Advertisement
ನಿಧನ‌ ಸುದ್ದಿಗಳು

ನಿವೃತ್ತ ಪ್ರಿನ್ಸಿಪಾಲ್, ಸಾಹಿತಿ ಯು.ಸುಬ್ರಾಯ ಗೌಡರಿಗೆ ಸುಳ್ಯದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ

Share

ಸುಳ್ಯ:ನಿವೃತ್ತ ಪ್ರಿನ್ಸಿಪಾಲ್ ಹಾಗೂ ಸಾಹಿತಿ ಯು.ಸುಬ್ರಾಯ ಗೌಡರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ಸುಳ್ಯ ವೆಂಕಟರಮಣ ಸೊಸೈಟಿಯ ಮದುವೆಗದ್ದೆ ಬೋಜಪ್ಪ ಗೌಡ ಸಭಾಂಗಣದಲ್ಲಿ ನಡೆಯಿತು.

ಸಾಹಿತಿ ಹಾಗೂ ನಿವೃತ್ತ ಪ್ರಿನ್ಸಿಪಾಲ್ ಡಾ.ಪ್ರಭಾಕರ ಶಿಶಿಲ ನುಡಿನಮನ ಸಲ್ಲಿಸಿ ಮಾತನಾಡಿ, ಯು.ಸು.ಗೌಡರು ಸರ್ವಾಂಗೀಣ ವಿಕಸನ ಹೊಂದಿ, ಅವರಂತೆಯೇ ವಿದ್ಯಾರ್ಥಿಗಳನ್ನು ರೂಪಿಸಿದ್ದ ಪ್ರಾಧ್ಯಾಪಕ. ಇವರ ನಿಧನ ಸುಳ್ಯಕ್ಕೆ ನಷ್ಟವಾದರೂ ಅವರು ಬಿಟ್ಟುಹೋದ ಕಾರ್ಯವನ್ನು ಮುಂದುವರಿಸುವ ಕೆಲಸ ಆಗಬೇಕು ಎಂದರು.

ನಿವೃತ್ತ ಶಿಕ್ಷಕ ಬಾಬುಗೌಡ ಅಚ್ರಪ್ಪಾಡಿ, ಶಿಕ್ಷಕ ವೆಂಕಟ್ರಾಮ್ ಭಟ್, ರಾಜ್ಯ ಅರೆಭಾಷೆ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಪಿ.ಸಿ.ಜಯರಾಮ, ಸುಳ್ಯ ತಾಲೂಕು ಗೌಡ ಯುವಸೇವಾ ಸಂಘದ ಮಾಜಿ ಅಧ್ಯಕ್ಷ ದಿನೇಶ್ ಮಡಪ್ಪಾಡಿ ನುಡಿನಮನ ಸಲ್ಲಿಸಿದರು. ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಮೋಹನ್ ರಾಂ ಸುಳ್ಳಿ ಅಧ್ಯಕ್ಷತೆಯನ್ನು ವಹಿಸಿದರು.

ಕುಕ್ಕೆಸುಬ್ರಹ್ಮಣ್ಯ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಶಿಕ್ಷಕ ದೊಡ್ಡಣ್ಣ ಬರೆಮೇಲು, ನಾನಾ ಸಂಘಟನೆಗಳ ಮುಖಂಡರಾದ ಹರ್ಷಕರುಣಾಕರ, ಲೀಲಾ ದಾಮೋದರ್, ಹೇಮಲತಾ ದೇಂಗೋಡಿ, ಲತಾ ಕುದ್ಪಾಜೆ, ಮೀನಾಕ್ಷಿ ರಾಮಕಜೆ, ಜಯರಾಮ ದೇರಪ್ಪಜ್ಜನ ಮನೆ, ಕುಯಿಂತೋಡು ನಾರಾಯಣ ಗೌಡ, ಪಿ.ಎಸ್.ಗಂಗಾಧರ, ಭಗೀರಥ ಕೋಲ್ಚಾರ್, ರೋಹಿತ್ ಕೊಯಿಂಗೋಡಿ, ಬೆಳ್ಯಪ್ಪ ಗೌಡ ಬಳ್ಳಡ್ಕ, ಬಾಣೂರು ವಿಠಲಗೌಡ, ರಾಮಕಜೆ ಸುಂದರ ಗೌಡ, ರಾಕೇಶ್ ಕುಂಟಿಕಾನ, ಸುರೇಶ್ ಅಮೈ, ಸಂತೋಷ್ ಮಡ್ತಿಲ, ದಿನೇಶ್ ಮಡ್ತಿಲ, ರಾಧಾಕೃಷ್ಣ ಕುಂತಿನಡ್ಕ, ವೆಂಕಟರಮಣ ಸೊಸೈಟಿ ಅಧ್ಯಕ್ಷ ಕೆ.ಸಿ.ನಾರಾಯಣ, ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ ಇದ್ದರು. ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಗೌಡರ ಯುವಸೇವಾ ಸಂಘ ಮತ್ತು ಸುಳ್ಯ ವೆಂಕಟರಮಣ ಸೊಸೈಟಿ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

8 hours ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

8 hours ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

21 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

22 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

22 hours ago