Advertisement
ಸುದ್ದಿಗಳು

ನಾವು ನೆಲೆಯಾಗಬೇಕಾದರೆ ಸಮಸ್ತದ ಅಗತ್ಯ ಇದೆ

Share

ಬೆಳ್ಳಾರೆ: ಸಮಸ್ತ ಭದ್ರವಾಗಿ ನೆಲೆಯಾಗಲು ನಮ್ಮ ಅವಶ್ಯಕತೆಯಿರುವುದಿಲ್ಲ. ನಮ್ಮ ನೆಲೆಯಾಗಬೇಕಾದರೆ ಸಮಸ್ತದ ಅಗತ್ಯವಿದೆ. ನಾವೆಲ್ಲರೂ ಶಂಸುಲ್ ಉಲಾಮರ ಅನುಯಾಯಿಗಳಾದರೆ ಏಳಿಗೆ ಇದೆ ಎಂದು ಅಡ್ವಕೇಟ್ ಹನೀಫ್ ಹುದವಿ ದೇಲಂಪಾಡಿ ಹೇಳಿದರು.
ಬೆಳ್ಳಾರೆಯಲ್ಲಿ ನಡೆದ ಶಂಸುಲ್ ಉಲಾಮಾ ನೂತನ ಟ್ರಸ್ಟ್ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಭಾಷಣಕಾರರಾಗಿ ಅವರು ಮಾತನಾಡಿದರು. ಟ್ರಸ್ಟಿನ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಅಹ್ಮದ್ ಉದ್ಘಾಟಿಸಿದರು. ಎಸ್‍ಕೆಎಸ್‍ಎಸ್‍ಎಫ್ ಜಿಲ್ಲಾ ಕೋಶಾಧಿಕಾರಿ ಅಮೀರ್ ತಂಙಳ್ ದುವಾಃ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಇತ್ತೀಚೆಗೆ ಮರಣಹೊಂದಿದ ಆಲಿ ಮೇಸ್ತ್ರಿ ಕುಟುಂಬಕ್ಕೆ 50,000 ರೂಪಾಯಿಗಳ ಧನಸಹಾಯವನ್ನು ಮಾಡಲಾಯಿತು. ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಅಹ್ಮದ್ ಅವರನ್ನು, ಅಬ್ದುಲ್ ಹಾಜಿ ಬಾಯಂಬಾಡಿ ಹಾಗು ದಕ್ಷಿಣ ಕನ್ನಡ ಜಿಲ್ಲಾ ವಿಖಾಯ ತಂಡದ ಸದಸ್ಯರಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟಿನ ಸ್ಥಾಪಕಾಧ್ಯಕ್ಷ ಯು.ಹೆಚ್ ಅಬೂಬಕ್ಕರ್ ವಹಿಸಿದರು. ವೇದಿಕೆಯಲ್ಲಿ ಬಾಳಿಲ ಮಸೀದಿಯ ಅಧ್ಯಕ್ಷ ಹಾಜಿ.ಪಿ ಇಸಾಖ್ ಸಾಹೇಬ್, ರಶೀದ್ ಹಾಜಿ ಪರ್ಲಡ್ಕ, ಇಬ್ರಾಹಿಂ ಕತ್ತರ್ ಮಂಡೇಕೋಲು, ನೂರುಲ್ ಹುದಾ ಅಧ್ಯಕ್ಷ ಬುಶ್ರಾ ಅಬ್ದುಲ್ ಅಝೀಝ್, ದಕ್ಷಿಣ ಕನ್ನಡ ವಿಖಾಯ ಅಧ್ಯಕ್ಷ ಅಶ್ರಫ್ ಶೇಡಿಗುಂಡಿ, ಜಿಲ್ಲಾ ಎಸ್‍ಕೆ.ಎಸ್‍ಎಸ್‍ಎಫ್ ಸಂಘಟನಾ ಕಾರ್ಯದರ್ಶಿ ಸಿದ್ದಿಕ್ ಬಂಟ್ವಾಳ, ಯಾಕೂಬ್ ಖಾಸ್, ಶಾಫಿ ಇರ್ಫಾನಿ ಕಕ್ಕಿಂಜೆ, ಬೆಳ್ಳಾರೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮುಸ್ತಫಾ ಬೆಳ್ಳಾರೆ, ಸದಸ್ಯ ಆರಿಫ್ ಬೆಳ್ಳಾರೆ, ಹಾಜಿ ಮಹಮ್ಮದ್ ಇಂಜಿನಿಯರ್ ಬೆಳ್ಳಾರೆ, ಝಕರಿಯಾ ಜುಮಾ ಮಸೀದಿ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ.ಪಿ, ಸುಳ್ಯ ತಾಲೂಕು ವಿಖಾಯ ಮೇಲ್ವಿಚಾರಕ ತಾಜುದ್ದೀನ್ ಟರ್ಲಿ ಉಪಸ್ಥಿತರಿದ್ದರು.
ಎಸ್‍ಕೆ.ಎಸ್‍ಎಸ್‍ಎಫ್ ವಲಯಾಧ್ಯಕ್ಷ ಹಸನ್ ಅರ್ಶದಿ ಬೆಳ್ಳಾರೆ ಸ್ವಾಗತಿಸಿದರು. ಎಸ್‍ಕೆ.ಎಸ್‍ಎಸ್‍ಎಫ್ ಜಿಲ್ಲಾಧ್ಯಕ್ಷ ಖಾಸಿಂ ದಾರಿಮಿ ಪ್ರಸ್ತಾವಿಸಿದರು. ಎಸ್‍ಕೆ.ಎಸ್‍ಎಸ್‍ಎಫ್ ಜಿಲ್ಲಾ ಸಂಚಾಲಕ ಕೆ.ಎಂ ಇಕ್ಬಾಲ್ ಬಾಳಿಲ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

4 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

4 hours ago

ಹವಾಮಾನ ವರದಿ | 24-02-2023 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

5 hours ago

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago