ನಿಂತಿಕಲ್ಲು: ಯೋಗ ದಿನಾಚರಣೆ ಅಂಗವಾಗಿ ನಿಂತಿಕಲ್ಲು ಕೆ ಯಸ್ ಗೌಡ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಯೋಗ ದಿನಾಚರಣೆ ಯನ್ನು ಆಚರಿಸಲಾಯಿತು . ಸಭಾದ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದ್ಯಕ್ಷರಾದ ಅಶೋಕ್ ಕುಮಾರ್ ಕೆ ಯಸ್ ವಹಿಸಿದ್ದರು.
ಸಂಸ್ಥೆಯ ಹಿರಿಯ ವಿದ್ಯಾರ್ಥಿ ಯೋಗಿಕ್ ಪದವೀಧರೆ ಅಪರ್ಣಾ ಕೆ.ಕೆ. ಕಾರ್ಯಕ್ರಮ ಉದ್ಘಾಟಿಸಿ, ಯೋಗದ ವಿಧಾನಗಳು ಮತ್ತು ಉಪಯೋಗಗಳ ಕುರಿತು ಮಾತನಾಡಿದರು.
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸದಾನಂದ ರೈ ಕೂವೆಂಜ ಪ್ರಾಸ್ತಾವಿಕ ಮಾತು ಗಳೊಂದಿಗೆ ಸ್ವಾಗತಿಸಿದರು. ಪ್ರಾಥಮಿಕ ಮತ್ತು ಪ್ರೌಢಶಾಲೆ ಮುಖ್ಯ ಶಿಕ್ಷಕರಾದ ಉಮೇಶ್ ಗೌಡ ಹೆಚ್. ಶುಭ ಹಾರೈಸಿದರು.
ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಗುರು ಪ್ರಸಾದ್ ಟಿ. ಧನ್ಯವಾದಗೈದರು.ಸಂಸ್ಥೆಯ ಕಾರ್ಯಕ್ರಮ ಅಧಿಕಾರಿ ಪ್ರಸನ್ನ ವೈ ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಮಿಥನ್ ವಿದ್ಯಾರ್ಥಿಗಳಿಗೆ ಯೋಗದ ವಿವಿಧ ಆಸನಗಳೊಂದಿಗೆ ನಿಯಮಗಳನ್ನು ವಿವರಿಸಿದರು. ಶಿಕ್ಷಕ ಅಜಿತ್ ಗೌಡ ಐವರ್ನಾಡು ಕಾರ್ಯಕ್ರಮ ನಿರೂಪಿಸಿದರು.
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…
ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…
ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 1 ಕಪ್. ಜಾರ್…
ಈಗಿನ ಹೆತ್ತವರ ಮಾತೇ ಹಾಗೆ. ನಾವು ಕಷ್ಟಪಟ್ಟಿದ್ದೇವೆ. ನಮ್ಮ ಮಕ್ಕಳು ಕಷ್ಟಪಡುವುದು ಬೇಡ.…