Advertisement
The Rural Mirror ಫಾಲೋಅಪ್

“ನಾವು ಹೋಗುವುದು ಎಲ್ಲಿಗೆ….”, ನೀವೇ ಹೇಳಿ….? ಮೊಣ್ಣಂಗೇರಿ ಜನರ ಪ್ರಶ್ನೆ

Share

ಸಂಪಾಜೆ : ಹೌದು, ನೀವು ಹೇಳ್ತೀರಿ , ನಿಜ. ನಮ್ಮ ಭೂಮಿ , ನಮ್ಮ ದನ ಕರುಗಳು , ನಮ್ಮ ನಾಯಿ ಬಿಟ್ಟು ನಾವು ಮಾತ್ರಾ ಎಲ್ಲಿಗೆ ಹೋಗುವುದು ಹೇಳಿ…?. ಅವನ್ನೆಲ್ಲಾ ಕರೆದುಕೊಂಡು ಹೋಗೋಣವೇ, ಬಿಟ್ಟು ಹೋಗವೇ…? ಹೀಗಂತ ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನು  ಕೇಳುತ್ತಾ ಭೂಮಿಯ, ಕೃಷಿಯ ಜೊತೆಗಿನ ಒಟನಾಟವನ್ನು ಬಿಚ್ಚಿಡುತ್ತಾರೆ ಮೊಣ್ಣಂಗೇರಿಯ ಪಾರ್ವತಿ.

 

 

ಮೊಣ್ಣಂಗೇರಿಯ ವಿವಿಧ ಮನೆಗಳಿಗೆ “ಸುಳ್ಯನ್ಯೂಸ್.ಕಾಂ” ತಂಡ ಭೇಟಿ  ನೀಡಿ ಮಾತುಕತೆ ನಡೆಸುತ್ತಿದ್ದಾಗ ಕೇಳಿಬಂದ ಮಾತುಗಳು ಇದು. ಇದು ಪಾರ್ವತಿ ಅವರ ಒಬ್ಬರ ಮಾತಲ್ಲ. ಎಲ್ಲಾ ಮನೆಯಲ್ಲೂ ಇದೇ ಮಾತು. ಕಳೆದ ಅನೇಕ ವರ್ಷಗಳಿಂದ ಇಲ್ಲಿ ವಾಸವಿದ್ದು ಈಗ ಮಳೆ ಬರುವಾಗ ಹೋಗಿ ಎಂತ ಹೇಳುವುದು  ಸುಲಭ ನಿಜ. ಜೀವ ಉಳಿಯಬೇಕು ನಿಜ. ಆದರೆ ನಾವು ಬೆವರು ಸುರಿದ ಬೆಳೆದ ಕೃಷಿ, ನಮ್ಮ ಪ್ರೀತಿಯ ದನ ಇದರ ಮೇಲೆ ಪ್ರೀತಿ ಇದೆ, ಹೀಗಾಗಿ ಸುಲಭವಾಗಿ ಎದ್ದುಬಿಡಿ ಅಂತ ಹೇಳಿದರೆ ಹೇಗೆ ಎನ್ನವುದು  ಅವರ ಮಾತಿನ ಸಾರಾಂಶ.

 

ನಿಜ, ಮೊಣ್ಣಂಗೇರಿ ಪ್ರದೇಶದಲ್ಲಿ ಮೊದಲ ಮಳೆಗೇ ಭಯ ಶುರುವಾಗಿದೆ ಹೌದು. ಆದರೆ ಮೊಣ್ಣಂಗೇರಿ ಪ್ರದೇಶ ಸುಮಾರು 188 ಮನೆಗಳಿಗೆ ಹಾನಿಯಾಗಿದೆ. ಇದರಲ್ಲಿ ಈ ಬಾರಿ ಸುಮಾರು 90 ಮನೆಗಳ ಸ್ಥಳಾಂತರ ಆಗಲೇಬೇಕು. ಆದರೆ ಅವರೆಲ್ಲರ ಪ್ರಶ್ನೆ, “ಎಲ್ಲಿಗೆ ಹೋಗುವುದು”.

ಕಳೆದ ವರ್ಷದ ಭಯಾನಕ ಸ್ಥಿತಿ ಮತ್ತೆ ಮರುಕಳಿಸಿದರೆ ?  ಎಂಬ ಪ್ರಶ್ನೆಯ ಜೊತೆಗೇ ಮೊನ್ನೆಯಿಂದ ಭೂಮಿಯ ಅಡಿಯಲ್ಲಿ ಬೆಟ್ಟ ಗುಡ್ಡಗಳಿಂದ ಭಯಾನಕ ಶಬ್ದ ಕೇಳಿ ಬರುತ್ತಿತ್ತು ಎನ್ನುತ್ತಾರೆ ಮೊಣ್ಣಂಗೇರಿಯ ವಾರಿಜಾ ವೆಂಕಪ್ಪ. ನಮ್ಮದೆಲ್ಲವನ್ನೂ ಬಿಟ್ಟು ಮತ್ತೆ ಮನೆ ಬಿಟ್ಟು ಹೋಗಾಬೇಕಾದ ಸ್ಥಿತಿ ಬರಬಹುದು ಎಂಬ ಆತಂಕ ಇದೆ. ಆದರೆ ಹೋಗುವುದಾದರು ಎಲ್ಲಿಗೆ ಎಂಬ ಪ್ರಶ್ನೆ ಕಾಡುತಿದೆ ಎನ್ನುತ್ತಾರೆ ಅವರು.

ಹೌದು ದೂರದಲ್ಲಿ ಕುಳಿತಿರುವ ಎಲ್ಲರಿಗೂ ಒಂದೇ ವಾಕ್ಯ ,” ಎಲ್ಲಾ ಬಿಟ್ಟು ಬನ್ನಿ…” , ಆದರೆ ಅಲ್ಲಿ ಕುಳಿತಿರುವ ಮಂದಿಯ ಭಾವನೆಗೆ ಬೆಲೆ ಕಟ್ಟಲು ಸಾಧ್ಯವೇ ?.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago