ಬೆಂಗಳೂರು: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ವೆಂಕಟಾಚಲ (90) ಅವರು ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಕರ್ನಾಟಕದ ಲೋಕಾಯುಕ್ತರಾಗಿ, ಸುಪ್ರಿಂಕೋರ್ಟ್ ನ್ಯಾಯಧೀಶರಾಗಿ ಸೇವೆ ಸಲ್ಲಿಸಿದ್ದರು.ಬೆಳಗಿನ ಜಾವ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ನಂಜೇಗೌಡ ವೆಂಕಟಾಚಲ ಅವರ ಪೂರ್ಣ ಹೆಸರು. ಇವರು 1930 ಜುಲೈ 3ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಮಿತ್ತೂರು ಗ್ರಾಮದಲ್ಲಿ ಜನಿಸಿದರು.
ಮೈಸೂರು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿ ಪಡೆದ ಇವರು ವಕೀಲರಾಗಿ ವೃತ್ತಿ ಜೀವನ ಆರಂಭಿಸಿ, ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನಿವೃತ್ತರಾದರು.
ಕರ್ನಾಟಕದ ಲೋಕಾಯುಕ್ತರಾಗಿದ್ದ ಸಂದರ್ಭದಲ್ಲಿ ವೆಂಕಟಾಚಲ ಅವರು ಲೋಕಾಯುಕ್ತ ಸಂಸ್ಥೆಗೆ ಹೊಸ ರೂಪರೇಷೆ ನೀಡುವ ಮೂಲಕ ಭ್ರಷ್ಟರಲ್ಲಿ ನಡುಕ ಹುಟ್ಟಿಸಿದ್ದರು.
ಲೋಕಾಯುಕ್ತರಾಗಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಪಣ ತೊಟ್ಟಿದ್ದರು. ಸುಳ್ಯಕ್ಕೂ ಬಂದಿದ್ದ ಅವರು ತಾಲೂಕು ಕಚೇರಿ, ನಗರ ಪಂಚಾಯತ್ ಗೆ ಭೇಟಿ ನೀಡಿ ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸಿದ್ದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…