ನಿಂತಿಕಲ್ಲು: ಯೋಗ ದಿನಾಚರಣೆ ಅಂಗವಾಗಿ ನಿಂತಿಕಲ್ಲು ಕೆ ಯಸ್ ಗೌಡ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಯೋಗ ದಿನಾಚರಣೆ ಯನ್ನು ಆಚರಿಸಲಾಯಿತು . ಸಭಾದ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದ್ಯಕ್ಷರಾದ ಅಶೋಕ್ ಕುಮಾರ್ ಕೆ ಯಸ್ ವಹಿಸಿದ್ದರು.
ಸಂಸ್ಥೆಯ ಹಿರಿಯ ವಿದ್ಯಾರ್ಥಿ ಯೋಗಿಕ್ ಪದವೀಧರೆ ಅಪರ್ಣಾ ಕೆ.ಕೆ. ಕಾರ್ಯಕ್ರಮ ಉದ್ಘಾಟಿಸಿ, ಯೋಗದ ವಿಧಾನಗಳು ಮತ್ತು ಉಪಯೋಗಗಳ ಕುರಿತು ಮಾತನಾಡಿದರು.
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸದಾನಂದ ರೈ ಕೂವೆಂಜ ಪ್ರಾಸ್ತಾವಿಕ ಮಾತು ಗಳೊಂದಿಗೆ ಸ್ವಾಗತಿಸಿದರು. ಪ್ರಾಥಮಿಕ ಮತ್ತು ಪ್ರೌಢಶಾಲೆ ಮುಖ್ಯ ಶಿಕ್ಷಕರಾದ ಉಮೇಶ್ ಗೌಡ ಹೆಚ್. ಶುಭ ಹಾರೈಸಿದರು.
ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಗುರು ಪ್ರಸಾದ್ ಟಿ. ಧನ್ಯವಾದಗೈದರು.ಸಂಸ್ಥೆಯ ಕಾರ್ಯಕ್ರಮ ಅಧಿಕಾರಿ ಪ್ರಸನ್ನ ವೈ ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಮಿಥನ್ ವಿದ್ಯಾರ್ಥಿಗಳಿಗೆ ಯೋಗದ ವಿವಿಧ ಆಸನಗಳೊಂದಿಗೆ ನಿಯಮಗಳನ್ನು ವಿವರಿಸಿದರು. ಶಿಕ್ಷಕ ಅಜಿತ್ ಗೌಡ ಐವರ್ನಾಡು ಕಾರ್ಯಕ್ರಮ ನಿರೂಪಿಸಿದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…