Advertisement
ಸುದ್ದಿಗಳು

ನಿವೇಶನ ರಹಿತರಿಗೆ ಭೂಮಿ ಒದಗಿಸಲು ನಗರ ಪಂಚಾಯತ್ ಕ್ರಮ ಕೈಗೊಂಡಿಲ್ಲ : ನ.ಪಂ.ಸದಸ್ಯರಿಂದ ಲೋಕಾಯುಕ್ತರಿಗೆ ದೂರು

Share

ಸುಳ್ಯ: ಸುಳ್ಯ ನಗರ ವ್ಯಾಪ್ತಿಯಲ್ಲಿ ಕಳೆದ 15 ವರ್ಷಗಳಿಂದ ಮನೆ ನಿವೇಶನಕ್ಕಾಗಿ 365 ಮಂದಿ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಸುಳ್ಯದಲ್ಲಿ ಸರಕಾರಿ ಭೂಮಿ ಲಭ್ಯವಿದ್ದರೂ ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸಿ ಭೂಮಿ ಪಡೆದು ನಿವೇಶನ ರಹಿತರಿಗೆ ನೀಡಲು ನಗರ ಪಂಚಾಯತ್ ಕ್ರಮ ಕೈಗೊಂಡಿಲ್ಲ ಎಂದು ನಗರ ಪಂಚಾಯತ್ ಸದಸ್ಯ ಕೆ.ಎಸ್.ಉಮ್ಮರ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

Advertisement
Advertisement
Advertisement
Advertisement
Advertisement

ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಅಧಿಕಾರಿಗಳು ಬುಧವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂದರ್ಭದಲ್ಲಿ ಉಮ್ಮರ್ ದೂರು ದಾಖಲಿಸಿದ್ದಾರೆ. ಸುಳ್ಯ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಡಿವೈಎಸ್‍ಪಿ ವಿಜಯಪ್ರಸಾದ್ ನೇತೃತ್ವದಲ್ಲಿ ದೂರು ಸ್ವೀಕರಿಸಿದರು. ಸುಳ್ಯ ನಗರದಲ್ಲಿ ಪಂಚಾಯತ್  ಅನುಮತಿ ಪಡೆಯದೆ ವಾಣಿಜ್ಯ ಸಂಕೀರ್ಣ ನಿರ್ಮಾಣ ನಡೆಯುತ್ತಿದ್ದರೂ ನಗರ ಪಂಚಾಯತ್ ಅಧಿಕಾರಿಗಳು ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಉಮ್ಮರ್ ಮತ್ತೊಂದು ದೂರು ದಾಖಲಿಸಿದರು. ದೇವಚಳ್ಳ ಸರಕಾರಿ ಶಾಲೆಯ ಆಟದ ಮೈದಾನದ ಬಳಿಯ ಮರವನ್ನು ನಿಯಮ ಬಾಹಿರವಾಗಿ ಕಡಿಯಲಾಗಿದೆ. ಇಲ್ಲಿ ಆಟದ ಮೈದಾನದ ಕಾಮಗಾರಿಯನ್ನು ನರೇಗಾ ಯೋಜನೆಯಡಿಯಲ್ಲಿ ಮಾಡಲಾಗಿದ್ದು ಕಾನೂನು ಮಾರ್ಗಸೂಚಿಯಂತೆ ಕಾಮಗಾರಿ ಮಾಡದೆ ಬಿಲ್ ಮಾಡಲಾಗಿದೆ. ಇದಕ್ಕೆ ಸಂಬಂಧಪಟ್ಟು ತೃಪ್ತಿದಾಯಕ ಕ್ರಮ ಕೈಗೊಂಡಿಲ್ಲ. ಈ ಕುರಿತು ತನಿಖೆ ನಡೆಸಬೇಕು ಎಂದು ಹರಿಪ್ರಸಾದ್ ಚಳ್ಳ ಪ್ರತ್ಯೇಕ ಎರಡು ದೂರು ದಾಖಲಿಸಿದರು.

Advertisement

ವಿವಿಧ ವಿಷಯಕ್ಕೆ ಸಂಬಂಧಪಟ್ಟು ಒಟ್ಟು ಏಳು ದೂರು ನೀಡಲಾಗಿದ್ದು ಆರು ದೂರು ದಾಖಲಿಸಲಾಗಿದೆ ಎಂದು ಡಿವೈಎಸ್‍ಪಿ ವಿಜಯಪ್ರಸಾದ್ ತಿಳಿಸಿದ್ದಾರೆ. ಕೆಲವೊಂದು ದೂರುಗಳ ಬಗ್ಗೆ ಸ್ಥಳದಲ್ಲಿಯೇ ಪರಿಶೀಲನೆ ನಡೆಸಿ ಸೂಕ್ತ ಕ್ರಮಕ್ಕೆ ಸೂಚಿಸಲಾಯಿತು.  ಲೋಕಾಯುಕ್ತ ಸಿಬ್ಬಂದಿಗಳಾದ ಸುರೇಂದ್ರ, ಲೋಕೇಶ್ ಉಪಸ್ಥಿತರಿದ್ದರು.

ತಾಲೂಕು ಪಂಚಾಯತ್ ವ್ಯವಸ್ಥಾಪಕ ಹರೀಶ್, ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ ಮತ್ತಿತರ ವಿವಿಧ ಇಲಾಖೆಗಳ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಟ್ಟಡ ಕಾರ್ಮಿಕರ 26 ಲಕ್ಷ ನಕಲಿ ಕಾರ್ಡ್ ರದ್ದು

ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್‌ಗಳನ್ನು ತಪಾಸಣೆ ನಡೆಸಿ 26  ಲಕ್ಷ…

23 mins ago

ಪ್ರಮುಖ ಯಾತ್ರಾ ಸ್ಥಳಗಳಿಗೆ ರೋಪ್ ವೇ ಸೌಲಭ್ಯ

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…

37 mins ago

ಹಾಲಿನ 10 ರೂಪಾಯಿ ಹೆಚ್ಚಳ ಮಾಡುವಂತೆ ರೈತರಿಂದ ಪ್ರಸ್ತಾವನೆ | ದರ ಹೆಚ್ಚಳ ಮಾಡುವ ಕುರಿತು ಸೂಕ್ತ ನಿರ್ಧಾರ |

ಹಾಲಿನ ದರ ಹೆಚ್ಚಳ ಮಾಡುವಂತೆ ರೈತರಿಂದ ಬೇಡಿಕೆ ಹೆಚ್ಚಿದ್ದು, ಪ್ರತಿ ಲೀಟರ್ ಗೆ…

39 mins ago

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…

10 hours ago

ಹೊಸರುಚಿ | ಗುಜ್ಜೆ ಕಟ್ಲೇಟ್

ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್‌ ಅವರು ಇಲ್ಲಿ ವಿವರ…

11 hours ago

ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…

ಪ್ರಯಾಗ್‌ ರಾಜ್‌ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…

11 hours ago