ನಿವೇಶನ ರಹಿತರಿಗೆ ಭೂಮಿ ಒದಗಿಸಲು ನಗರ ಪಂಚಾಯತ್ ಕ್ರಮ ಕೈಗೊಂಡಿಲ್ಲ : ನ.ಪಂ.ಸದಸ್ಯರಿಂದ ಲೋಕಾಯುಕ್ತರಿಗೆ ದೂರು

October 23, 2019
9:00 PM

ಸುಳ್ಯ: ಸುಳ್ಯ ನಗರ ವ್ಯಾಪ್ತಿಯಲ್ಲಿ ಕಳೆದ 15 ವರ್ಷಗಳಿಂದ ಮನೆ ನಿವೇಶನಕ್ಕಾಗಿ 365 ಮಂದಿ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಸುಳ್ಯದಲ್ಲಿ ಸರಕಾರಿ ಭೂಮಿ ಲಭ್ಯವಿದ್ದರೂ ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸಿ ಭೂಮಿ ಪಡೆದು ನಿವೇಶನ ರಹಿತರಿಗೆ ನೀಡಲು ನಗರ ಪಂಚಾಯತ್ ಕ್ರಮ ಕೈಗೊಂಡಿಲ್ಲ ಎಂದು ನಗರ ಪಂಚಾಯತ್ ಸದಸ್ಯ ಕೆ.ಎಸ್.ಉಮ್ಮರ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

Advertisement
Advertisement

ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಅಧಿಕಾರಿಗಳು ಬುಧವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂದರ್ಭದಲ್ಲಿ ಉಮ್ಮರ್ ದೂರು ದಾಖಲಿಸಿದ್ದಾರೆ. ಸುಳ್ಯ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಡಿವೈಎಸ್‍ಪಿ ವಿಜಯಪ್ರಸಾದ್ ನೇತೃತ್ವದಲ್ಲಿ ದೂರು ಸ್ವೀಕರಿಸಿದರು. ಸುಳ್ಯ ನಗರದಲ್ಲಿ ಪಂಚಾಯತ್  ಅನುಮತಿ ಪಡೆಯದೆ ವಾಣಿಜ್ಯ ಸಂಕೀರ್ಣ ನಿರ್ಮಾಣ ನಡೆಯುತ್ತಿದ್ದರೂ ನಗರ ಪಂಚಾಯತ್ ಅಧಿಕಾರಿಗಳು ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಉಮ್ಮರ್ ಮತ್ತೊಂದು ದೂರು ದಾಖಲಿಸಿದರು. ದೇವಚಳ್ಳ ಸರಕಾರಿ ಶಾಲೆಯ ಆಟದ ಮೈದಾನದ ಬಳಿಯ ಮರವನ್ನು ನಿಯಮ ಬಾಹಿರವಾಗಿ ಕಡಿಯಲಾಗಿದೆ. ಇಲ್ಲಿ ಆಟದ ಮೈದಾನದ ಕಾಮಗಾರಿಯನ್ನು ನರೇಗಾ ಯೋಜನೆಯಡಿಯಲ್ಲಿ ಮಾಡಲಾಗಿದ್ದು ಕಾನೂನು ಮಾರ್ಗಸೂಚಿಯಂತೆ ಕಾಮಗಾರಿ ಮಾಡದೆ ಬಿಲ್ ಮಾಡಲಾಗಿದೆ. ಇದಕ್ಕೆ ಸಂಬಂಧಪಟ್ಟು ತೃಪ್ತಿದಾಯಕ ಕ್ರಮ ಕೈಗೊಂಡಿಲ್ಲ. ಈ ಕುರಿತು ತನಿಖೆ ನಡೆಸಬೇಕು ಎಂದು ಹರಿಪ್ರಸಾದ್ ಚಳ್ಳ ಪ್ರತ್ಯೇಕ ಎರಡು ದೂರು ದಾಖಲಿಸಿದರು.

ವಿವಿಧ ವಿಷಯಕ್ಕೆ ಸಂಬಂಧಪಟ್ಟು ಒಟ್ಟು ಏಳು ದೂರು ನೀಡಲಾಗಿದ್ದು ಆರು ದೂರು ದಾಖಲಿಸಲಾಗಿದೆ ಎಂದು ಡಿವೈಎಸ್‍ಪಿ ವಿಜಯಪ್ರಸಾದ್ ತಿಳಿಸಿದ್ದಾರೆ. ಕೆಲವೊಂದು ದೂರುಗಳ ಬಗ್ಗೆ ಸ್ಥಳದಲ್ಲಿಯೇ ಪರಿಶೀಲನೆ ನಡೆಸಿ ಸೂಕ್ತ ಕ್ರಮಕ್ಕೆ ಸೂಚಿಸಲಾಯಿತು.  ಲೋಕಾಯುಕ್ತ ಸಿಬ್ಬಂದಿಗಳಾದ ಸುರೇಂದ್ರ, ಲೋಕೇಶ್ ಉಪಸ್ಥಿತರಿದ್ದರು.

ತಾಲೂಕು ಪಂಚಾಯತ್ ವ್ಯವಸ್ಥಾಪಕ ಹರೀಶ್, ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ ಮತ್ತಿತರ ವಿವಿಧ ಇಲಾಖೆಗಳ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ
May 27, 2025
10:57 PM
by: ದ ರೂರಲ್ ಮಿರರ್.ಕಾಂ
ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |
May 27, 2025
1:31 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |
May 27, 2025
12:41 PM
by: ಸಾಯಿಶೇಖರ್ ಕರಿಕಳ
ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?
May 27, 2025
12:28 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

You cannot copy content of this page - Copyright -The Rural Mirror

Join Our Group