Categories: ಮಾಹಿತಿ

ನೀತಿ ಸಂಹಿತೆ ನೆಪದಲ್ಲಿ ಅಭಿವೃದ್ಧಿಗೆ ಮೆಸ್ಕಾಂ ಅಡ್ಡಿ ಆರೋಪ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕುಕ್ಕೆ: ನೂರಕ್ಕೂ ಅಧಿಕ ಭಕ್ತರಿಂದ ಮತದಾನ ಬಹಿಷ್ಕಾರದ ಎಚ್ಚರಿಕೆ
ಸುಬ್ರಹ್ಮಣ್ಯ: ಮಾಸ್ಟರ್ ಪ್ಲಾನ್ ಯೋಜನೆಯಡಿ ಕುಕ್ಕೆ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಭಾಗವಾಗಿ ಕುಮಾರಧಾರೆ-ಕಾಶಿಕಟ್ಟೆ ನಡುವಿನ ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದು ಈ ವೇಳೆ ರಸ್ತೆ ಬದಿ ಇರುವ ಆರು ವಿದ್ಯುತ್ ಕಂಬಗಳನ್ನು ಮೆಸ್ಕಾಂ ಇಲಾಖೆ ತಾತ್ಕಾಲಿಕವಾಗಿ ಸ್ಥ್ಥಳಾಂತರಿಸಿ ಅಭಿವೃದ್ಧಿಗೆ ಸಹಕರಿಸದೆ ಇರುವುದಕ್ಕೆ ಕ್ಷೇತ್ರದ ಭಕ್ತರು ಅಸಮಧಾನಗೊಂಡಿದ್ದು, ಅಧಿಕಾರಿಗಳ ಬೇಜಾವಾಬ್ದಾರಿ ವರ್ತನೆಗೆ ಬೇಸತ್ತು ನೂರಾರು ಮಂದಿ ಭಕ್ತರು ಈ ಬಾರಿಯ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ.
ಮಸ್ಕಾಂ ಇಲಾಖಾಧಿಕಾರಿಗಳು ಚುನಾವಣೆ ನೀತಿ ಸಂಹಿತೆ ಕಾರಣವೊಡ್ಡಿ ಸ್ಥಳಾಂತರಿಸಲು ವ್ಯವಸ್ಥೆಗಳನ್ನು ಮಾಡುತಿಲ್ಲ. ಅನುಮತಿಗಾಗಿ ಚುನಾವಣೆ ಅಧಿಕಾರಿಗಳಿಗೂ ದೇವಸ್ಥಾನದ ಕಡೆಯಿಂದ ಮನವಿಯನ್ನು ನೀಡಿ ಅನುಮತಿಗೆ ಕೇಳಲಾಗಿದೆ. ಇದುವರೆಗೂ ಅದಕ್ಕೆ ಉತ್ತರ ಬಂದಿಲ್ಲ. ಕಂಬ ತೆರವುಗೊಳಿಸದೆ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ರಸ್ತೆ ಅಗೆದಿರಿಸಲಾಗಿದ್ದು ಸಾರ್ವಜನಿಕರ ಓಡಾಟಕ್ಕೆ ಅನಾನುಕೂಲವಾಗುತ್ತಿದೆ. ಕುಮಾರಧಾರ ಸ್ವಾಗತ ಗೋಪುರದಿಂದ ರಸ್ತೆಗೆ ಜಲ್ಲಿ ಹಾಕದೆ ಧೂಳು, ಕೆಸರು ತುಂಬಿಕೊಂಡು ಸಂಚರಿಸಲು ಕಷ್ಟವಾಗಿದೆ. ವಾಹನಗಳಲ್ಲಿ ಸಂಚರಿಸುವಾಗ ಅಪಾಯಕಾರಿ ಸನ್ನಿವೇಶಗಳು ನಿರ್ಮಾಣಗೊಂಡು ಅಪಘಾತಗಳು ಸಂಭವಿಸುತ್ತಿವೆ. ತತ್‍ಕ್ಷಣಕ್ಕೆ ಆರಂಭ ಹಂತದ ಆರು ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಿದಲ್ಲಿ ಕಾಮಗಾರಿ ಮುಂದುವರೆಸಲು ಅನುಕೂಲವಾಗುತ್ತದೆ. ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಸ್ಥಳಾಂತರಿಸದೆ ಇರುವುದರಿಂದ ಸಾರ್ವಜನಿಕರಿಗೆ, ಕ್ಷೇತ್ರಕ್ಕೆ ಬರುವ ಭಕ್ತರಿಗೆ ತೊಂದರೆ ನೀಡಿದಂತಾಗಿದೆ. ಮಂಜೂರುಗೊಂಡ ಕಾಮಗಾರಿಗಳಿಗೆ ಅಧಿಕಾರಿಗಳು ಅಡ್ಡಿಪಡಿಸುತ್ತಿರುವುದರಿಂದ ಭಕ್ತರಿಗೆ ತೊಂದರೆ ಆಗುತ್ತಿರುವ ಕಾರಣ ನಾವು ಈ ಬಾರಿಯ ಚುನಾವಣೆಯನ್ನು ಬಹಿಷ್ಕರಿಸುತ್ತಿದ್ದೇವೆ ಎಂದು ನೂರಕ್ಕೂ ಅಧಿಕ ಮಂದಿ ಬಹಿಷ್ಕಾರದ ಸಹಿ ಮಾಡಿರುವ ಮನವಿಯನ್ನು ಚುನಾವಣಾ ಆಯೋಗದ ಅಧಿಕಾರಿಗಳಿಗೆ ಹಾಗೂ ಸಂಬಂಧಿಸಿದ ಇತರೆ ಅಧಿಕಾರಿಗಳಿಗೆ ಕಳುಹಿಸಿಕೊಟ್ಟಿದ್ದಾರೆ.

Advertisement
Advertisement
Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

‌ರಾಜ್ಯಮಟ್ಟದ ಚೆಸ್ ಚಾಂಪಿಯನ್‌ ಶಿಪ್ | ರಾಷ್ಟ್ರಮಟ್ಟಕ್ಕೆ ರವೀಶ್‌ ಕೋಟೆ ಆಯ್ಕೆ

ದಕ್ಷಿಣ ಕನ್ನಡದ ಚೆಸ್‌ ಆಟಗಾರ ರವೀಶ್ ಕೋಟೆ‌ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

58 minutes ago

ಬಾಹ್ಯಾಕಾಶ ನಿಲ್ದಾಣದಲ್ಲಿರುವ ಶುಕ್ಲಾ ಜೊತೆ ಪ್ರಧಾನಿ ವಿಡಿಯೋ ಸಂವಾದ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ   ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್  ಶುಭಾಂಶು ಶುಕ್ಲಾ ಅವರೊಂದಿಗೆ…

2 hours ago

ಗ್ರಾಮೀಣರಿಗೆ ಆಧುನಿಕ ತಂತ್ರಜ್ಞಾನದ ಮೂಲಕ ಸೇವೆ | ಸಿಎಸ್‌ಸಿ ಮೊಬೈಲ್‌ ವಾಹನ |

ಭಾರತ್ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸಾರ್ವಜನಿಕರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಡಿಜಿಟಲ್…

2 hours ago

ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಸೌಲಭ್ಯಕ್ಕೆ ರೈತರ ಸೌಲಭ್ಯಕ್ಕೆ ಆಹ್ವಾನ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ…

2 hours ago

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ಸಾಮಾನ್ಯ

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಉತ್ತರ ಒಳನಾಡಿನಲ್ಲಿ…

2 hours ago

ಕೋಲಾರದ 54 ಸಾವಿರ ಹೆಕ್ಟೇರ್‌ನಲ್ಲಿ ಮಾವು ಬೆಳೆ | ಈ ಬಾರಿ ಮಾವು ಬೆಳೆ ಧಾರಣೆ ತೀವ್ರ ಕುಸಿತ

ರಾಜ್ಯದಲ್ಲಿ ಸುಮಾರು ಒಂದೂವರೆ ಲಕ್ಷ ಹೆಕ್ಟೇರ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಇದರಲ್ಲಿ ಕೋಲಾರ…

10 hours ago