ಸುಳ್ಯ: ಸುಳ್ಯ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ತನ್ನ ವಾರ್ಡಿನ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ “ನಮ್ಮೂರ ಪ್ರತಿಭೆ’ ಎಂಬ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದ ಪ್ರಥಮ ಹಂತವಾಗಿ ಬೂಡು ವಾರ್ಡಿನ ಪ್ರತಿಭೆ ಅಖಿಲ ಭಾರತ ಮಟ್ಟದ ನೀಟ್ ಪ್ರವೇಶ ಪರೀಕ್ಷೆಯಲ್ಲಿ 1902ನೇ ಸ್ಥಾನ ಪಡೆದ ಅಮಿಷಾ.ಬಿ ಸೋಮಯಾಗಿಯವರನ್ನು ಸನ್ಮಾನಿಸಲಾಯಿತು. ಸುಳ್ಯ ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ ಅಮಿಷಾ. ಬಿ.ಸೋಮಯಾಗಿಯವರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಲೆನಾಡು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಿಯಾಝ್ ಕಟ್ಟೆಕ್ಕಾರ್, ಇನ್ನರ್ವ್ಹೀಲ್ ಕ್ಲಬ್ ಐಎಸ್ಒ ಲತಾ.ಎಂ ರೈ, ಮಲೆನಾಡು ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ಸಿದ್ದೀಕ್ ಕೊಕ್ಕೋ, ಶರೀಫ್ ಜಟ್ಟಿಪಳ್ಳ, ಸುನೀಲ್ ಕೇರ್ಪಳ, ಶಿಹಾಬ್ ಬೂಡು, ಶಹೀದ್ ಪಾರೆ ಮತ್ತಿತರರು ಉಪಸ್ಥಿತರಿದ್ದರು. ರಫೀಕ್ ಚೆಂಗಳ ಕಾರ್ಯಕ್ರಮ ನಿರೂಪಿಸಿದರು.
ಅಮಿಷಾ ಬಿ.ಸೋಮಯಾಗಿ ಅಶೋಕ್ ಮೆಡಿಕಲ್ಸ್ನ ಬಾಲಕೃಷ್ಣ ಸೋಮಯಾಗಿ ಮತ್ತು ಸೌಮ್ಯ ದಂಪತಿಯ ಪುತ್ರಿ .
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…