ಬೆಳ್ಳಾರೆ: ಸಮಸ್ತ ಭದ್ರವಾಗಿ ನೆಲೆಯಾಗಲು ನಮ್ಮ ಅವಶ್ಯಕತೆಯಿರುವುದಿಲ್ಲ. ನಮ್ಮ ನೆಲೆಯಾಗಬೇಕಾದರೆ ಸಮಸ್ತದ ಅಗತ್ಯವಿದೆ. ನಾವೆಲ್ಲರೂ ಶಂಸುಲ್ ಉಲಾಮರ ಅನುಯಾಯಿಗಳಾದರೆ ಏಳಿಗೆ ಇದೆ ಎಂದು ಅಡ್ವಕೇಟ್ ಹನೀಫ್ ಹುದವಿ ದೇಲಂಪಾಡಿ ಹೇಳಿದರು.
ಬೆಳ್ಳಾರೆಯಲ್ಲಿ ನಡೆದ ಶಂಸುಲ್ ಉಲಾಮಾ ನೂತನ ಟ್ರಸ್ಟ್ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಭಾಷಣಕಾರರಾಗಿ ಅವರು ಮಾತನಾಡಿದರು. ಟ್ರಸ್ಟಿನ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಅಹ್ಮದ್ ಉದ್ಘಾಟಿಸಿದರು. ಎಸ್ಕೆಎಸ್ಎಸ್ಎಫ್ ಜಿಲ್ಲಾ ಕೋಶಾಧಿಕಾರಿ ಅಮೀರ್ ತಂಙಳ್ ದುವಾಃ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಇತ್ತೀಚೆಗೆ ಮರಣಹೊಂದಿದ ಆಲಿ ಮೇಸ್ತ್ರಿ ಕುಟುಂಬಕ್ಕೆ 50,000 ರೂಪಾಯಿಗಳ ಧನಸಹಾಯವನ್ನು ಮಾಡಲಾಯಿತು. ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಅಹ್ಮದ್ ಅವರನ್ನು, ಅಬ್ದುಲ್ ಹಾಜಿ ಬಾಯಂಬಾಡಿ ಹಾಗು ದಕ್ಷಿಣ ಕನ್ನಡ ಜಿಲ್ಲಾ ವಿಖಾಯ ತಂಡದ ಸದಸ್ಯರಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟಿನ ಸ್ಥಾಪಕಾಧ್ಯಕ್ಷ ಯು.ಹೆಚ್ ಅಬೂಬಕ್ಕರ್ ವಹಿಸಿದರು. ವೇದಿಕೆಯಲ್ಲಿ ಬಾಳಿಲ ಮಸೀದಿಯ ಅಧ್ಯಕ್ಷ ಹಾಜಿ.ಪಿ ಇಸಾಖ್ ಸಾಹೇಬ್, ರಶೀದ್ ಹಾಜಿ ಪರ್ಲಡ್ಕ, ಇಬ್ರಾಹಿಂ ಕತ್ತರ್ ಮಂಡೇಕೋಲು, ನೂರುಲ್ ಹುದಾ ಅಧ್ಯಕ್ಷ ಬುಶ್ರಾ ಅಬ್ದುಲ್ ಅಝೀಝ್, ದಕ್ಷಿಣ ಕನ್ನಡ ವಿಖಾಯ ಅಧ್ಯಕ್ಷ ಅಶ್ರಫ್ ಶೇಡಿಗುಂಡಿ, ಜಿಲ್ಲಾ ಎಸ್ಕೆ.ಎಸ್ಎಸ್ಎಫ್ ಸಂಘಟನಾ ಕಾರ್ಯದರ್ಶಿ ಸಿದ್ದಿಕ್ ಬಂಟ್ವಾಳ, ಯಾಕೂಬ್ ಖಾಸ್, ಶಾಫಿ ಇರ್ಫಾನಿ ಕಕ್ಕಿಂಜೆ, ಬೆಳ್ಳಾರೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮುಸ್ತಫಾ ಬೆಳ್ಳಾರೆ, ಸದಸ್ಯ ಆರಿಫ್ ಬೆಳ್ಳಾರೆ, ಹಾಜಿ ಮಹಮ್ಮದ್ ಇಂಜಿನಿಯರ್ ಬೆಳ್ಳಾರೆ, ಝಕರಿಯಾ ಜುಮಾ ಮಸೀದಿ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ.ಪಿ, ಸುಳ್ಯ ತಾಲೂಕು ವಿಖಾಯ ಮೇಲ್ವಿಚಾರಕ ತಾಜುದ್ದೀನ್ ಟರ್ಲಿ ಉಪಸ್ಥಿತರಿದ್ದರು.
ಎಸ್ಕೆ.ಎಸ್ಎಸ್ಎಫ್ ವಲಯಾಧ್ಯಕ್ಷ ಹಸನ್ ಅರ್ಶದಿ ಬೆಳ್ಳಾರೆ ಸ್ವಾಗತಿಸಿದರು. ಎಸ್ಕೆ.ಎಸ್ಎಸ್ಎಫ್ ಜಿಲ್ಲಾಧ್ಯಕ್ಷ ಖಾಸಿಂ ದಾರಿಮಿ ಪ್ರಸ್ತಾವಿಸಿದರು. ಎಸ್ಕೆ.ಎಸ್ಎಸ್ಎಫ್ ಜಿಲ್ಲಾ ಸಂಚಾಲಕ ಕೆ.ಎಂ ಇಕ್ಬಾಲ್ ಬಾಳಿಲ ಕಾರ್ಯಕ್ರಮ ನಿರೂಪಿಸಿದರು.
ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…
ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ…
ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…