Advertisement
ನಮ್ಮೂರ ಸುದ್ದಿ

ನಿಂತಿಕಲ್ಲಿನಲ್ಲಿ ಇರೇಸರ್ – ಕ್ಯಾಂಪಸ್ ಮೀಟ್

Share

ನಿಂತಿಕಲ್ಲು: ಎಸ್ಸೆಸ್ಸೆಫ್ ನಿಂತಿಕಲ್ಲು ಸೆಕ್ಟರ್ ಅಧೀನದಲ್ಲಿ ಕ್ಯಾಂಪಸ್ ವಿಂಗ್ ವತಿಯಿಂದ ಇರೇಸರ್ – ಕ್ಯಾಂಪಸ್ ಮೀಟ್  ಶನಿವಾರ ನಿಂತಿಕಲ್ಲಿನಲ್ಲಿ ನಡೆಯಿತು.

ಎಸ್ಸೆಸ್ಸೆಫ್ ನಿಂತಿಕಲ್ಲು ಸೆಕ್ಟರ್ ಅಧ್ಯಕ್ಷರಾದ ಜಬ್ಬಾರ್ ಹನೀಫಿ ಉದ್ಘಾಟಿಸಿದರು. ನಂತರ ಟಿ.ಎಂ ಅಬ್ದುರ್ರಹ್ಮಾನ್ ಸಖಾಫಿ ತಂಬಿನಮಕ್ಕಿ ಮೊದಲನೇ  ಅವಧಿಯಲ್ಲಿ  ಫಾತಿಹ ಎಂಬ ಸೂರತ್ ಅಲ್ – ಫಾತಿಹ ಪಾರಾಯಣ ಮಾಡುವುದರೊಂದಿಗೆ ಅದರ ಮಹತ್ವ ಮತ್ತು ಅರ್ಥವನ್ನು ಬಹಳ ಸವಿಸ್ತಾರವಾಗಿ ತಿಳಿಸಿದರು.

ಎರಡನೇ ಅವಧಿಯಲ್ಲಿ, ಡ್ರೀಮ್ಸ್ – ಜೀವನದ ಗುರಿ ಮತ್ತು ಉದ್ದೇಶಗಳ ಕುರಿತ ತರಬೇತಿಯನ್ನು ನಿಂತಿಕಲ್ಲು ಕ್ಯಾಂಪಸ್ ಕಾರ್ಯದರ್ಶಿ ರಹ್ಮಾನ್ ಎಣ್ಮೂರು ಅವರು ನಡೆಸಿದರು.

ನಂತರದ ಅವಧಿಯಲ್ಲಿ ಕ್ವಿಜ್ ರಂಝಾನ್ ಹಾಗೂ ಖುರ್’ಆನ್ ಕುರಿತ ರಸಪ್ರಶ್ನೆ ಸ್ಪರ್ಧೆಯನ್ನು ಸುಳ್ಯ ಡಿವಿಷನ್ ಕ್ಯಾಂಪಸ್ ಕಾರ್ಯದರ್ಶಿ ಖಲೀಲ್ ಝುಹ್ರಿ ನೆಕ್ಕಿಲ ಇವರು ನಡೆಸಿಕೊಟ್ಟರು.

ಉತ್ತಮ ತರಬೇತಿಗಳ ಮೂಲಕ ಈ ಕಾರ್ಯಕ್ರಮವು ವಿದ್ಯಾರ್ಥಿಗಳ ಮನಸ್ಸಲ್ಲಿ ಹೊಸ ಚೈತನ್ಯವನ್ನು ಮೂಡಿಸಿ, ಇಪ್ತಾರ್ ಕೂಟದ ಮೂಲಕ ಕಾರ್ಯಕ್ರಮವನ್ನು ಸಮಾಪ್ತಿಗೊಳಿಸಲಾಯಿತು.
ಕಾರ್ಯಕ್ರಮವನ್ನು ಎಸ್ಸೆಸ್ಸೆಫ್ ನಿಂತಿಕಲ್ಲು ಸೆಕ್ಟರ್ ಕಾರ್ಯದರ್ಶಿ ರಿಯಾಝ್ ನೆಕ್ಕಿಲ ಸ್ವಾಗತಿಸಿ ರೈಟ್ ಟೀಂ ಕಾರ್ಯಕರ್ತ ಶಿಹಾಬ್ ನೆಕ್ಕಿಲ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

7 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

8 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

10 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

15 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

15 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago