Advertisement
ಮಾಹಿತಿ

ನಾಳೆ ಹೇಗಿದೆ ಮಳೆ ? ರೆಡ್ ಅಲರ್ಟ್ ಎಲ್ಲೆಲ್ಲಾ ? ನಾವೇನು ಮಾಡಬಹುದು ?

Share

ಸುಳ್ಯ: ಸೋಮವಾರ, ಮಂಗಳವಾರ ಎರಡೂ ದಿನವೂ ಭಾರೀ ಮಳೆಯಾಗಿದೆ. ನಾಳೆ ಹೇಗಿದೆ?  ನಾಳೆಯೂ ಹವಾಮಾನ ಇಲಾಖೆಯ ಪ್ರಕಾರ ಉತ್ತಮ ಮಳೆಯಾಗಲಿದೆ. ಕರಾವಳಿ ಹಾಗೂ ಒಳನಾಡಿನಲ್ಲಿ ಉತ್ತಮ ಮಳೆಯಾಗಲಿದೆ.

Advertisement
Advertisement
Advertisement
Advertisement

ಹೀಗಾಗಿ ಕರಾವಳಿ ಜಿಲ್ಲೆಯಲ್ಲಿ , ಕೊಡಗು ಪ್ರದೇಶದಲ್ಲಿ ರೆಡ್ ಎಲರ್ಟ್ ಘೊಷಣೆ ಮಾಡಲಾಗಿದೆ. ರೆಡ್ ಎಲರ್ಟ್ ಎಂದರೆ ಎಲ್ಲಾ ರೀತಿಯಲ್ಲೂ ಸನ್ನದ್ಧವಾದ ಸ್ಥಿತಿ.  ಶಾಲೆ ಕಾಲೇಜುಗಳಿಗೆ ರಜೆ ನೀಡುವುದು  ಹಾಗೂ ಗಂಜಿಕೇಂದ್ರದಿಂದ ತೊಡಗಿ ಅಗತ್ಯ ಇದ್ದ ಕಡೆ ಸ್ಥಳಾಂತರವರೆಗೂ ಸಿದ್ಧತೆ ನಡೆಸುವುದು ಇದರಲ್ಲಿ ಒಳಗೊಂಡಿದೆ. ಹೀಗಾಗಿ ಎಲ್ಲರೂ ನಾಳೆಯ ದಿನವೂ ಭಾರೀ ಮಳೆಯ ನಿರೀಕ್ಷೆಯಲ್ಲಿಯೇ ಸಿದ್ಧತೆ ಮಾಡಿಕೊಳ್ಳಬೇಕಾಗಿದೆ.

Advertisement

ಕೊಡಗು ಜಿಲ್ಲೆಯಲ್ಲಿ ಆ.5ರಿಂದ 7ರ ಬೆಳಗಿನವರೆಗೆ 115.6ಮಿ.ಮೀ.ನಿಂದ 204.4.ಮಿ.ಮೀ.ನಷ್ಟು ಮಳೆಯಾಗಲಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು , ಇದೀಗ  ರೆಡ್ ಅಲರ್ಟ್ ಘೋಷಿಸಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ರೆಡ್ ಅಲರ್ಟ್ ಘೊಷಣೆ ಮಾಡಲಾಗಿದೆ. ಗೋವಾದಿಂದ ಕರಾವಳಿ ತೀರ ಕೇರಳದವರೆಗೆ ಮಳೆ ಕಾಡಲಿದೆ.

ಇದೇ ಸಂದರ್ಭ ಬಂಗಾಳಕೊಲ್ಲಿಯಲ್ಲಿ  ವಾಯುಭಾರ ಕುಸಿತಗೊಂಡಿದ್ದು ಇದರ ಪರಿಣಾಮವೂ  ಕಾಡಲಿದೆ.

Advertisement

 

Advertisement

 

ಕಳೆದ 24 ಗಂಟೆಯಲ್ಲಿ ಗುತ್ತಿಗಾರು ಪ್ರದೇಶದಲ್ಲಿ  192 ಮಿಮೀ ಮಳೆಯಾದರೆ ಬಾಳಿಲದಲ್ಲಿ  159 ಮಿಮೀ ಮಳೆಯಾಗಿತ್ತು. ಕಡಬದಲ್ಲಿ 108 ಮಿಮೀ ಮಳೆಯಾಗಿದೆ. ಈಗಲೂ ಮಳೆ ಸುರಿಯುತ್ತಿದ್ದು ಹೊಳೆ, ನದಿಗಳು ತುಂಬಿ ಹರಿಯುತ್ತಿವೆ.

Advertisement

 

ಕರಾವಳಿ ತೀರದ ಪ್ರದೇಶದಲ್ಲಿ ಮಳೆಯ ಪ್ರಭಾವ

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ನದಿ ಮತ್ತು ಪರಿಸರ” ಶುದ್ಧತೆ ಉಳಿಸಿಕೊಳ್ಳಬೇಕಾದರೆ ಭಾವನಾತ್ಮಕವಾಗಿ ಅಷ್ಟೇ ಕನೆಕ್ಟ್‌ ಆಗಬೇಕಾದ್ದಲ್ಲ…

ಮಹಾಕುಂಭ ಮೇಳದ ಮೂಲಕ ಹೊಸದೊಂದು ಸಂಕಲ್ಪವನ್ನು ಜನರು ಮಾಡಬೇಕು. ಈ ಬಾರಿ ಕುಂಭಮೇಳದಲ್ಲಿ…

11 hours ago

ದೇಶದ ಆರ್ಥಿಕತೆಗೆ ಕೃಷಿ ಕ್ಷೇತ್ರದ ಕೊಡುಗೆ ಅಪಾರ | ಸರ್ವೇ ಪ್ರಕಾರ ಜಿಡಿಪಿ ದರಕ್ಕೆ ಕೃಷಿ ಕ್ಷೇತ್ರದ ಕೊಡುಗೆ ಶೇ.16 |

ಕೃಷಿ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ಸೃಷ್ಠಿಸಲು ಹಾಗೂ ಗ್ರಾಮೀಣ ಪ್ರದೇಶಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು…

13 hours ago

ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ 22 ಕೋಟಿ ರೂಪಾಯಿ ಬಿಡುಗಡೆ | ರೈಲ್ವೆ ಬ್ಯಾರಿಕೇಡ್ ನಿರ್ಮಾಣದ ಪ್ರಕ್ರಿಯೆಗೆ ಚಾಲನೆ

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ…

13 hours ago

ಮಹಾಕುಂಭಮೇಳ ಸಂಪನ್ನ | ಮಹಾಶಿವರಾತ್ರಿಯಂದು ಕೊನೆಯ ಪುಣ್ಯಸ್ನಾನ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭಮೇಳ ಶಿವರಾತ್ರಿಯಂದು(ಇಂದು) ಸಂಪನ್ನಗೊಳ್ಳಲಿದೆ.ಈ ಹಿನ್ನೆಲೆಯಲ್ಲಿ ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ…

13 hours ago

ಮಹಿಳಾ ಸ್ವಾವಲಂಬನೆಗೆ ಆದ್ಯತೆ | ಶಿವಮೊಗ್ಗದಲ್ಲಿ ‘ಅವ್ವ ಸಂತೆ’ ಆಯೋಜನೆ

ಶಿವಮೊಗ್ಗ ಜಿಲ್ಲೆಯ ಸಾಗರದ  ಜೀವನ್ಮುಖಿ ಸಂಘಟನೆ ಹಾಗೂ ಭೀಮನಕೋಟೆಯ ಚರಕ ಮಹಿಳಾ  ವಿವಿಧೋದ್ದೇಶ…

13 hours ago

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |

ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…

21 hours ago