Advertisement
The Rural Mirror ಫಾಲೋಅಪ್

“ನಾವು ಹೋಗುವುದು ಎಲ್ಲಿಗೆ….”, ನೀವೇ ಹೇಳಿ….? ಮೊಣ್ಣಂಗೇರಿ ಜನರ ಪ್ರಶ್ನೆ

Share

ಸಂಪಾಜೆ : ಹೌದು, ನೀವು ಹೇಳ್ತೀರಿ , ನಿಜ. ನಮ್ಮ ಭೂಮಿ , ನಮ್ಮ ದನ ಕರುಗಳು , ನಮ್ಮ ನಾಯಿ ಬಿಟ್ಟು ನಾವು ಮಾತ್ರಾ ಎಲ್ಲಿಗೆ ಹೋಗುವುದು ಹೇಳಿ…?. ಅವನ್ನೆಲ್ಲಾ ಕರೆದುಕೊಂಡು ಹೋಗೋಣವೇ, ಬಿಟ್ಟು ಹೋಗವೇ…? ಹೀಗಂತ ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನು  ಕೇಳುತ್ತಾ ಭೂಮಿಯ, ಕೃಷಿಯ ಜೊತೆಗಿನ ಒಟನಾಟವನ್ನು ಬಿಚ್ಚಿಡುತ್ತಾರೆ ಮೊಣ್ಣಂಗೇರಿಯ ಪಾರ್ವತಿ.

Advertisement
Advertisement

 

Advertisement

 

Advertisement

ಮೊಣ್ಣಂಗೇರಿಯ ವಿವಿಧ ಮನೆಗಳಿಗೆ “ಸುಳ್ಯನ್ಯೂಸ್.ಕಾಂ” ತಂಡ ಭೇಟಿ  ನೀಡಿ ಮಾತುಕತೆ ನಡೆಸುತ್ತಿದ್ದಾಗ ಕೇಳಿಬಂದ ಮಾತುಗಳು ಇದು. ಇದು ಪಾರ್ವತಿ ಅವರ ಒಬ್ಬರ ಮಾತಲ್ಲ. ಎಲ್ಲಾ ಮನೆಯಲ್ಲೂ ಇದೇ ಮಾತು. ಕಳೆದ ಅನೇಕ ವರ್ಷಗಳಿಂದ ಇಲ್ಲಿ ವಾಸವಿದ್ದು ಈಗ ಮಳೆ ಬರುವಾಗ ಹೋಗಿ ಎಂತ ಹೇಳುವುದು  ಸುಲಭ ನಿಜ. ಜೀವ ಉಳಿಯಬೇಕು ನಿಜ. ಆದರೆ ನಾವು ಬೆವರು ಸುರಿದ ಬೆಳೆದ ಕೃಷಿ, ನಮ್ಮ ಪ್ರೀತಿಯ ದನ ಇದರ ಮೇಲೆ ಪ್ರೀತಿ ಇದೆ, ಹೀಗಾಗಿ ಸುಲಭವಾಗಿ ಎದ್ದುಬಿಡಿ ಅಂತ ಹೇಳಿದರೆ ಹೇಗೆ ಎನ್ನವುದು  ಅವರ ಮಾತಿನ ಸಾರಾಂಶ.

Advertisement

 

ನಿಜ, ಮೊಣ್ಣಂಗೇರಿ ಪ್ರದೇಶದಲ್ಲಿ ಮೊದಲ ಮಳೆಗೇ ಭಯ ಶುರುವಾಗಿದೆ ಹೌದು. ಆದರೆ ಮೊಣ್ಣಂಗೇರಿ ಪ್ರದೇಶ ಸುಮಾರು 188 ಮನೆಗಳಿಗೆ ಹಾನಿಯಾಗಿದೆ. ಇದರಲ್ಲಿ ಈ ಬಾರಿ ಸುಮಾರು 90 ಮನೆಗಳ ಸ್ಥಳಾಂತರ ಆಗಲೇಬೇಕು. ಆದರೆ ಅವರೆಲ್ಲರ ಪ್ರಶ್ನೆ, “ಎಲ್ಲಿಗೆ ಹೋಗುವುದು”.

Advertisement

ಕಳೆದ ವರ್ಷದ ಭಯಾನಕ ಸ್ಥಿತಿ ಮತ್ತೆ ಮರುಕಳಿಸಿದರೆ ?  ಎಂಬ ಪ್ರಶ್ನೆಯ ಜೊತೆಗೇ ಮೊನ್ನೆಯಿಂದ ಭೂಮಿಯ ಅಡಿಯಲ್ಲಿ ಬೆಟ್ಟ ಗುಡ್ಡಗಳಿಂದ ಭಯಾನಕ ಶಬ್ದ ಕೇಳಿ ಬರುತ್ತಿತ್ತು ಎನ್ನುತ್ತಾರೆ ಮೊಣ್ಣಂಗೇರಿಯ ವಾರಿಜಾ ವೆಂಕಪ್ಪ. ನಮ್ಮದೆಲ್ಲವನ್ನೂ ಬಿಟ್ಟು ಮತ್ತೆ ಮನೆ ಬಿಟ್ಟು ಹೋಗಾಬೇಕಾದ ಸ್ಥಿತಿ ಬರಬಹುದು ಎಂಬ ಆತಂಕ ಇದೆ. ಆದರೆ ಹೋಗುವುದಾದರು ಎಲ್ಲಿಗೆ ಎಂಬ ಪ್ರಶ್ನೆ ಕಾಡುತಿದೆ ಎನ್ನುತ್ತಾರೆ ಅವರು.

ಹೌದು ದೂರದಲ್ಲಿ ಕುಳಿತಿರುವ ಎಲ್ಲರಿಗೂ ಒಂದೇ ವಾಕ್ಯ ,” ಎಲ್ಲಾ ಬಿಟ್ಟು ಬನ್ನಿ…” , ಆದರೆ ಅಲ್ಲಿ ಕುಳಿತಿರುವ ಮಂದಿಯ ಭಾವನೆಗೆ ಬೆಲೆ ಕಟ್ಟಲು ಸಾಧ್ಯವೇ ?.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |

ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …

46 mins ago

Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |

ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…

7 hours ago

ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |

ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…

8 hours ago

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?

ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…

2 days ago

ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!

ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…

2 days ago

ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ

ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…

2 days ago