ನಿಂತಿಕಲ್ಲು: ನಿಂತಿಕಲ್ಲಿನ ಶ್ರೀ ವನದುರ್ಗಾ ದೇವಿ ಸಾನಿಧ್ಯದ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಮೇ.25 ಮತ್ತು 26ರಂದು ನಡೆಯಲಿದೆ. ಶ್ರೀ ಸಾನಿಧ್ಯದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಸಮಿತಿಯು ಇತ್ತೀಚೆಗೆ ರಚಿಸಲಾಯಿತು.
ಆಡಳಿತ ಮಂಡಳಿ ಅಧ್ಯಕ್ಷ ರೂಪರಾಜ ರೈ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನೆರವೇರಿತು.ಸಮಿತಿಯ ಅಧ್ಯಕ್ಷರಾಗಿ ವಸಂತ ನಡುಬೈಲು ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ರಾಮಕೃಷ್ಣ ಶೆಟ್ಟಿ ಕಟ್ಟಬೀಡು ನೇಮಕಗೊಂಡಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ರೂಪರಾಜ್ ರೈ ಹಾಗೂ ಸಂಚಾಲಕರಾಗಿ ಅನೂಪ್ ಕುಮಾರ್ ಆಳ್ವ ಕಟ್ಟಬೀಡು ಆಯ್ಕೆಯಾಗಿದ್ದಾರೆ.
ಉಳಿದಂತೆ ಗಿರಿಧರ ರೈ ಪಜಂಬಿಲ, ದಯಾನಂದ ಗೌಡ ನಡ್ಕ ನಿಂತಿಕಲ್ಲು(ಉಪಾಧ್ಯಕ್ಷರು), ಯೋಗಾನಂದ ಉಳೋಡಿ(ಕಾರ್ಯದರ್ಶಿ), ಭಾಗೀರಥಿ ಮುರುಳ್ಯ(ಕೋಶಾಧಿಕಾರಿ), ಶ್ರೀನಾಥ್ ರೈ ಬಾಳಿಲ, ರಾಜಶೇಖರನ್ ಕೆ.ಕೆ, ಎಚ್.ವಸಂತ, ಪ್ರವೀಣ್ ಜಾಲ್ತಾರು, ಪುಷ್ಪಾವತಿ ಬಾಳಿಲ, ಕುಸುಮಾವತಿ ಕೆ.ಜಿ(ಸದಸ್ಯರು) ನೇಮಕಗೊಂಡರು. ಪ್ರಸನ್ನ.ಕೆ ಗುಂಡಿಮಜಲು(ಸ್ವಾಗತ), ಉಮೇಶ್ ರೈ ಮರುವಂಜ(ಆಮಂತ್ರಣ), ನಾರಾಯಣ ರೈ ಮರುವಂಜ(ಆರ್ಥಿಕ), ಸಚಿನ್ ಅರೆಂಬಿ(ಮಾಧ್ಯಮ ಮತ್ತು ಪ್ರಚಾರ), ದಿನೇಶ್ ಪಜಿಂಬಿಲ(ಆಹಾರ), ಕಾರ್ತಿಕ್ ರೈ ಕಲ್ಲೇರಿ(ಅಲಂಕಾರ), ದೇವಿಪ್ರಸಾದ್ ಎಣ್ಮೂರು(ವಾಹನ) ವಿವಿಧ ಸಮಿತಿಗಳ ಸಂಚಾಲಕರಾಗಿ ನೇಮಕಗೊಂಡರು.ವಿವಿಧ ಸಮಿತಿಗಳ ಸದಸ್ಯರನ್ನಾಗಿ ಎಣ್ಮೂರು, ಬಾಳಿಲ, ಮುಪ್ಪೇರ್ಯ, ಮುರುಳ್ಯ, ಎಡಮಮಗಲ, ಕಲ್ಮಡ್ಕ ಗ್ರಾಮಗಳ 152 ಸದಸ್ಯರನ್ನು ಆಯ್ಕೆ ಮಾಡಲಾಯಿತು.
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…