ನವದೆಹಲಿ: ಅರಬ್ಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತವು ಈಗ ನಿಸರ್ಗ ಚಂಡಮಾರುತವಾಗಿ ಅಬ್ಬರಿಸಿ ಮಹಾರಾಷ್ಟ್ರದ ಕರಾವಳಿ ಕಡೆಗೆ ಚಲಿಸಿದ್ದು ಜೂ.3 ರಂದು ಮಹಾರಾಷ್ಟ್ರ ಕರಾವಳಿಗೆ ನಿಸರ್ಗ ಚಂಡಮಾರುತವು ಅಪ್ಪಳಿಸಲಿದ್ದು, ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಈಗಾಗಲೇ ಮಹಾರಾಷ್ಟ್ರದಲ್ಲಿ ಚಂಡಮಾರುತ ಎದುರಿಸಲು ಸಕಲ ಸಿದ್ಧತೆ ಮಾಡಲಾಗಿದೆ. ಚಂಡಮಾರುತದ ಕಾರಣದಿಂದ ಗೋವಾ ಸೇರಿದಂತೆ ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಸುಮಾರು ಒಂದು ಶತಮಾನದ ಬಳಿಕ ಮುಂಬೈ ಮೊದಲ ಚಂಡಮಾರುತ ಸಮೀಪಿಸುತ್ತಿದ್ದಂತೆ, ಮುಂಬೈನಲ್ಲಿ ವಾಯುವಿಹಾರ ಮತ್ತು ಕಡಲತೀರಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ. ಸದ್ಯ ಚಂಡಮಾರುತವು ಸುಮಾರು 110 ರಿಂದ 120 ಕಿಲೋ ಮೀಟರ್ ವೇಗದಲ್ಲಿದ್ದು ಜೂನ್ 3 ರ ಮಧ್ಯಾಹ್ನ ಮುಂಬೈನಿಂದ ದಕ್ಷಿಣಕ್ಕೆ 94 ಕಿ.ಮೀ ದೂರದಲ್ಲಿರುವ ಅಲಿಬಾಗ್ ಪ್ರದೇಶಕ್ಕೆ 100 ಕಿಲೋ ಮೀಟರ್ ವೇಗದಲ್ಲಿ ಅಪ್ಪಳಿಸುವ ಸಾಧ್ಯತೆ ಇದೆ. ಹೀಗಾಗಿ ಮಹಾರಾಷ್ಟ್ರದ ಉತ್ತರ ಕರಾವಳಿ ಭಾಗ ಮತ್ತು ಗುಜರಾತ್ ನ ದಕ್ಷಿಣ ಕರಾವಳಿ ಭಾಗದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಚಂಡಮಾರುತದ ಕಾರಣದಿಂದ ಪಾಲ್ಘರ್, ಪುಣೆ, ಥಾಣೆ, ಮುಂಬೈ, ರಾಯಗಡ್, ಧುಲೆ ಮತ್ತು ನಂದೂರ್ಬಾರ್, ನಾಸಿಕ್ ನಾಳೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಚಂಡಮಾರುತದ ಹಾನಿ ಎದುರಿಸಲು 15 ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳು ದೌಡು ಮಹಾರಾಷ್ಟ್ರದಲ್ಲಿ ನಿಸರ್ಗ ಚಂಡಮಾರುತದ ಭೀತಿ ಹಿನ್ನೆಲೆ ಒಟ್ಟು 15 ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳನ್ನು ಏಳು ನಗರಗಳಲ್ಲಿ ಮುನ್ನೆಚ್ಚರಿಕೆಯಾಗಿ ನಿಯೋಜನೆ ಮಾಡಲಾಗಿದೆ. ಮುಂಬೈ – 3, ರಾಯಘಡ್ – 4, ಪಲ್ಘರ್ – 2, ಥಾಣೆ – 2, ರತ್ನಗಿರಿ – 2, ಸಿಂಧುದುರ್ಗ – 1, ನವಮುಂಬೈ – 1 ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ನಿಯೋಜನೆ ಮಾಡಲಾಗಿದೆ.
ಈ ನಡುವೆ ನೈರುತ್ಯ ಚಂಡಮಾರುತ ಪ್ರಾರಂಭವಾದ ಒಂದು ದಿನದ ನಂತರ ಕೇರಳದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಕೇರಳ ರಾಜ್ಯ ರಾಜಧಾನಿ ಸೇರಿದಂತೆ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.ಕೇರಳದ ಮೂರು ಉತ್ತರ ಜಿಲ್ಲೆಗಳಾದ ಕೋಝಿಕೋಡ್, ಕಣ್ಣೂರು ಮತ್ತು ಕಾಸರಗೋಡಿನಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. 6.4 ಸೆಂ.ಮೀ ನಿಂದ 11.5 ಸೆಂ.ಮೀಟರ್ ವರೆಗೆ ಮಳೆಯಾಗಲಿದ್ದು, 11.5 ಸೆಂ.ಮೀ ನಿಂದ 20.4 ಸೆಂ.ಮೀ.ವರೆಗಿನ ಭಾರಿ ಮಳೆಯಾಗುವ ಎಚ್ಚರಿಕೆ ಇದೆ ಎಂದು ಭಾರತ ಹವಾಮಾನ ಇಲಾಖೆ ಇಲಾಖೆ ತಿಳಿಸಿದೆ.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…