Advertisement
Categories: ಮಾಹಿತಿ

ನೀತಿ ಸಂಹಿತೆ ನೆಪದಲ್ಲಿ ಅಭಿವೃದ್ಧಿಗೆ ಮೆಸ್ಕಾಂ ಅಡ್ಡಿ ಆರೋಪ

Share

ಕುಕ್ಕೆ: ನೂರಕ್ಕೂ ಅಧಿಕ ಭಕ್ತರಿಂದ ಮತದಾನ ಬಹಿಷ್ಕಾರದ ಎಚ್ಚರಿಕೆ
ಸುಬ್ರಹ್ಮಣ್ಯ: ಮಾಸ್ಟರ್ ಪ್ಲಾನ್ ಯೋಜನೆಯಡಿ ಕುಕ್ಕೆ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಭಾಗವಾಗಿ ಕುಮಾರಧಾರೆ-ಕಾಶಿಕಟ್ಟೆ ನಡುವಿನ ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದು ಈ ವೇಳೆ ರಸ್ತೆ ಬದಿ ಇರುವ ಆರು ವಿದ್ಯುತ್ ಕಂಬಗಳನ್ನು ಮೆಸ್ಕಾಂ ಇಲಾಖೆ ತಾತ್ಕಾಲಿಕವಾಗಿ ಸ್ಥ್ಥಳಾಂತರಿಸಿ ಅಭಿವೃದ್ಧಿಗೆ ಸಹಕರಿಸದೆ ಇರುವುದಕ್ಕೆ ಕ್ಷೇತ್ರದ ಭಕ್ತರು ಅಸಮಧಾನಗೊಂಡಿದ್ದು, ಅಧಿಕಾರಿಗಳ ಬೇಜಾವಾಬ್ದಾರಿ ವರ್ತನೆಗೆ ಬೇಸತ್ತು ನೂರಾರು ಮಂದಿ ಭಕ್ತರು ಈ ಬಾರಿಯ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ.
ಮಸ್ಕಾಂ ಇಲಾಖಾಧಿಕಾರಿಗಳು ಚುನಾವಣೆ ನೀತಿ ಸಂಹಿತೆ ಕಾರಣವೊಡ್ಡಿ ಸ್ಥಳಾಂತರಿಸಲು ವ್ಯವಸ್ಥೆಗಳನ್ನು ಮಾಡುತಿಲ್ಲ. ಅನುಮತಿಗಾಗಿ ಚುನಾವಣೆ ಅಧಿಕಾರಿಗಳಿಗೂ ದೇವಸ್ಥಾನದ ಕಡೆಯಿಂದ ಮನವಿಯನ್ನು ನೀಡಿ ಅನುಮತಿಗೆ ಕೇಳಲಾಗಿದೆ. ಇದುವರೆಗೂ ಅದಕ್ಕೆ ಉತ್ತರ ಬಂದಿಲ್ಲ. ಕಂಬ ತೆರವುಗೊಳಿಸದೆ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ರಸ್ತೆ ಅಗೆದಿರಿಸಲಾಗಿದ್ದು ಸಾರ್ವಜನಿಕರ ಓಡಾಟಕ್ಕೆ ಅನಾನುಕೂಲವಾಗುತ್ತಿದೆ. ಕುಮಾರಧಾರ ಸ್ವಾಗತ ಗೋಪುರದಿಂದ ರಸ್ತೆಗೆ ಜಲ್ಲಿ ಹಾಕದೆ ಧೂಳು, ಕೆಸರು ತುಂಬಿಕೊಂಡು ಸಂಚರಿಸಲು ಕಷ್ಟವಾಗಿದೆ. ವಾಹನಗಳಲ್ಲಿ ಸಂಚರಿಸುವಾಗ ಅಪಾಯಕಾರಿ ಸನ್ನಿವೇಶಗಳು ನಿರ್ಮಾಣಗೊಂಡು ಅಪಘಾತಗಳು ಸಂಭವಿಸುತ್ತಿವೆ. ತತ್‍ಕ್ಷಣಕ್ಕೆ ಆರಂಭ ಹಂತದ ಆರು ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಿದಲ್ಲಿ ಕಾಮಗಾರಿ ಮುಂದುವರೆಸಲು ಅನುಕೂಲವಾಗುತ್ತದೆ. ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಸ್ಥಳಾಂತರಿಸದೆ ಇರುವುದರಿಂದ ಸಾರ್ವಜನಿಕರಿಗೆ, ಕ್ಷೇತ್ರಕ್ಕೆ ಬರುವ ಭಕ್ತರಿಗೆ ತೊಂದರೆ ನೀಡಿದಂತಾಗಿದೆ. ಮಂಜೂರುಗೊಂಡ ಕಾಮಗಾರಿಗಳಿಗೆ ಅಧಿಕಾರಿಗಳು ಅಡ್ಡಿಪಡಿಸುತ್ತಿರುವುದರಿಂದ ಭಕ್ತರಿಗೆ ತೊಂದರೆ ಆಗುತ್ತಿರುವ ಕಾರಣ ನಾವು ಈ ಬಾರಿಯ ಚುನಾವಣೆಯನ್ನು ಬಹಿಷ್ಕರಿಸುತ್ತಿದ್ದೇವೆ ಎಂದು ನೂರಕ್ಕೂ ಅಧಿಕ ಮಂದಿ ಬಹಿಷ್ಕಾರದ ಸಹಿ ಮಾಡಿರುವ ಮನವಿಯನ್ನು ಚುನಾವಣಾ ಆಯೋಗದ ಅಧಿಕಾರಿಗಳಿಗೆ ಹಾಗೂ ಸಂಬಂಧಿಸಿದ ಇತರೆ ಅಧಿಕಾರಿಗಳಿಗೆ ಕಳುಹಿಸಿಕೊಟ್ಟಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

6 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

19 hours ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

1 day ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

1 day ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

1 day ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

2 days ago