ಸುಳ್ಯ: ಸೋಮವಾರ, ಮಂಗಳವಾರ ಎರಡೂ ದಿನವೂ ಭಾರೀ ಮಳೆಯಾಗಿದೆ. ನಾಳೆ ಹೇಗಿದೆ? ನಾಳೆಯೂ ಹವಾಮಾನ ಇಲಾಖೆಯ ಪ್ರಕಾರ ಉತ್ತಮ ಮಳೆಯಾಗಲಿದೆ. ಕರಾವಳಿ ಹಾಗೂ ಒಳನಾಡಿನಲ್ಲಿ ಉತ್ತಮ ಮಳೆಯಾಗಲಿದೆ.
ಹೀಗಾಗಿ ಕರಾವಳಿ ಜಿಲ್ಲೆಯಲ್ಲಿ , ಕೊಡಗು ಪ್ರದೇಶದಲ್ಲಿ ರೆಡ್ ಎಲರ್ಟ್ ಘೊಷಣೆ ಮಾಡಲಾಗಿದೆ. ರೆಡ್ ಎಲರ್ಟ್ ಎಂದರೆ ಎಲ್ಲಾ ರೀತಿಯಲ್ಲೂ ಸನ್ನದ್ಧವಾದ ಸ್ಥಿತಿ. ಶಾಲೆ ಕಾಲೇಜುಗಳಿಗೆ ರಜೆ ನೀಡುವುದು ಹಾಗೂ ಗಂಜಿಕೇಂದ್ರದಿಂದ ತೊಡಗಿ ಅಗತ್ಯ ಇದ್ದ ಕಡೆ ಸ್ಥಳಾಂತರವರೆಗೂ ಸಿದ್ಧತೆ ನಡೆಸುವುದು ಇದರಲ್ಲಿ ಒಳಗೊಂಡಿದೆ. ಹೀಗಾಗಿ ಎಲ್ಲರೂ ನಾಳೆಯ ದಿನವೂ ಭಾರೀ ಮಳೆಯ ನಿರೀಕ್ಷೆಯಲ್ಲಿಯೇ ಸಿದ್ಧತೆ ಮಾಡಿಕೊಳ್ಳಬೇಕಾಗಿದೆ.
ಕೊಡಗು ಜಿಲ್ಲೆಯಲ್ಲಿ ಆ.5ರಿಂದ 7ರ ಬೆಳಗಿನವರೆಗೆ 115.6ಮಿ.ಮೀ.ನಿಂದ 204.4.ಮಿ.ಮೀ.ನಷ್ಟು ಮಳೆಯಾಗಲಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು , ಇದೀಗ ರೆಡ್ ಅಲರ್ಟ್ ಘೋಷಿಸಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ರೆಡ್ ಅಲರ್ಟ್ ಘೊಷಣೆ ಮಾಡಲಾಗಿದೆ. ಗೋವಾದಿಂದ ಕರಾವಳಿ ತೀರ ಕೇರಳದವರೆಗೆ ಮಳೆ ಕಾಡಲಿದೆ.
ಇದೇ ಸಂದರ್ಭ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದ್ದು ಇದರ ಪರಿಣಾಮವೂ ಕಾಡಲಿದೆ.
ಕಳೆದ 24 ಗಂಟೆಯಲ್ಲಿ ಗುತ್ತಿಗಾರು ಪ್ರದೇಶದಲ್ಲಿ 192 ಮಿಮೀ ಮಳೆಯಾದರೆ ಬಾಳಿಲದಲ್ಲಿ 159 ಮಿಮೀ ಮಳೆಯಾಗಿತ್ತು. ಕಡಬದಲ್ಲಿ 108 ಮಿಮೀ ಮಳೆಯಾಗಿದೆ. ಈಗಲೂ ಮಳೆ ಸುರಿಯುತ್ತಿದ್ದು ಹೊಳೆ, ನದಿಗಳು ತುಂಬಿ ಹರಿಯುತ್ತಿವೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…