ನವದೆಹಲಿ: ಅರಬ್ಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತವು ಈಗ ನಿಸರ್ಗ ಚಂಡಮಾರುತವಾಗಿ ಅಬ್ಬರಿಸಿ ಮಹಾರಾಷ್ಟ್ರದ ಕರಾವಳಿ ಕಡೆಗೆ ಚಲಿಸಿದ್ದು ಜೂ.3 ರಂದು ಮಹಾರಾಷ್ಟ್ರ ಕರಾವಳಿಗೆ ನಿಸರ್ಗ ಚಂಡಮಾರುತವು ಅಪ್ಪಳಿಸಲಿದ್ದು, ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಈಗಾಗಲೇ ಮಹಾರಾಷ್ಟ್ರದಲ್ಲಿ ಚಂಡಮಾರುತ ಎದುರಿಸಲು ಸಕಲ ಸಿದ್ಧತೆ ಮಾಡಲಾಗಿದೆ. ಚಂಡಮಾರುತದ ಕಾರಣದಿಂದ ಗೋವಾ ಸೇರಿದಂತೆ ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಸುಮಾರು ಒಂದು ಶತಮಾನದ ಬಳಿಕ ಮುಂಬೈ ಮೊದಲ ಚಂಡಮಾರುತ ಸಮೀಪಿಸುತ್ತಿದ್ದಂತೆ, ಮುಂಬೈನಲ್ಲಿ ವಾಯುವಿಹಾರ ಮತ್ತು ಕಡಲತೀರಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ. ಸದ್ಯ ಚಂಡಮಾರುತವು ಸುಮಾರು 110 ರಿಂದ 120 ಕಿಲೋ ಮೀಟರ್ ವೇಗದಲ್ಲಿದ್ದು ಜೂನ್ 3 ರ ಮಧ್ಯಾಹ್ನ ಮುಂಬೈನಿಂದ ದಕ್ಷಿಣಕ್ಕೆ 94 ಕಿ.ಮೀ ದೂರದಲ್ಲಿರುವ ಅಲಿಬಾಗ್ ಪ್ರದೇಶಕ್ಕೆ 100 ಕಿಲೋ ಮೀಟರ್ ವೇಗದಲ್ಲಿ ಅಪ್ಪಳಿಸುವ ಸಾಧ್ಯತೆ ಇದೆ. ಹೀಗಾಗಿ ಮಹಾರಾಷ್ಟ್ರದ ಉತ್ತರ ಕರಾವಳಿ ಭಾಗ ಮತ್ತು ಗುಜರಾತ್ ನ ದಕ್ಷಿಣ ಕರಾವಳಿ ಭಾಗದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಚಂಡಮಾರುತದ ಕಾರಣದಿಂದ ಪಾಲ್ಘರ್, ಪುಣೆ, ಥಾಣೆ, ಮುಂಬೈ, ರಾಯಗಡ್, ಧುಲೆ ಮತ್ತು ನಂದೂರ್ಬಾರ್, ನಾಸಿಕ್ ನಾಳೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಚಂಡಮಾರುತದ ಹಾನಿ ಎದುರಿಸಲು 15 ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳು ದೌಡು ಮಹಾರಾಷ್ಟ್ರದಲ್ಲಿ ನಿಸರ್ಗ ಚಂಡಮಾರುತದ ಭೀತಿ ಹಿನ್ನೆಲೆ ಒಟ್ಟು 15 ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳನ್ನು ಏಳು ನಗರಗಳಲ್ಲಿ ಮುನ್ನೆಚ್ಚರಿಕೆಯಾಗಿ ನಿಯೋಜನೆ ಮಾಡಲಾಗಿದೆ. ಮುಂಬೈ – 3, ರಾಯಘಡ್ – 4, ಪಲ್ಘರ್ – 2, ಥಾಣೆ – 2, ರತ್ನಗಿರಿ – 2, ಸಿಂಧುದುರ್ಗ – 1, ನವಮುಂಬೈ – 1 ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ನಿಯೋಜನೆ ಮಾಡಲಾಗಿದೆ.
ಈ ನಡುವೆ ನೈರುತ್ಯ ಚಂಡಮಾರುತ ಪ್ರಾರಂಭವಾದ ಒಂದು ದಿನದ ನಂತರ ಕೇರಳದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಕೇರಳ ರಾಜ್ಯ ರಾಜಧಾನಿ ಸೇರಿದಂತೆ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.ಕೇರಳದ ಮೂರು ಉತ್ತರ ಜಿಲ್ಲೆಗಳಾದ ಕೋಝಿಕೋಡ್, ಕಣ್ಣೂರು ಮತ್ತು ಕಾಸರಗೋಡಿನಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. 6.4 ಸೆಂ.ಮೀ ನಿಂದ 11.5 ಸೆಂ.ಮೀಟರ್ ವರೆಗೆ ಮಳೆಯಾಗಲಿದ್ದು, 11.5 ಸೆಂ.ಮೀ ನಿಂದ 20.4 ಸೆಂ.ಮೀ.ವರೆಗಿನ ಭಾರಿ ಮಳೆಯಾಗುವ ಎಚ್ಚರಿಕೆ ಇದೆ ಎಂದು ಭಾರತ ಹವಾಮಾನ ಇಲಾಖೆ ಇಲಾಖೆ ತಿಳಿಸಿದೆ.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…