ಸುಳ್ಯ: ಸೋಮವಾರ, ಮಂಗಳವಾರ ಎರಡೂ ದಿನವೂ ಭಾರೀ ಮಳೆಯಾಗಿದೆ. ನಾಳೆ ಹೇಗಿದೆ? ನಾಳೆಯೂ ಹವಾಮಾನ ಇಲಾಖೆಯ ಪ್ರಕಾರ ಉತ್ತಮ ಮಳೆಯಾಗಲಿದೆ. ಕರಾವಳಿ ಹಾಗೂ ಒಳನಾಡಿನಲ್ಲಿ ಉತ್ತಮ ಮಳೆಯಾಗಲಿದೆ.
ಹೀಗಾಗಿ ಕರಾವಳಿ ಜಿಲ್ಲೆಯಲ್ಲಿ , ಕೊಡಗು ಪ್ರದೇಶದಲ್ಲಿ ರೆಡ್ ಎಲರ್ಟ್ ಘೊಷಣೆ ಮಾಡಲಾಗಿದೆ. ರೆಡ್ ಎಲರ್ಟ್ ಎಂದರೆ ಎಲ್ಲಾ ರೀತಿಯಲ್ಲೂ ಸನ್ನದ್ಧವಾದ ಸ್ಥಿತಿ. ಶಾಲೆ ಕಾಲೇಜುಗಳಿಗೆ ರಜೆ ನೀಡುವುದು ಹಾಗೂ ಗಂಜಿಕೇಂದ್ರದಿಂದ ತೊಡಗಿ ಅಗತ್ಯ ಇದ್ದ ಕಡೆ ಸ್ಥಳಾಂತರವರೆಗೂ ಸಿದ್ಧತೆ ನಡೆಸುವುದು ಇದರಲ್ಲಿ ಒಳಗೊಂಡಿದೆ. ಹೀಗಾಗಿ ಎಲ್ಲರೂ ನಾಳೆಯ ದಿನವೂ ಭಾರೀ ಮಳೆಯ ನಿರೀಕ್ಷೆಯಲ್ಲಿಯೇ ಸಿದ್ಧತೆ ಮಾಡಿಕೊಳ್ಳಬೇಕಾಗಿದೆ.
ಕೊಡಗು ಜಿಲ್ಲೆಯಲ್ಲಿ ಆ.5ರಿಂದ 7ರ ಬೆಳಗಿನವರೆಗೆ 115.6ಮಿ.ಮೀ.ನಿಂದ 204.4.ಮಿ.ಮೀ.ನಷ್ಟು ಮಳೆಯಾಗಲಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು , ಇದೀಗ ರೆಡ್ ಅಲರ್ಟ್ ಘೋಷಿಸಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ರೆಡ್ ಅಲರ್ಟ್ ಘೊಷಣೆ ಮಾಡಲಾಗಿದೆ. ಗೋವಾದಿಂದ ಕರಾವಳಿ ತೀರ ಕೇರಳದವರೆಗೆ ಮಳೆ ಕಾಡಲಿದೆ.
ಇದೇ ಸಂದರ್ಭ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದ್ದು ಇದರ ಪರಿಣಾಮವೂ ಕಾಡಲಿದೆ.
ಕಳೆದ 24 ಗಂಟೆಯಲ್ಲಿ ಗುತ್ತಿಗಾರು ಪ್ರದೇಶದಲ್ಲಿ 192 ಮಿಮೀ ಮಳೆಯಾದರೆ ಬಾಳಿಲದಲ್ಲಿ 159 ಮಿಮೀ ಮಳೆಯಾಗಿತ್ತು. ಕಡಬದಲ್ಲಿ 108 ಮಿಮೀ ಮಳೆಯಾಗಿದೆ. ಈಗಲೂ ಮಳೆ ಸುರಿಯುತ್ತಿದ್ದು ಹೊಳೆ, ನದಿಗಳು ತುಂಬಿ ಹರಿಯುತ್ತಿವೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…