ಧತೆ ನಡೆಸುವುದು ಇದರಲ್ಲಿ ಒಳಗೊಂಡಿದೆ. ಹೀಗಾಗಿ ಎಲ್ಲರೂ ನಾಳೆಯ ದಿನವೂ ಭಾರೀ ಮಳೆಯ ನಿರೀಕ್ಷೆಯಲ್ಲಿಯೇ ಸಿದ್ಧತೆ ಮಾಡಿಕೊಳ್ಳಬೇಕಾಗಿದೆ.
ಕೊಡಗು ಜಿಲ್ಲೆಯಲ್ಲಿ ಆ.5ರಿಂದ 7ರ ಬೆಳಗಿನವರೆಗೆ 115.6ಮಿ.ಮೀ.ನಿಂದ 204.4.ಮಿ.ಮೀ.ನಷ್ಟು ಮಳೆಯಾಗಲಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು , ಇದೀಗ ರೆಡ್ ಅಲರ್ಟ್ ಘೋಷಿಸಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ರೆಡ್ ಅಲರ್ಟ್ ಘೊಷಣೆ ಮಾಡಲಾಗಿದೆ. ಗೋವಾದಿಂದ ಕರಾವಳಿ ತೀರ ಕೇರಳದವರೆಗೆ ಮಳೆ ಕಾಡಲಿದೆ.
ಇದೇ ಸಂದರ್ಭ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದ್ದು ಇದರ ಪರಿಣಾಮವೂ ಕಾಡಲಿದೆ.
ಕಳೆದ 24 ಗಂಟೆಯಲ್ಲಿ ಗುತ್ತಿಗಾರು ಪ್ರದೇಶದಲ್ಲಿ 192 ಮಿಮೀ ಮಳೆಯಾದರೆ ಬಾಳಿಲದಲ್ಲಿ 159 ಮಿಮೀ ಮಳೆಯಾಗಿತ್ತು. ಕಡಬದಲ್ಲಿ 108 ಮಿಮೀ ಮಳೆಯಾಗಿದೆ. ಈಗಲೂ ಮಳೆ ಸುರಿಯುತ್ತಿದ್ದು ಹೊಳೆ, ನದಿಗಳು ತುಂಬಿ ಹರಿಯುತ್ತಿವೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…
ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್ಗೆ ₹2 ಹೆಚ್ಚಳ ಮಾಡಲಾಗಿದೆ.…