Advertisement
ನಿಧನ‌ ಸುದ್ದಿಗಳು

ನಿವೃತ್ತ ಪ್ರಿನ್ಸಿಪಾಲ್, ಸಾಹಿತಿ ಯು.ಸುಬ್ರಾಯ ಗೌಡರಿಗೆ ಸುಳ್ಯದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ

Share

ಸುಳ್ಯ:ನಿವೃತ್ತ ಪ್ರಿನ್ಸಿಪಾಲ್ ಹಾಗೂ ಸಾಹಿತಿ ಯು.ಸುಬ್ರಾಯ ಗೌಡರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ಸುಳ್ಯ ವೆಂಕಟರಮಣ ಸೊಸೈಟಿಯ ಮದುವೆಗದ್ದೆ ಬೋಜಪ್ಪ ಗೌಡ ಸಭಾಂಗಣದಲ್ಲಿ ನಡೆಯಿತು.

ಸಾಹಿತಿ ಹಾಗೂ ನಿವೃತ್ತ ಪ್ರಿನ್ಸಿಪಾಲ್ ಡಾ.ಪ್ರಭಾಕರ ಶಿಶಿಲ ನುಡಿನಮನ ಸಲ್ಲಿಸಿ ಮಾತನಾಡಿ, ಯು.ಸು.ಗೌಡರು ಸರ್ವಾಂಗೀಣ ವಿಕಸನ ಹೊಂದಿ, ಅವರಂತೆಯೇ ವಿದ್ಯಾರ್ಥಿಗಳನ್ನು ರೂಪಿಸಿದ್ದ ಪ್ರಾಧ್ಯಾಪಕ. ಇವರ ನಿಧನ ಸುಳ್ಯಕ್ಕೆ ನಷ್ಟವಾದರೂ ಅವರು ಬಿಟ್ಟುಹೋದ ಕಾರ್ಯವನ್ನು ಮುಂದುವರಿಸುವ ಕೆಲಸ ಆಗಬೇಕು ಎಂದರು.

ನಿವೃತ್ತ ಶಿಕ್ಷಕ ಬಾಬುಗೌಡ ಅಚ್ರಪ್ಪಾಡಿ, ಶಿಕ್ಷಕ ವೆಂಕಟ್ರಾಮ್ ಭಟ್, ರಾಜ್ಯ ಅರೆಭಾಷೆ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಪಿ.ಸಿ.ಜಯರಾಮ, ಸುಳ್ಯ ತಾಲೂಕು ಗೌಡ ಯುವಸೇವಾ ಸಂಘದ ಮಾಜಿ ಅಧ್ಯಕ್ಷ ದಿನೇಶ್ ಮಡಪ್ಪಾಡಿ ನುಡಿನಮನ ಸಲ್ಲಿಸಿದರು. ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಮೋಹನ್ ರಾಂ ಸುಳ್ಳಿ ಅಧ್ಯಕ್ಷತೆಯನ್ನು ವಹಿಸಿದರು.

ಕುಕ್ಕೆಸುಬ್ರಹ್ಮಣ್ಯ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಶಿಕ್ಷಕ ದೊಡ್ಡಣ್ಣ ಬರೆಮೇಲು, ನಾನಾ ಸಂಘಟನೆಗಳ ಮುಖಂಡರಾದ ಹರ್ಷಕರುಣಾಕರ, ಲೀಲಾ ದಾಮೋದರ್, ಹೇಮಲತಾ ದೇಂಗೋಡಿ, ಲತಾ ಕುದ್ಪಾಜೆ, ಮೀನಾಕ್ಷಿ ರಾಮಕಜೆ, ಜಯರಾಮ ದೇರಪ್ಪಜ್ಜನ ಮನೆ, ಕುಯಿಂತೋಡು ನಾರಾಯಣ ಗೌಡ, ಪಿ.ಎಸ್.ಗಂಗಾಧರ, ಭಗೀರಥ ಕೋಲ್ಚಾರ್, ರೋಹಿತ್ ಕೊಯಿಂಗೋಡಿ, ಬೆಳ್ಯಪ್ಪ ಗೌಡ ಬಳ್ಳಡ್ಕ, ಬಾಣೂರು ವಿಠಲಗೌಡ, ರಾಮಕಜೆ ಸುಂದರ ಗೌಡ, ರಾಕೇಶ್ ಕುಂಟಿಕಾನ, ಸುರೇಶ್ ಅಮೈ, ಸಂತೋಷ್ ಮಡ್ತಿಲ, ದಿನೇಶ್ ಮಡ್ತಿಲ, ರಾಧಾಕೃಷ್ಣ ಕುಂತಿನಡ್ಕ, ವೆಂಕಟರಮಣ ಸೊಸೈಟಿ ಅಧ್ಯಕ್ಷ ಕೆ.ಸಿ.ನಾರಾಯಣ, ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ ಇದ್ದರು. ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಗೌಡರ ಯುವಸೇವಾ ಸಂಘ ಮತ್ತು ಸುಳ್ಯ ವೆಂಕಟರಮಣ ಸೊಸೈಟಿ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

1 hour ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

1 hour ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago