Advertisement
ಸುದ್ದಿಗಳು

ನಿವೇಶನ ರಹಿತರಿಗೆ ಭೂಮಿ ಒದಗಿಸಲು ನಗರ ಪಂಚಾಯತ್ ಕ್ರಮ ಕೈಗೊಂಡಿಲ್ಲ : ನ.ಪಂ.ಸದಸ್ಯರಿಂದ ಲೋಕಾಯುಕ್ತರಿಗೆ ದೂರು

Share

ಸುಳ್ಯ: ಸುಳ್ಯ ನಗರ ವ್ಯಾಪ್ತಿಯಲ್ಲಿ ಕಳೆದ 15 ವರ್ಷಗಳಿಂದ ಮನೆ ನಿವೇಶನಕ್ಕಾಗಿ 365 ಮಂದಿ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಸುಳ್ಯದಲ್ಲಿ ಸರಕಾರಿ ಭೂಮಿ ಲಭ್ಯವಿದ್ದರೂ ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸಿ ಭೂಮಿ ಪಡೆದು ನಿವೇಶನ ರಹಿತರಿಗೆ ನೀಡಲು ನಗರ ಪಂಚಾಯತ್ ಕ್ರಮ ಕೈಗೊಂಡಿಲ್ಲ ಎಂದು ನಗರ ಪಂಚಾಯತ್ ಸದಸ್ಯ ಕೆ.ಎಸ್.ಉಮ್ಮರ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಅಧಿಕಾರಿಗಳು ಬುಧವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂದರ್ಭದಲ್ಲಿ ಉಮ್ಮರ್ ದೂರು ದಾಖಲಿಸಿದ್ದಾರೆ. ಸುಳ್ಯ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಡಿವೈಎಸ್‍ಪಿ ವಿಜಯಪ್ರಸಾದ್ ನೇತೃತ್ವದಲ್ಲಿ ದೂರು ಸ್ವೀಕರಿಸಿದರು. ಸುಳ್ಯ ನಗರದಲ್ಲಿ ಪಂಚಾಯತ್  ಅನುಮತಿ ಪಡೆಯದೆ ವಾಣಿಜ್ಯ ಸಂಕೀರ್ಣ ನಿರ್ಮಾಣ ನಡೆಯುತ್ತಿದ್ದರೂ ನಗರ ಪಂಚಾಯತ್ ಅಧಿಕಾರಿಗಳು ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಉಮ್ಮರ್ ಮತ್ತೊಂದು ದೂರು ದಾಖಲಿಸಿದರು. ದೇವಚಳ್ಳ ಸರಕಾರಿ ಶಾಲೆಯ ಆಟದ ಮೈದಾನದ ಬಳಿಯ ಮರವನ್ನು ನಿಯಮ ಬಾಹಿರವಾಗಿ ಕಡಿಯಲಾಗಿದೆ. ಇಲ್ಲಿ ಆಟದ ಮೈದಾನದ ಕಾಮಗಾರಿಯನ್ನು ನರೇಗಾ ಯೋಜನೆಯಡಿಯಲ್ಲಿ ಮಾಡಲಾಗಿದ್ದು ಕಾನೂನು ಮಾರ್ಗಸೂಚಿಯಂತೆ ಕಾಮಗಾರಿ ಮಾಡದೆ ಬಿಲ್ ಮಾಡಲಾಗಿದೆ. ಇದಕ್ಕೆ ಸಂಬಂಧಪಟ್ಟು ತೃಪ್ತಿದಾಯಕ ಕ್ರಮ ಕೈಗೊಂಡಿಲ್ಲ. ಈ ಕುರಿತು ತನಿಖೆ ನಡೆಸಬೇಕು ಎಂದು ಹರಿಪ್ರಸಾದ್ ಚಳ್ಳ ಪ್ರತ್ಯೇಕ ಎರಡು ದೂರು ದಾಖಲಿಸಿದರು.

ವಿವಿಧ ವಿಷಯಕ್ಕೆ ಸಂಬಂಧಪಟ್ಟು ಒಟ್ಟು ಏಳು ದೂರು ನೀಡಲಾಗಿದ್ದು ಆರು ದೂರು ದಾಖಲಿಸಲಾಗಿದೆ ಎಂದು ಡಿವೈಎಸ್‍ಪಿ ವಿಜಯಪ್ರಸಾದ್ ತಿಳಿಸಿದ್ದಾರೆ. ಕೆಲವೊಂದು ದೂರುಗಳ ಬಗ್ಗೆ ಸ್ಥಳದಲ್ಲಿಯೇ ಪರಿಶೀಲನೆ ನಡೆಸಿ ಸೂಕ್ತ ಕ್ರಮಕ್ಕೆ ಸೂಚಿಸಲಾಯಿತು.  ಲೋಕಾಯುಕ್ತ ಸಿಬ್ಬಂದಿಗಳಾದ ಸುರೇಂದ್ರ, ಲೋಕೇಶ್ ಉಪಸ್ಥಿತರಿದ್ದರು.

ತಾಲೂಕು ಪಂಚಾಯತ್ ವ್ಯವಸ್ಥಾಪಕ ಹರೀಶ್, ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ ಮತ್ತಿತರ ವಿವಿಧ ಇಲಾಖೆಗಳ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

58 minutes ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

5 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

13 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

15 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

16 hours ago