ನಿಂತಿಕಲ್ಲು: ಯೋಗ ದಿನಾಚರಣೆ ಅಂಗವಾಗಿ ನಿಂತಿಕಲ್ಲು ಕೆ ಯಸ್ ಗೌಡ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಯೋಗ ದಿನಾಚರಣೆ ಯನ್ನು ಆಚರಿಸಲಾಯಿತು . ಸಭಾದ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದ್ಯಕ್ಷರಾದ ಅಶೋಕ್ ಕುಮಾರ್ ಕೆ ಯಸ್ ವಹಿಸಿದ್ದರು.
ಸಂಸ್ಥೆಯ ಹಿರಿಯ ವಿದ್ಯಾರ್ಥಿ ಯೋಗಿಕ್ ಪದವೀಧರೆ ಅಪರ್ಣಾ ಕೆ.ಕೆ. ಕಾರ್ಯಕ್ರಮ ಉದ್ಘಾಟಿಸಿ, ಯೋಗದ ವಿಧಾನಗಳು ಮತ್ತು ಉಪಯೋಗಗಳ ಕುರಿತು ಮಾತನಾಡಿದರು.
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸದಾನಂದ ರೈ ಕೂವೆಂಜ ಪ್ರಾಸ್ತಾವಿಕ ಮಾತು ಗಳೊಂದಿಗೆ ಸ್ವಾಗತಿಸಿದರು. ಪ್ರಾಥಮಿಕ ಮತ್ತು ಪ್ರೌಢಶಾಲೆ ಮುಖ್ಯ ಶಿಕ್ಷಕರಾದ ಉಮೇಶ್ ಗೌಡ ಹೆಚ್. ಶುಭ ಹಾರೈಸಿದರು.
ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಗುರು ಪ್ರಸಾದ್ ಟಿ. ಧನ್ಯವಾದಗೈದರು.ಸಂಸ್ಥೆಯ ಕಾರ್ಯಕ್ರಮ ಅಧಿಕಾರಿ ಪ್ರಸನ್ನ ವೈ ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಮಿಥನ್ ವಿದ್ಯಾರ್ಥಿಗಳಿಗೆ ಯೋಗದ ವಿವಿಧ ಆಸನಗಳೊಂದಿಗೆ ನಿಯಮಗಳನ್ನು ವಿವರಿಸಿದರು. ಶಿಕ್ಷಕ ಅಜಿತ್ ಗೌಡ ಐವರ್ನಾಡು ಕಾರ್ಯಕ್ರಮ ನಿರೂಪಿಸಿದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…