Categories: ಮಾಹಿತಿ

ನೀತಿ ಸಂಹಿತೆ ನೆಪದಲ್ಲಿ ಅಭಿವೃದ್ಧಿಗೆ ಮೆಸ್ಕಾಂ ಅಡ್ಡಿ ಆರೋಪ

Share

ಕುಕ್ಕೆ: ನೂರಕ್ಕೂ ಅಧಿಕ ಭಕ್ತರಿಂದ ಮತದಾನ ಬಹಿಷ್ಕಾರದ ಎಚ್ಚರಿಕೆ
ಸುಬ್ರಹ್ಮಣ್ಯ: ಮಾಸ್ಟರ್ ಪ್ಲಾನ್ ಯೋಜನೆಯಡಿ ಕುಕ್ಕೆ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಭಾಗವಾಗಿ ಕುಮಾರಧಾರೆ-ಕಾಶಿಕಟ್ಟೆ ನಡುವಿನ ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದು ಈ ವೇಳೆ ರಸ್ತೆ ಬದಿ ಇರುವ ಆರು ವಿದ್ಯುತ್ ಕಂಬಗಳನ್ನು ಮೆಸ್ಕಾಂ ಇಲಾಖೆ ತಾತ್ಕಾಲಿಕವಾಗಿ ಸ್ಥ್ಥಳಾಂತರಿಸಿ ಅಭಿವೃದ್ಧಿಗೆ ಸಹಕರಿಸದೆ ಇರುವುದಕ್ಕೆ ಕ್ಷೇತ್ರದ ಭಕ್ತರು ಅಸಮಧಾನಗೊಂಡಿದ್ದು, ಅಧಿಕಾರಿಗಳ ಬೇಜಾವಾಬ್ದಾರಿ ವರ್ತನೆಗೆ ಬೇಸತ್ತು ನೂರಾರು ಮಂದಿ ಭಕ್ತರು ಈ ಬಾರಿಯ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ.
ಮಸ್ಕಾಂ ಇಲಾಖಾಧಿಕಾರಿಗಳು ಚುನಾವಣೆ ನೀತಿ ಸಂಹಿತೆ ಕಾರಣವೊಡ್ಡಿ ಸ್ಥಳಾಂತರಿಸಲು ವ್ಯವಸ್ಥೆಗಳನ್ನು ಮಾಡುತಿಲ್ಲ. ಅನುಮತಿಗಾಗಿ ಚುನಾವಣೆ ಅಧಿಕಾರಿಗಳಿಗೂ ದೇವಸ್ಥಾನದ ಕಡೆಯಿಂದ ಮನವಿಯನ್ನು ನೀಡಿ ಅನುಮತಿಗೆ ಕೇಳಲಾಗಿದೆ. ಇದುವರೆಗೂ ಅದಕ್ಕೆ ಉತ್ತರ ಬಂದಿಲ್ಲ. ಕಂಬ ತೆರವುಗೊಳಿಸದೆ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ರಸ್ತೆ ಅಗೆದಿರಿಸಲಾಗಿದ್ದು ಸಾರ್ವಜನಿಕರ ಓಡಾಟಕ್ಕೆ ಅನಾನುಕೂಲವಾಗುತ್ತಿದೆ. ಕುಮಾರಧಾರ ಸ್ವಾಗತ ಗೋಪುರದಿಂದ ರಸ್ತೆಗೆ ಜಲ್ಲಿ ಹಾಕದೆ ಧೂಳು, ಕೆಸರು ತುಂಬಿಕೊಂಡು ಸಂಚರಿಸಲು ಕಷ್ಟವಾಗಿದೆ. ವಾಹನಗಳಲ್ಲಿ ಸಂಚರಿಸುವಾಗ ಅಪಾಯಕಾರಿ ಸನ್ನಿವೇಶಗಳು ನಿರ್ಮಾಣಗೊಂಡು ಅಪಘಾತಗಳು ಸಂಭವಿಸುತ್ತಿವೆ. ತತ್‍ಕ್ಷಣಕ್ಕೆ ಆರಂಭ ಹಂತದ ಆರು ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಿದಲ್ಲಿ ಕಾಮಗಾರಿ ಮುಂದುವರೆಸಲು ಅನುಕೂಲವಾಗುತ್ತದೆ. ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಸ್ಥಳಾಂತರಿಸದೆ ಇರುವುದರಿಂದ ಸಾರ್ವಜನಿಕರಿಗೆ, ಕ್ಷೇತ್ರಕ್ಕೆ ಬರುವ ಭಕ್ತರಿಗೆ ತೊಂದರೆ ನೀಡಿದಂತಾಗಿದೆ. ಮಂಜೂರುಗೊಂಡ ಕಾಮಗಾರಿಗಳಿಗೆ ಅಧಿಕಾರಿಗಳು ಅಡ್ಡಿಪಡಿಸುತ್ತಿರುವುದರಿಂದ ಭಕ್ತರಿಗೆ ತೊಂದರೆ ಆಗುತ್ತಿರುವ ಕಾರಣ ನಾವು ಈ ಬಾರಿಯ ಚುನಾವಣೆಯನ್ನು ಬಹಿಷ್ಕರಿಸುತ್ತಿದ್ದೇವೆ ಎಂದು ನೂರಕ್ಕೂ ಅಧಿಕ ಮಂದಿ ಬಹಿಷ್ಕಾರದ ಸಹಿ ಮಾಡಿರುವ ಮನವಿಯನ್ನು ಚುನಾವಣಾ ಆಯೋಗದ ಅಧಿಕಾರಿಗಳಿಗೆ ಹಾಗೂ ಸಂಬಂಧಿಸಿದ ಇತರೆ ಅಧಿಕಾರಿಗಳಿಗೆ ಕಳುಹಿಸಿಕೊಟ್ಟಿದ್ದಾರೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…

2 hours ago

ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…

2 hours ago

ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |

ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…

2 hours ago

ಅಕ್ರಮ ಮರಳು ಗಣಿಗಾರಿಕೆ | 5 ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ಸಂಗ್ರಹ

ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…

2 hours ago

ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದರೆ ಯಶಸ್ಸು ಲಭಿಸುತ್ತದೆ – ಶಿಕ್ಷಣ ತಜ್ಞ ಗುರುರಾಜ ಕರ್ಜಗಿ

ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು, ಪೂರ್ವಭಾವಿ ತಯಾರಿ ಮಾಡಿಕೊಂಡು, ಆತ್ಮವಿಶ್ವಾಸದಿಂದ ಪರೀಕ್ಷೆ…

2 hours ago

ಎಪ್ರಿಲ್‌ನಲ್ಲಿ ಶುಕ್ರನು 9 ರಾಶಿಗಳಲ್ಲಿ ವಿವಿಧ ಪರಿಣಾಮಗಳನ್ನು ಉಂಟುಮಾಡಬಹುದು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490.

2 hours ago