ನಿಮಗೆ ಮತ್ತೊಮ್ಮೆ ಕೃತಜ್ಞತೆ : ನಾವೀಗ ಎರಡೂವರೆ ಲಕ್ಷ ಓದುಗರನ್ನು ತಲುಪಿದ್ದೇವೆ

June 29, 2019
8:00 AM

ಇವತ್ತು ಈ ಜಾಗವನ್ನು  ನಾವು ತೆಗೆದುಕೊಂಡಿದ್ದೇವೆ. ನಮ್ಮ  ಸಂತಸವನ್ನು  ಹಂಚಿಕೊಳ್ಳಲು. ಏಕೆ ಹಂಚಿಕೊಳ್ಳಬೇಕು ಎಂದರೆ, ರಚನಾತ್ಮಕ ಮಾಧ್ಯಮವನ್ನು ಬೆಂಬಲಿಸಿದ್ದಕ್ಕಾಗಿ.

Advertisement
Advertisement
Advertisement

ವೆಬ್ ಸೈಟ್, ಆನ್ ಲೈನ್ ಮಾಧ್ಯಮ ಸೇರಿದಂತೆ ಎಲ್ಲಾ ಮಾಧ್ಯಮಗಳು ನೆಗೆಟಿವ್ ಸುದ್ದಿಗಳನ್ನೇ ಪ್ರಕಟಿಸುತ್ತವೆ ಎಂಬ ಒಂದು ಮಾತಿತ್ತು. ನಾವು ಈ ಮಾಧ್ಯಮಕ್ಕೆ ಕಾಲಿಟ್ಟಾಗಲೂ ಅದೇ ಭಾವನೆ ಇತ್ತು. ಆದರೆ ನಮ್ಮ ಉದ್ದೇಶ ರಚನಾತ್ಮಕವಾಗಿ ಸಮಾಜದಲ್ಲಿ  ಕೆಲಸ ಮಾಡುವುದಾಗಿತ್ತು. ಸಾಮಾಜಿಕ ಕಳಕಳಿಯ ಉದ್ದೇಶದಿಂದಲೇ ಸುದ್ದಿಗಳನ್ನು  ನೀಡಬೇಕು ಎಂಬ ಉದ್ದೇಶವಿತ್ತು. ನಮ್ಮ ಉದ್ದೇಶವನ್ನು ನೀವು ಬೆಂಬಲಿಸಿದ್ದೀರಿ. ರಚನಾತ್ಮಕ ಮಾಧ್ಯಮ, ಪಾಸಿಟಿವ್ ಸಂಗತಿಗಳನ್ನು ನೀಡುವ ಮಾಧ್ಯಮದ ಅಗತ್ಯತೆಯನ್ನು  ನೀವು ನಮಗೆ ಬೆಂಬಲಿಸುವ ಮೂಲಕ ತಿಳಿಸಿದ್ದೀರಿ. ಹೀಗಾಗಿಯೇ ಅತೀ ಕಡಿಮೆ ಅವಧಿಯಲ್ಲಿ   ಒಟ್ಟು  2.5 ಲಕ್ಷ ಓದುಗರನ್ನು  ತಲುಪಿದ್ದೇವೆ ಎಂದು ವಿಶ್ವಾಸದಿಂದ ಹೇಳಬಹುದು. ನಾವು ಎಲ್ಲವನ್ನೂ ಗಮನಿಸುತ್ತಾ  ಯಾರನ್ನೂ ಅನುಕರಿಸದೆ ನಡೆಯುತ್ತಿದ್ದೇವೆ. ಈ ನಡೆಗೆ ನಿಮ್ಮ ಬೆಂಬಲ ಇನ್ನೂ ಇರಲಿ. ನಮ್ಮ ತಂಡವೂ ಹಾಗೆಯೇ ಸ್ಪಷ್ಟವಾದ ಗುರಿ ಹಾಗೂ ಉದ್ದೇಶವನ್ನಿಟ್ಟುಕೊಂಡೇ ಕೆಲಸ ಮಾಡುತ್ತಿದೆ. ಹೀಗಾಗಿಯೇ ಯಶಸ್ಸು ಕಾಣಲು ಸಾಧ್ಯವಾಯಿತು, ನಿಮ್ಮೆಲ್ಲರನ್ನು ತಲುಪಲು ಸಾಧ್ಯವಾಯಿತು.

Advertisement

ಕೆಲವೊಮ್ಮೆ ಮನುಷ್ಯ ಸಹಜ  ತಪ್ಪುಗಳಾಗಬಹುದು, ತಕ್ಷಣವೇ ತಿದ್ದಿಕೊಳ್ಳುತ್ತೇವೆ. ಉದ್ದೇಶಪೂರ್ವಕವಾಗಿ ಟೀಕೆ ಮಾಡುವುದಿಲ್ಲ. ವೈಯಕ್ತಿಕ ನಿಂದನೆ ಮಾಡುವುದಿಲ್ಲ. ಅಪರಾಧ ಸುದ್ದಿಗಳನ್ನು  ವೈಭವೀಕರಣ ಮಾಡುವುದಿಲ್ಲ ಎಂಬುದನ್ನು  ಮತ್ತೆ ಮತ್ತೆ ದೃಢವಾಗಿ ಹೇಳುತ್ತೇವೆ.

ಪ್ರತೀ ಬಾರಿ ಮಾಧ್ಯಮದ ಬಗ್ಗೆ ಮಾತನಾಡಿದಾಗ “ಯಾಕೆ ನೆಗೆಟಿವ್ ಜರ್ನಲಿಸಂ” ಹೆಚ್ಚಾಗ್ತಿದೆ ಅಂತ ಮಾತು ಬರುತ್ತದೆ. ಕೇವಲ ಟೀಕೆ ಮಾತ್ರವೇ ಇರುತ್ತದೆ,  ರಚನಾತ್ಮಕ ಸಲಹೆ , ಪಾಸಿಟಿವ್ ಸಂಗತಿಗಳಿಗೆ ಜಾಗ,  ಗ್ರಾಮೀಣ ಭಾಗದ ಅನೇಕ ಸಮಸ್ಯೆಗಳಿಗೆ ಪರಿಹಾರ, ಜನರ ನಡುವಿನ ಸಮಸ್ಯೆಗಳಿಗೆ ಪರಿಹಾರಕ್ಕಾಗಿ ಏಕೆ ಪ್ರಯತ್ನ ಮಾಡುವುದಿಲ್ಲ ಎಂಬ ಮಾತುಗಳು ಬರುತ್ತವೆ.

Advertisement

ಈಗ ಆ ಬೇಡಿಕೆ ನಿಜ ಅನಿಸಿದೆ. ಕೃಷಿ, ಗ್ರಾಮೀಣ, ನಗರ ಹೀಗೆ ಎಲ್ಲೆಡೆಯಿಂದ ನಾವು ರಚನಾತ್ಮಕ, ಧನಾತ್ಮಕವಾಗಿ ನೀಡುತ್ತಿರುವ ಸುದ್ದಿಗಳನ್ನು  ನೀವು ಬೆಂಬಲಿಸುತ್ತಿರುವುದು ನಮಗೆ ಸಾಕ್ಷಿಯಾಗಿದೆ. ಮಾಧ್ಯಮವು ಮುಂದೆ ಧನಾತ್ಮಕವಾಗಿ ಯೋಚಿಸಬೇಕಾದ ಕಾಲ ಬಂದಿದೆ. ಜಲಸಂರಕ್ಷಣೆ, ಪರಿಸರ, ಶಿಕ್ಷಣ , ಗ್ರಾಮೀಣ ಬದುಕು, ನಗರ ಯೋಜನೆ, ಸ್ವಚ್ಛತೆ, ಕೃಷಿ ಸೇರಿದಂತೆ ಹತ್ತು ಹಲವು ಕ್ಷೇತ್ರಗಳಲ್ಲಿ ನಾವು ಧನಾತ್ಮಕವಾಗಿ, ರಚನಾತ್ಮಕವಾಗಿ ಹೆಜ್ಜೆ ಇಡುತ್ತೇವೆ. ನಿಮ್ಮ ಸಹಕಾರದೊಂದಿಗೆ.

ಇನ್ನಷ್ಟು ಗುಣಮಟ್ಟ, ಇನ್ನಷ್ಟು ಅಂದವಾಗಿ ಮೂಡಿಬರಲು ಜಾಹೀರಾತು ಮೂಲಕ ಸಹಕಾರವೂ ಬೇಕಾಗಿದೆ.  ಸುದ್ದಿ ಪ್ರಕಟಕ್ಕಾಗಿಯೇ ಜಾಹೀರಾತು ಬೇಕಿಲ್ಲ.  ನಮ್ಮನ್ನು  ಬೆಂಬಲಿಸಲು  ಯಥಾ ಸಾಧ್ಯ ಜಾಹೀರಾತು ನಮಗೂ ನೀಡಿ ಸಹಕರಿಸಿ ಎಂಬುದು ನಮ್ಮ ಮನವಿ. ಮುಂದೆ ಸ್ಥಳೀಯವಾಗಿ ಪಾಸಿಟಿವ್ ಚಾನೆಲ್ , ಮುದ್ರಣ ಮಾಧ್ಯಮದ ಕಡೆಗೂ ತೆರಳುವ ಯೋಚನೆ ಇದೆ.ಆಗಲೂ ನಿಮ್ಮೆಲ್ಲರ ಸಹಕಾರವನ್ನು  ಯಾಚಿಸುತ್ತೇವೆ.

Advertisement

 

  • ಮಹೇಶ್ ಪುಚ್ಚಪ್ಪಾಡಿ , ಸುಳ್ಯನ್ಯೂಸ್.ಕಾಂ

 

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದಲ್ಲಿ ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜನ | ಸಮುದ್ರ ಮೀನಿನ ಕೃಷಿಯಲ್ಲಿ ಹೊಸ ಸಾಧನೆ ಮಾಡಿದ ಸಿಎಂಎಫ್​ಆರ್​ಐ
April 24, 2024
9:33 PM
by: The Rural Mirror ಸುದ್ದಿಜಾಲ
ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ | ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ | ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ
ಹೊಸ ಬೆಳೆ | ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ” |
April 24, 2024
2:57 PM
by: ಪ್ರಬಂಧ ಅಂಬುತೀರ್ಥ
24 ಗಂಟೆಗಳಲ್ಲಿ 80 ಭೂಕಂಪ | ಭೂಕಂಪದ ತೀವ್ರತೆಯಲ್ಲಿ ತೈವಾನ್‌ |
April 23, 2024
2:39 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror