ಸುಳ್ಯ: ಸುಳ್ಯ ನಗರ ವ್ಯಾಪ್ತಿಯಲ್ಲಿ ಕಳೆದ 15 ವರ್ಷಗಳಿಂದ ಮನೆ ನಿವೇಶನಕ್ಕಾಗಿ 365 ಮಂದಿ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಸುಳ್ಯದಲ್ಲಿ ಸರಕಾರಿ ಭೂಮಿ ಲಭ್ಯವಿದ್ದರೂ ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸಿ ಭೂಮಿ ಪಡೆದು ನಿವೇಶನ ರಹಿತರಿಗೆ ನೀಡಲು ನಗರ ಪಂಚಾಯತ್ ಕ್ರಮ ಕೈಗೊಂಡಿಲ್ಲ ಎಂದು ನಗರ ಪಂಚಾಯತ್ ಸದಸ್ಯ ಕೆ.ಎಸ್.ಉಮ್ಮರ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಅಧಿಕಾರಿಗಳು ಬುಧವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂದರ್ಭದಲ್ಲಿ ಉಮ್ಮರ್ ದೂರು ದಾಖಲಿಸಿದ್ದಾರೆ. ಸುಳ್ಯ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ವಿಜಯಪ್ರಸಾದ್ ನೇತೃತ್ವದಲ್ಲಿ ದೂರು ಸ್ವೀಕರಿಸಿದರು. ಸುಳ್ಯ ನಗರದಲ್ಲಿ ಪಂಚಾಯತ್ ಅನುಮತಿ ಪಡೆಯದೆ ವಾಣಿಜ್ಯ ಸಂಕೀರ್ಣ ನಿರ್ಮಾಣ ನಡೆಯುತ್ತಿದ್ದರೂ ನಗರ ಪಂಚಾಯತ್ ಅಧಿಕಾರಿಗಳು ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಉಮ್ಮರ್ ಮತ್ತೊಂದು ದೂರು ದಾಖಲಿಸಿದರು. ದೇವಚಳ್ಳ ಸರಕಾರಿ ಶಾಲೆಯ ಆಟದ ಮೈದಾನದ ಬಳಿಯ ಮರವನ್ನು ನಿಯಮ ಬಾಹಿರವಾಗಿ ಕಡಿಯಲಾಗಿದೆ. ಇಲ್ಲಿ ಆಟದ ಮೈದಾನದ ಕಾಮಗಾರಿಯನ್ನು ನರೇಗಾ ಯೋಜನೆಯಡಿಯಲ್ಲಿ ಮಾಡಲಾಗಿದ್ದು ಕಾನೂನು ಮಾರ್ಗಸೂಚಿಯಂತೆ ಕಾಮಗಾರಿ ಮಾಡದೆ ಬಿಲ್ ಮಾಡಲಾಗಿದೆ. ಇದಕ್ಕೆ ಸಂಬಂಧಪಟ್ಟು ತೃಪ್ತಿದಾಯಕ ಕ್ರಮ ಕೈಗೊಂಡಿಲ್ಲ. ಈ ಕುರಿತು ತನಿಖೆ ನಡೆಸಬೇಕು ಎಂದು ಹರಿಪ್ರಸಾದ್ ಚಳ್ಳ ಪ್ರತ್ಯೇಕ ಎರಡು ದೂರು ದಾಖಲಿಸಿದರು.
ವಿವಿಧ ವಿಷಯಕ್ಕೆ ಸಂಬಂಧಪಟ್ಟು ಒಟ್ಟು ಏಳು ದೂರು ನೀಡಲಾಗಿದ್ದು ಆರು ದೂರು ದಾಖಲಿಸಲಾಗಿದೆ ಎಂದು ಡಿವೈಎಸ್ಪಿ ವಿಜಯಪ್ರಸಾದ್ ತಿಳಿಸಿದ್ದಾರೆ. ಕೆಲವೊಂದು ದೂರುಗಳ ಬಗ್ಗೆ ಸ್ಥಳದಲ್ಲಿಯೇ ಪರಿಶೀಲನೆ ನಡೆಸಿ ಸೂಕ್ತ ಕ್ರಮಕ್ಕೆ ಸೂಚಿಸಲಾಯಿತು. ಲೋಕಾಯುಕ್ತ ಸಿಬ್ಬಂದಿಗಳಾದ ಸುರೇಂದ್ರ, ಲೋಕೇಶ್ ಉಪಸ್ಥಿತರಿದ್ದರು.
ತಾಲೂಕು ಪಂಚಾಯತ್ ವ್ಯವಸ್ಥಾಪಕ ಹರೀಶ್, ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ ಮತ್ತಿತರ ವಿವಿಧ ಇಲಾಖೆಗಳ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…