Advertisement
The Rural Mirror ಫಾಲೋಅಪ್

“ನಾವು ಹೋಗುವುದು ಎಲ್ಲಿಗೆ….”, ನೀವೇ ಹೇಳಿ….? ಮೊಣ್ಣಂಗೇರಿ ಜನರ ಪ್ರಶ್ನೆ

Share

ಸಂಪಾಜೆ : ಹೌದು, ನೀವು ಹೇಳ್ತೀರಿ , ನಿಜ. ನಮ್ಮ ಭೂಮಿ , ನಮ್ಮ ದನ ಕರುಗಳು , ನಮ್ಮ ನಾಯಿ ಬಿಟ್ಟು ನಾವು ಮಾತ್ರಾ ಎಲ್ಲಿಗೆ ಹೋಗುವುದು ಹೇಳಿ…?. ಅವನ್ನೆಲ್ಲಾ ಕರೆದುಕೊಂಡು ಹೋಗೋಣವೇ, ಬಿಟ್ಟು ಹೋಗವೇ…? ಹೀಗಂತ ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನು  ಕೇಳುತ್ತಾ ಭೂಮಿಯ, ಕೃಷಿಯ ಜೊತೆಗಿನ ಒಟನಾಟವನ್ನು ಬಿಚ್ಚಿಡುತ್ತಾರೆ ಮೊಣ್ಣಂಗೇರಿಯ ಪಾರ್ವತಿ.

 

 

ಮೊಣ್ಣಂಗೇರಿಯ ವಿವಿಧ ಮನೆಗಳಿಗೆ “ಸುಳ್ಯನ್ಯೂಸ್.ಕಾಂ” ತಂಡ ಭೇಟಿ  ನೀಡಿ ಮಾತುಕತೆ ನಡೆಸುತ್ತಿದ್ದಾಗ ಕೇಳಿಬಂದ ಮಾತುಗಳು ಇದು. ಇದು ಪಾರ್ವತಿ ಅವರ ಒಬ್ಬರ ಮಾತಲ್ಲ. ಎಲ್ಲಾ ಮನೆಯಲ್ಲೂ ಇದೇ ಮಾತು. ಕಳೆದ ಅನೇಕ ವರ್ಷಗಳಿಂದ ಇಲ್ಲಿ ವಾಸವಿದ್ದು ಈಗ ಮಳೆ ಬರುವಾಗ ಹೋಗಿ ಎಂತ ಹೇಳುವುದು  ಸುಲಭ ನಿಜ. ಜೀವ ಉಳಿಯಬೇಕು ನಿಜ. ಆದರೆ ನಾವು ಬೆವರು ಸುರಿದ ಬೆಳೆದ ಕೃಷಿ, ನಮ್ಮ ಪ್ರೀತಿಯ ದನ ಇದರ ಮೇಲೆ ಪ್ರೀತಿ ಇದೆ, ಹೀಗಾಗಿ ಸುಲಭವಾಗಿ ಎದ್ದುಬಿಡಿ ಅಂತ ಹೇಳಿದರೆ ಹೇಗೆ ಎನ್ನವುದು  ಅವರ ಮಾತಿನ ಸಾರಾಂಶ.

 

ನಿಜ, ಮೊಣ್ಣಂಗೇರಿ ಪ್ರದೇಶದಲ್ಲಿ ಮೊದಲ ಮಳೆಗೇ ಭಯ ಶುರುವಾಗಿದೆ ಹೌದು. ಆದರೆ ಮೊಣ್ಣಂಗೇರಿ ಪ್ರದೇಶ ಸುಮಾರು 188 ಮನೆಗಳಿಗೆ ಹಾನಿಯಾಗಿದೆ. ಇದರಲ್ಲಿ ಈ ಬಾರಿ ಸುಮಾರು 90 ಮನೆಗಳ ಸ್ಥಳಾಂತರ ಆಗಲೇಬೇಕು. ಆದರೆ ಅವರೆಲ್ಲರ ಪ್ರಶ್ನೆ, “ಎಲ್ಲಿಗೆ ಹೋಗುವುದು”.

ಕಳೆದ ವರ್ಷದ ಭಯಾನಕ ಸ್ಥಿತಿ ಮತ್ತೆ ಮರುಕಳಿಸಿದರೆ ?  ಎಂಬ ಪ್ರಶ್ನೆಯ ಜೊತೆಗೇ ಮೊನ್ನೆಯಿಂದ ಭೂಮಿಯ ಅಡಿಯಲ್ಲಿ ಬೆಟ್ಟ ಗುಡ್ಡಗಳಿಂದ ಭಯಾನಕ ಶಬ್ದ ಕೇಳಿ ಬರುತ್ತಿತ್ತು ಎನ್ನುತ್ತಾರೆ ಮೊಣ್ಣಂಗೇರಿಯ ವಾರಿಜಾ ವೆಂಕಪ್ಪ. ನಮ್ಮದೆಲ್ಲವನ್ನೂ ಬಿಟ್ಟು ಮತ್ತೆ ಮನೆ ಬಿಟ್ಟು ಹೋಗಾಬೇಕಾದ ಸ್ಥಿತಿ ಬರಬಹುದು ಎಂಬ ಆತಂಕ ಇದೆ. ಆದರೆ ಹೋಗುವುದಾದರು ಎಲ್ಲಿಗೆ ಎಂಬ ಪ್ರಶ್ನೆ ಕಾಡುತಿದೆ ಎನ್ನುತ್ತಾರೆ ಅವರು.

ಹೌದು ದೂರದಲ್ಲಿ ಕುಳಿತಿರುವ ಎಲ್ಲರಿಗೂ ಒಂದೇ ವಾಕ್ಯ ,” ಎಲ್ಲಾ ಬಿಟ್ಟು ಬನ್ನಿ…” , ಆದರೆ ಅಲ್ಲಿ ಕುಳಿತಿರುವ ಮಂದಿಯ ಭಾವನೆಗೆ ಬೆಲೆ ಕಟ್ಟಲು ಸಾಧ್ಯವೇ ?.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago