ನಿವೃತ್ತ ಪ್ರಿನ್ಸಿಪಾಲ್, ಸಾಹಿತಿ ಯು.ಸುಬ್ರಾಯ ಗೌಡರಿಗೆ ಸುಳ್ಯದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ

November 23, 2019
9:54 PM

ಸುಳ್ಯ:ನಿವೃತ್ತ ಪ್ರಿನ್ಸಿಪಾಲ್ ಹಾಗೂ ಸಾಹಿತಿ ಯು.ಸುಬ್ರಾಯ ಗೌಡರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ಸುಳ್ಯ ವೆಂಕಟರಮಣ ಸೊಸೈಟಿಯ ಮದುವೆಗದ್ದೆ ಬೋಜಪ್ಪ ಗೌಡ ಸಭಾಂಗಣದಲ್ಲಿ ನಡೆಯಿತು.

Advertisement
Advertisement

ಸಾಹಿತಿ ಹಾಗೂ ನಿವೃತ್ತ ಪ್ರಿನ್ಸಿಪಾಲ್ ಡಾ.ಪ್ರಭಾಕರ ಶಿಶಿಲ ನುಡಿನಮನ ಸಲ್ಲಿಸಿ ಮಾತನಾಡಿ, ಯು.ಸು.ಗೌಡರು ಸರ್ವಾಂಗೀಣ ವಿಕಸನ ಹೊಂದಿ, ಅವರಂತೆಯೇ ವಿದ್ಯಾರ್ಥಿಗಳನ್ನು ರೂಪಿಸಿದ್ದ ಪ್ರಾಧ್ಯಾಪಕ. ಇವರ ನಿಧನ ಸುಳ್ಯಕ್ಕೆ ನಷ್ಟವಾದರೂ ಅವರು ಬಿಟ್ಟುಹೋದ ಕಾರ್ಯವನ್ನು ಮುಂದುವರಿಸುವ ಕೆಲಸ ಆಗಬೇಕು ಎಂದರು.

ನಿವೃತ್ತ ಶಿಕ್ಷಕ ಬಾಬುಗೌಡ ಅಚ್ರಪ್ಪಾಡಿ, ಶಿಕ್ಷಕ ವೆಂಕಟ್ರಾಮ್ ಭಟ್, ರಾಜ್ಯ ಅರೆಭಾಷೆ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಪಿ.ಸಿ.ಜಯರಾಮ, ಸುಳ್ಯ ತಾಲೂಕು ಗೌಡ ಯುವಸೇವಾ ಸಂಘದ ಮಾಜಿ ಅಧ್ಯಕ್ಷ ದಿನೇಶ್ ಮಡಪ್ಪಾಡಿ ನುಡಿನಮನ ಸಲ್ಲಿಸಿದರು. ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಮೋಹನ್ ರಾಂ ಸುಳ್ಳಿ ಅಧ್ಯಕ್ಷತೆಯನ್ನು ವಹಿಸಿದರು.

ಕುಕ್ಕೆಸುಬ್ರಹ್ಮಣ್ಯ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಶಿಕ್ಷಕ ದೊಡ್ಡಣ್ಣ ಬರೆಮೇಲು, ನಾನಾ ಸಂಘಟನೆಗಳ ಮುಖಂಡರಾದ ಹರ್ಷಕರುಣಾಕರ, ಲೀಲಾ ದಾಮೋದರ್, ಹೇಮಲತಾ ದೇಂಗೋಡಿ, ಲತಾ ಕುದ್ಪಾಜೆ, ಮೀನಾಕ್ಷಿ ರಾಮಕಜೆ, ಜಯರಾಮ ದೇರಪ್ಪಜ್ಜನ ಮನೆ, ಕುಯಿಂತೋಡು ನಾರಾಯಣ ಗೌಡ, ಪಿ.ಎಸ್.ಗಂಗಾಧರ, ಭಗೀರಥ ಕೋಲ್ಚಾರ್, ರೋಹಿತ್ ಕೊಯಿಂಗೋಡಿ, ಬೆಳ್ಯಪ್ಪ ಗೌಡ ಬಳ್ಳಡ್ಕ, ಬಾಣೂರು ವಿಠಲಗೌಡ, ರಾಮಕಜೆ ಸುಂದರ ಗೌಡ, ರಾಕೇಶ್ ಕುಂಟಿಕಾನ, ಸುರೇಶ್ ಅಮೈ, ಸಂತೋಷ್ ಮಡ್ತಿಲ, ದಿನೇಶ್ ಮಡ್ತಿಲ, ರಾಧಾಕೃಷ್ಣ ಕುಂತಿನಡ್ಕ, ವೆಂಕಟರಮಣ ಸೊಸೈಟಿ ಅಧ್ಯಕ್ಷ ಕೆ.ಸಿ.ನಾರಾಯಣ, ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ ಇದ್ದರು. ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಗೌಡರ ಯುವಸೇವಾ ಸಂಘ ಮತ್ತು ಸುಳ್ಯ ವೆಂಕಟರಮಣ ಸೊಸೈಟಿ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ |
October 21, 2024
10:02 AM
by: The Rural Mirror ಸುದ್ದಿಜಾಲ
ರತನ್‌ ಟಾಟಾ ಇನ್ನಿಲ್ಲ | ವಯೋಸಹಜ ಕಾಯಿಲೆಯಿಂದ ಕೊನೆಯುಸಿರು |
October 10, 2024
7:49 AM
by: ದ ರೂರಲ್ ಮಿರರ್.ಕಾಂ
ಕಣ್ಮರೆಯಾದ ಅಚ್ಚ ಕನ್ನಡದ ಮಾತಿನ ಮಲ್ಲಿ ಅಪರ್ಣಾ | ಕ್ಯಾನ್ಸರ್‌ಗೆ ಬಲಿಯಾದ ಅಪರ್ಣಾ |
July 12, 2024
9:24 AM
by: The Rural Mirror ಸುದ್ದಿಜಾಲ
ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ನಾಯಕ | ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ
April 29, 2024
12:14 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group