ಸುಳ್ಯ: ಸುಳ್ಯ ನಗರ ವ್ಯಾಪ್ತಿಯಲ್ಲಿ ಕಳೆದ 15 ವರ್ಷಗಳಿಂದ ಮನೆ ನಿವೇಶನಕ್ಕಾಗಿ 365 ಮಂದಿ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಸುಳ್ಯದಲ್ಲಿ ಸರಕಾರಿ ಭೂಮಿ ಲಭ್ಯವಿದ್ದರೂ ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸಿ ಭೂಮಿ ಪಡೆದು ನಿವೇಶನ ರಹಿತರಿಗೆ ನೀಡಲು ನಗರ ಪಂಚಾಯತ್ ಕ್ರಮ ಕೈಗೊಂಡಿಲ್ಲ ಎಂದು ನಗರ ಪಂಚಾಯತ್ ಸದಸ್ಯ ಕೆ.ಎಸ್.ಉಮ್ಮರ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಅಧಿಕಾರಿಗಳು ಬುಧವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂದರ್ಭದಲ್ಲಿ ಉಮ್ಮರ್ ದೂರು ದಾಖಲಿಸಿದ್ದಾರೆ. ಸುಳ್ಯ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ವಿಜಯಪ್ರಸಾದ್ ನೇತೃತ್ವದಲ್ಲಿ ದೂರು ಸ್ವೀಕರಿಸಿದರು. ಸುಳ್ಯ ನಗರದಲ್ಲಿ ಪಂಚಾಯತ್ ಅನುಮತಿ ಪಡೆಯದೆ ವಾಣಿಜ್ಯ ಸಂಕೀರ್ಣ ನಿರ್ಮಾಣ ನಡೆಯುತ್ತಿದ್ದರೂ ನಗರ ಪಂಚಾಯತ್ ಅಧಿಕಾರಿಗಳು ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಉಮ್ಮರ್ ಮತ್ತೊಂದು ದೂರು ದಾಖಲಿಸಿದರು. ದೇವಚಳ್ಳ ಸರಕಾರಿ ಶಾಲೆಯ ಆಟದ ಮೈದಾನದ ಬಳಿಯ ಮರವನ್ನು ನಿಯಮ ಬಾಹಿರವಾಗಿ ಕಡಿಯಲಾಗಿದೆ. ಇಲ್ಲಿ ಆಟದ ಮೈದಾನದ ಕಾಮಗಾರಿಯನ್ನು ನರೇಗಾ ಯೋಜನೆಯಡಿಯಲ್ಲಿ ಮಾಡಲಾಗಿದ್ದು ಕಾನೂನು ಮಾರ್ಗಸೂಚಿಯಂತೆ ಕಾಮಗಾರಿ ಮಾಡದೆ ಬಿಲ್ ಮಾಡಲಾಗಿದೆ. ಇದಕ್ಕೆ ಸಂಬಂಧಪಟ್ಟು ತೃಪ್ತಿದಾಯಕ ಕ್ರಮ ಕೈಗೊಂಡಿಲ್ಲ. ಈ ಕುರಿತು ತನಿಖೆ ನಡೆಸಬೇಕು ಎಂದು ಹರಿಪ್ರಸಾದ್ ಚಳ್ಳ ಪ್ರತ್ಯೇಕ ಎರಡು ದೂರು ದಾಖಲಿಸಿದರು.
ವಿವಿಧ ವಿಷಯಕ್ಕೆ ಸಂಬಂಧಪಟ್ಟು ಒಟ್ಟು ಏಳು ದೂರು ನೀಡಲಾಗಿದ್ದು ಆರು ದೂರು ದಾಖಲಿಸಲಾಗಿದೆ ಎಂದು ಡಿವೈಎಸ್ಪಿ ವಿಜಯಪ್ರಸಾದ್ ತಿಳಿಸಿದ್ದಾರೆ. ಕೆಲವೊಂದು ದೂರುಗಳ ಬಗ್ಗೆ ಸ್ಥಳದಲ್ಲಿಯೇ ಪರಿಶೀಲನೆ ನಡೆಸಿ ಸೂಕ್ತ ಕ್ರಮಕ್ಕೆ ಸೂಚಿಸಲಾಯಿತು. ಲೋಕಾಯುಕ್ತ ಸಿಬ್ಬಂದಿಗಳಾದ ಸುರೇಂದ್ರ, ಲೋಕೇಶ್ ಉಪಸ್ಥಿತರಿದ್ದರು.
ತಾಲೂಕು ಪಂಚಾಯತ್ ವ್ಯವಸ್ಥಾಪಕ ಹರೀಶ್, ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ ಮತ್ತಿತರ ವಿವಿಧ ಇಲಾಖೆಗಳ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…