ಸುಳ್ಯ: ಸೋಮವಾರ, ಮಂಗಳವಾರ ಎರಡೂ ದಿನವೂ ಭಾರೀ ಮಳೆಯಾಗಿದೆ. ನಾಳೆ ಹೇಗಿದೆ? ನಾಳೆಯೂ ಹವಾಮಾನ ಇಲಾಖೆಯ ಪ್ರಕಾರ ಉತ್ತಮ ಮಳೆಯಾಗಲಿದೆ. ಕರಾವಳಿ ಹಾಗೂ ಒಳನಾಡಿನಲ್ಲಿ ಉತ್ತಮ ಮಳೆಯಾಗಲಿದೆ.
ಹೀಗಾಗಿ ಕರಾವಳಿ ಜಿಲ್ಲೆಯಲ್ಲಿ , ಕೊಡಗು ಪ್ರದೇಶದಲ್ಲಿ ರೆಡ್ ಎಲರ್ಟ್ ಘೊಷಣೆ ಮಾಡಲಾಗಿದೆ. ರೆಡ್ ಎಲರ್ಟ್ ಎಂದರೆ ಎಲ್ಲಾ ರೀತಿಯಲ್ಲೂ ಸನ್ನದ್ಧವಾದ ಸ್ಥಿತಿ. ಶಾಲೆ ಕಾಲೇಜುಗಳಿಗೆ ರಜೆ ನೀಡುವುದು ಹಾಗೂ ಗಂಜಿಕೇಂದ್ರದಿಂದ ತೊಡಗಿ ಅಗತ್ಯ ಇದ್ದ ಕಡೆ ಸ್ಥಳಾಂತರವರೆಗೂ ಸಿದ್ಧತೆ ನಡೆಸುವುದು ಇದರಲ್ಲಿ ಒಳಗೊಂಡಿದೆ. ಹೀಗಾಗಿ ಎಲ್ಲರೂ ನಾಳೆಯ ದಿನವೂ ಭಾರೀ ಮಳೆಯ ನಿರೀಕ್ಷೆಯಲ್ಲಿಯೇ ಸಿದ್ಧತೆ ಮಾಡಿಕೊಳ್ಳಬೇಕಾಗಿದೆ.
ಕೊಡಗು ಜಿಲ್ಲೆಯಲ್ಲಿ ಆ.5ರಿಂದ 7ರ ಬೆಳಗಿನವರೆಗೆ 115.6ಮಿ.ಮೀ.ನಿಂದ 204.4.ಮಿ.ಮೀ.ನಷ್ಟು ಮಳೆಯಾಗಲಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು , ಇದೀಗ ರೆಡ್ ಅಲರ್ಟ್ ಘೋಷಿಸಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ರೆಡ್ ಅಲರ್ಟ್ ಘೊಷಣೆ ಮಾಡಲಾಗಿದೆ. ಗೋವಾದಿಂದ ಕರಾವಳಿ ತೀರ ಕೇರಳದವರೆಗೆ ಮಳೆ ಕಾಡಲಿದೆ.
ಇದೇ ಸಂದರ್ಭ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದ್ದು ಇದರ ಪರಿಣಾಮವೂ ಕಾಡಲಿದೆ.
ಕಳೆದ 24 ಗಂಟೆಯಲ್ಲಿ ಗುತ್ತಿಗಾರು ಪ್ರದೇಶದಲ್ಲಿ 192 ಮಿಮೀ ಮಳೆಯಾದರೆ ಬಾಳಿಲದಲ್ಲಿ 159 ಮಿಮೀ ಮಳೆಯಾಗಿತ್ತು. ಕಡಬದಲ್ಲಿ 108 ಮಿಮೀ ಮಳೆಯಾಗಿದೆ. ಈಗಲೂ ಮಳೆ ಸುರಿಯುತ್ತಿದ್ದು ಹೊಳೆ, ನದಿಗಳು ತುಂಬಿ ಹರಿಯುತ್ತಿವೆ.
ಮಹಾಕುಂಭ ಮೇಳದ ಮೂಲಕ ಹೊಸದೊಂದು ಸಂಕಲ್ಪವನ್ನು ಜನರು ಮಾಡಬೇಕು. ಈ ಬಾರಿ ಕುಂಭಮೇಳದಲ್ಲಿ…
ಕೃಷಿ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ಸೃಷ್ಠಿಸಲು ಹಾಗೂ ಗ್ರಾಮೀಣ ಪ್ರದೇಶಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು…
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ…
ಉತ್ತರ ಪ್ರದೇಶದ ಪ್ರಯಾಗ್ರಾಜ್ನ ಮಹಾಕುಂಭಮೇಳ ಶಿವರಾತ್ರಿಯಂದು(ಇಂದು) ಸಂಪನ್ನಗೊಳ್ಳಲಿದೆ.ಈ ಹಿನ್ನೆಲೆಯಲ್ಲಿ ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ…
ಶಿವಮೊಗ್ಗ ಜಿಲ್ಲೆಯ ಸಾಗರದ ಜೀವನ್ಮುಖಿ ಸಂಘಟನೆ ಹಾಗೂ ಭೀಮನಕೋಟೆಯ ಚರಕ ಮಹಿಳಾ ವಿವಿಧೋದ್ದೇಶ…
ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…