Advertisement
ಸುದ್ದಿಗಳು

ನಿವೇಶನ ರಹಿತರಿಗೆ ಭೂಮಿ ಒದಗಿಸಲು ನಗರ ಪಂಚಾಯತ್ ಕ್ರಮ ಕೈಗೊಂಡಿಲ್ಲ : ನ.ಪಂ.ಸದಸ್ಯರಿಂದ ಲೋಕಾಯುಕ್ತರಿಗೆ ದೂರು

Share

ಸುಳ್ಯ: ಸುಳ್ಯ ನಗರ ವ್ಯಾಪ್ತಿಯಲ್ಲಿ ಕಳೆದ 15 ವರ್ಷಗಳಿಂದ ಮನೆ ನಿವೇಶನಕ್ಕಾಗಿ 365 ಮಂದಿ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಸುಳ್ಯದಲ್ಲಿ ಸರಕಾರಿ ಭೂಮಿ ಲಭ್ಯವಿದ್ದರೂ ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸಿ ಭೂಮಿ ಪಡೆದು ನಿವೇಶನ ರಹಿತರಿಗೆ ನೀಡಲು ನಗರ ಪಂಚಾಯತ್ ಕ್ರಮ ಕೈಗೊಂಡಿಲ್ಲ ಎಂದು ನಗರ ಪಂಚಾಯತ್ ಸದಸ್ಯ ಕೆ.ಎಸ್.ಉಮ್ಮರ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಅಧಿಕಾರಿಗಳು ಬುಧವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂದರ್ಭದಲ್ಲಿ ಉಮ್ಮರ್ ದೂರು ದಾಖಲಿಸಿದ್ದಾರೆ. ಸುಳ್ಯ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಡಿವೈಎಸ್‍ಪಿ ವಿಜಯಪ್ರಸಾದ್ ನೇತೃತ್ವದಲ್ಲಿ ದೂರು ಸ್ವೀಕರಿಸಿದರು. ಸುಳ್ಯ ನಗರದಲ್ಲಿ ಪಂಚಾಯತ್  ಅನುಮತಿ ಪಡೆಯದೆ ವಾಣಿಜ್ಯ ಸಂಕೀರ್ಣ ನಿರ್ಮಾಣ ನಡೆಯುತ್ತಿದ್ದರೂ ನಗರ ಪಂಚಾಯತ್ ಅಧಿಕಾರಿಗಳು ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಉಮ್ಮರ್ ಮತ್ತೊಂದು ದೂರು ದಾಖಲಿಸಿದರು. ದೇವಚಳ್ಳ ಸರಕಾರಿ ಶಾಲೆಯ ಆಟದ ಮೈದಾನದ ಬಳಿಯ ಮರವನ್ನು ನಿಯಮ ಬಾಹಿರವಾಗಿ ಕಡಿಯಲಾಗಿದೆ. ಇಲ್ಲಿ ಆಟದ ಮೈದಾನದ ಕಾಮಗಾರಿಯನ್ನು ನರೇಗಾ ಯೋಜನೆಯಡಿಯಲ್ಲಿ ಮಾಡಲಾಗಿದ್ದು ಕಾನೂನು ಮಾರ್ಗಸೂಚಿಯಂತೆ ಕಾಮಗಾರಿ ಮಾಡದೆ ಬಿಲ್ ಮಾಡಲಾಗಿದೆ. ಇದಕ್ಕೆ ಸಂಬಂಧಪಟ್ಟು ತೃಪ್ತಿದಾಯಕ ಕ್ರಮ ಕೈಗೊಂಡಿಲ್ಲ. ಈ ಕುರಿತು ತನಿಖೆ ನಡೆಸಬೇಕು ಎಂದು ಹರಿಪ್ರಸಾದ್ ಚಳ್ಳ ಪ್ರತ್ಯೇಕ ಎರಡು ದೂರು ದಾಖಲಿಸಿದರು.

ವಿವಿಧ ವಿಷಯಕ್ಕೆ ಸಂಬಂಧಪಟ್ಟು ಒಟ್ಟು ಏಳು ದೂರು ನೀಡಲಾಗಿದ್ದು ಆರು ದೂರು ದಾಖಲಿಸಲಾಗಿದೆ ಎಂದು ಡಿವೈಎಸ್‍ಪಿ ವಿಜಯಪ್ರಸಾದ್ ತಿಳಿಸಿದ್ದಾರೆ. ಕೆಲವೊಂದು ದೂರುಗಳ ಬಗ್ಗೆ ಸ್ಥಳದಲ್ಲಿಯೇ ಪರಿಶೀಲನೆ ನಡೆಸಿ ಸೂಕ್ತ ಕ್ರಮಕ್ಕೆ ಸೂಚಿಸಲಾಯಿತು.  ಲೋಕಾಯುಕ್ತ ಸಿಬ್ಬಂದಿಗಳಾದ ಸುರೇಂದ್ರ, ಲೋಕೇಶ್ ಉಪಸ್ಥಿತರಿದ್ದರು.

ತಾಲೂಕು ಪಂಚಾಯತ್ ವ್ಯವಸ್ಥಾಪಕ ಹರೀಶ್, ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ ಮತ್ತಿತರ ವಿವಿಧ ಇಲಾಖೆಗಳ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ

ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…

2 hours ago

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

12 hours ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

12 hours ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

13 hours ago

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

19 hours ago

ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ

ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…

20 hours ago