ಸುಳ್ಯ: ಸೋಮವಾರ, ಮಂಗಳವಾರ ಎರಡೂ ದಿನವೂ ಭಾರೀ ಮಳೆಯಾಗಿದೆ. ನಾಳೆ ಹೇಗಿದೆ? ನಾಳೆಯೂ ಹವಾಮಾನ ಇಲಾಖೆಯ ಪ್ರಕಾರ ಉತ್ತಮ ಮಳೆಯಾಗಲಿದೆ. ಕರಾವಳಿ ಹಾಗೂ ಒಳನಾಡಿನಲ್ಲಿ ಉತ್ತಮ ಮಳೆಯಾಗಲಿದೆ.
ಹೀಗಾಗಿ ಕರಾವಳಿ ಜಿಲ್ಲೆಯಲ್ಲಿ , ಕೊಡಗು ಪ್ರದೇಶದಲ್ಲಿ ರೆಡ್ ಎಲರ್ಟ್ ಘೊಷಣೆ ಮಾಡಲಾಗಿದೆ. ರೆಡ್ ಎಲರ್ಟ್ ಎಂದರೆ ಎಲ್ಲಾ ರೀತಿಯಲ್ಲೂ ಸನ್ನದ್ಧವಾದ ಸ್ಥಿತಿ. ಶಾಲೆ ಕಾಲೇಜುಗಳಿಗೆ ರಜೆ ನೀಡುವುದು ಹಾಗೂ ಗಂಜಿಕೇಂದ್ರದಿಂದ ತೊಡಗಿ ಅಗತ್ಯ ಇದ್ದ ಕಡೆ ಸ್ಥಳಾಂತರವರೆಗೂ ಸಿದ್ಧತೆ ನಡೆಸುವುದು ಇದರಲ್ಲಿ ಒಳಗೊಂಡಿದೆ. ಹೀಗಾಗಿ ಎಲ್ಲರೂ ನಾಳೆಯ ದಿನವೂ ಭಾರೀ ಮಳೆಯ ನಿರೀಕ್ಷೆಯಲ್ಲಿಯೇ ಸಿದ್ಧತೆ ಮಾಡಿಕೊಳ್ಳಬೇಕಾಗಿದೆ.
ಕೊಡಗು ಜಿಲ್ಲೆಯಲ್ಲಿ ಆ.5ರಿಂದ 7ರ ಬೆಳಗಿನವರೆಗೆ 115.6ಮಿ.ಮೀ.ನಿಂದ 204.4.ಮಿ.ಮೀ.ನಷ್ಟು ಮಳೆಯಾಗಲಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು , ಇದೀಗ ರೆಡ್ ಅಲರ್ಟ್ ಘೋಷಿಸಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ರೆಡ್ ಅಲರ್ಟ್ ಘೊಷಣೆ ಮಾಡಲಾಗಿದೆ. ಗೋವಾದಿಂದ ಕರಾವಳಿ ತೀರ ಕೇರಳದವರೆಗೆ ಮಳೆ ಕಾಡಲಿದೆ.
ಇದೇ ಸಂದರ್ಭ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದ್ದು ಇದರ ಪರಿಣಾಮವೂ ಕಾಡಲಿದೆ.
ಕಳೆದ 24 ಗಂಟೆಯಲ್ಲಿ ಗುತ್ತಿಗಾರು ಪ್ರದೇಶದಲ್ಲಿ 192 ಮಿಮೀ ಮಳೆಯಾದರೆ ಬಾಳಿಲದಲ್ಲಿ 159 ಮಿಮೀ ಮಳೆಯಾಗಿತ್ತು. ಕಡಬದಲ್ಲಿ 108 ಮಿಮೀ ಮಳೆಯಾಗಿದೆ. ಈಗಲೂ ಮಳೆ ಸುರಿಯುತ್ತಿದ್ದು ಹೊಳೆ, ನದಿಗಳು ತುಂಬಿ ಹರಿಯುತ್ತಿವೆ.
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…
ಮಲೆನಾಡಿನ ಅಡಿಕೆ ತೋಟ ಮಣ್ಣಿನಲ್ಲಿ ಕ್ಯಾಲ್ಸಿಯಂ-ಮೆಗ್ನೀಷಿಯಂ ಕೊರತೆ ಪತ್ತೆ. ತೀರ್ಥಹಳ್ಳಿ ಪ್ರದೇಶದಲ್ಲಿ ಪೋಷಕಾಂಶ…
ಕೊಬ್ಬರಿ ಎಣ್ಣೆ ಮತ್ತು ಕೋಪರಾ ಬೆಲೆಗಳು ಹೆಚ್ಚಿದ ಉತ್ಪಾದನೆ, ಕಡಿಮೆಯಾದ ಬೇಡಿಕೆ ಮತ್ತು…
ಬಿಸಿಗಾಳಿಯಿಂದ ಬೆಳೆ ಹಾನಿಯಾಗಿದ್ದು, ಆಂಧ್ರಪ್ರದೇಶದಲ್ಲಿ ತರಕಾರಿ ಬೆಲೆಗಳು 50% ಏರಿಕೆಯಾಗಿವೆ. ಇದರ ಪರಿಣಾಮವಾಗಿ…
ಅಸ್ಸಾಂ ರಾಜ್ಯದಲ್ಲಿ ಚಹಾ ರೈತರು ಹೆಚ್ಚುವರಿ ಆದಾಯಕ್ಕಾಗಿ ಕಪ್ಪು ಮೆಣಸು ಬೆಳೆ ಬೆಳೆಸಲು…
ಅಡಿಕೆ ಸುಂಕ ರಹಿತ ಆಮದು ದುರುಪಯೋಗ ಪ್ರಕರಣದಲ್ಲಿ ಹೈಕೋರ್ಟ್ ಮೇಲ್ಮನವಿಗಳನ್ನು ವಜಾಗೊಳಿಸಿದೆ. ₹20…