Advertisement
ಸುದ್ದಿಗಳು

ನಿಮ್ಮ ಮಕ್ಕಳಿಗೆ ನೀವು ಬಯಸುವ ಶಿಕ್ಷಣ ಯಾವುದು ? – ವೆಂಕಟ್ರಮಣ ಭಟ್ ಮಂಕುಡೆ

Share

ಎಲಿಮಲೆ: ನಿಮ್ಮ ಮಕ್ಕಳಿಗೆ ನೀವು ಬಯಸುವ ಶಿಕ್ಷಣ ಯಾವುದು ? ಹೀಗೊಂದು ಪ್ರಶ್ನೆಯನ್ನು  ಮಕ್ಕಳ ಪೋಷಕರ ಮುಂದೆ ಇಟ್ಟವರು ವಿದ್ಯಾಭಾರತಿಯ ನೈತಿಕ ಶಿಕ್ಷಣ ವಿಭಾಗದ ಪ್ರಾಂತ ಸಂಚಾಲಕ, ಕಡಬದ  ಸರಸ್ವತಿ ವಿದ್ಯಾಲಯದ ಸಂಚಾಲಕ ಮಂಕುಡೆ ವೆಂಕ್ರಮಣ ಭಟ್.

ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ  ಗುರುವಾರ ಎಲ್ ಕೆ ಜಿ/ಯು ಕೆ ಜಿ ಪೋಷಕರ ಸಭೆಯಲ್ಲಿ ಅವರು ಮಾತನಾಡಿದರು. ಮಕ್ಕಳಿಗೆ ಬೇಕಾದ ಶಿಕ್ಷಣದ ಬಗ್ಗೆ ಪೋಷಕರು ಹೇಳಿದ್ದು ಶಿಸ್ತು,  ಸಂಸ್ಕಾರದಿಂದ ಕೂಡಿರುವ  ಶಿಕ್ಷಣ ಎಂದು.

. ಮರುಪ್ರಶ್ನೆ ಹಾಕುತ್ತಾ ಮಾತು ಮುಂದುವರಿಸಿದ ವೆಂಕಟ್ರಮಣ ಭಟ್, ಇದೆರಡೂ ಇಂದಿನ ವಿದ್ಯಾರ್ಥಿಗಳಲ್ಲಿ ಕಾಣಲು ಸಿಗುತ್ತದೆಯೇ ಎಂಬ ಆತ್ಮಾವಲೋಕನ ಬೇಕು, ಹಾಗೂ ಇದಕ್ಕೆ ಕಾರಣವೇನು ಎಂಬುದನ್ನು ಪೋಷಕರು ಚಿಂತನೆ ಮಾಡಬೇಕು ಎಂದರು. ಮನೆಯೇ ಮೊದಲ ಪಾಠ ಶಾಲೆ ಎಂಬ ಮಾತಿದೆ, ಇಲ್ಲಿಂದಲೇ ಇಂದು ಶಿಕ್ಷಣದ ವ್ಯವಸ್ಥೆ ಬದಲಾಗಬೇಕು ಎಂದರು. ಹೀಗಾಗಿ  ಅನ್ನಮಯ, ಜ್ಞಾನಮಯ, ಮನೋಮಯ  ಸೇರಿದಂತೆ  ಪಂಚಕೋಶಗಳಿಗೆ ಬೇಕಾದ ಶಿಕ್ಷಣದ ಕಡೆಗೆ ವಿದ್ಯಾಭಾರತಿ ಗಮನಹರಿಸುತ್ತಿದೆ ಎಂದು ವೆಂಕಟ್ರಮಣ ಭಟ್ ಹೇಳಿದರು.

ಶಿಕ್ಷಣ ಎನ್ನುವುದು ಕೇವಲ ಅಂಕ ಗಳಿಸುವುದು ಅಲ್ಲವೇ ಅಲ್ಲ. ಇನ್ನೊಬ್ಬರ ನೋವನ್ನು ಅರ್ಥ ಮಾಡುವ ಹಾಗೂ ನೋವನ್ನು ನೀಡದೇ ಇರುವ ಗುಣ ಬೆಳೆಸುವುದೇ ಶಿಕ್ಷಣದ ತಳಹದಿ. ಇಂತಹ ಗುಣಗಳನ್ನು  ಬೆಳೆಸುವ ಶಿಕ್ಷಣದ ಅಗತ್ಯವಿದೆ, ಒಟ್ಟಿನಲ್ಲಿ ಅಂಕದ ಶಿಕ್ಷಣದ ಬದಲಿಗೆ ಗುಣ ಬೆಳೆಸುವ ಗುಣಾತ್ಮಕ ಶಿಕ್ಷಣ ಬೇಕಾಗಿದೆ,  ಬದುಕಿಗೆ ಬೇಕಾದ ಶಿಕ್ಷಣ ನೀಡುವ ವ್ಯವಸ್ಥೆ ಬರಬೇಕಾಗಿದೆ. ವಿದ್ಯಾರ್ಥಿಯ ಓದಿನ ಅಂಕಪಟ್ಟಿ ಜೊತೆಗೆ ಆತನ ಗುಣದ ಮಾರ್ಕ್ ಕಾರ್ಡ್ ಪೋಷಕರು ಗಮನಿಸಬೇಕು. ಗುಣ-ನಡತೆಯಲ್ಲಿನ ವ್ಯತ್ಯಾಸ ನಿತ್ಯವೂ ಗಮನಿಸಬೇಕು, ಅದಕ್ಕಾಗಿಯೇ ಮನೆಯೇ ಮೊದಲ ಪಾಠಶಾಲೆ ಎನಿಸಿದೆ ಎಂದರು. ಮಕ್ಕಳು ಹಾದಿ ತಪ್ಪುವಂತಾದರೆ ಮೊದಲು ಆತ್ಮಾವಲೋಕನ ಮಾಡಬೇಕಾದ್ದು ಪೋಷಕರು, ಮಕ್ಕಳ ಮುಂದೆ ಮಾತನಾಡುವ ನುಡಿ, ನಡೆಯುವ ನಡೆ ಎಲ್ಲವೂ ಎಚ್ಚರವಾಗಿರಬೇಕು ಎಂದು ವೆಂಕಟ್ರಮಣ ಭಟ್ ಹೇಳಿದರು.

ವೇದಿಕೆಯಲ್ಲಿ ಜ್ಞಾನದೀಪ ವಿದ್ಯಾಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ ತಳೂರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಗಧಾಧರ ಬಾಳುಗೋಡು ಸ್ವಾಗತಿಸಿ ವಂದಿಸಿದರು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

2 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

10 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

11 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

11 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

11 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

21 hours ago