Advertisement
Categories: ಮಾಹಿತಿ

ನೀತಿ ಸಂಹಿತೆ ನೆಪದಲ್ಲಿ ಅಭಿವೃದ್ಧಿಗೆ ಮೆಸ್ಕಾಂ ಅಡ್ಡಿ ಆರೋಪ

Share

ಕುಕ್ಕೆ: ನೂರಕ್ಕೂ ಅಧಿಕ ಭಕ್ತರಿಂದ ಮತದಾನ ಬಹಿಷ್ಕಾರದ ಎಚ್ಚರಿಕೆ
ಸುಬ್ರಹ್ಮಣ್ಯ: ಮಾಸ್ಟರ್ ಪ್ಲಾನ್ ಯೋಜನೆಯಡಿ ಕುಕ್ಕೆ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಭಾಗವಾಗಿ ಕುಮಾರಧಾರೆ-ಕಾಶಿಕಟ್ಟೆ ನಡುವಿನ ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದು ಈ ವೇಳೆ ರಸ್ತೆ ಬದಿ ಇರುವ ಆರು ವಿದ್ಯುತ್ ಕಂಬಗಳನ್ನು ಮೆಸ್ಕಾಂ ಇಲಾಖೆ ತಾತ್ಕಾಲಿಕವಾಗಿ ಸ್ಥ್ಥಳಾಂತರಿಸಿ ಅಭಿವೃದ್ಧಿಗೆ ಸಹಕರಿಸದೆ ಇರುವುದಕ್ಕೆ ಕ್ಷೇತ್ರದ ಭಕ್ತರು ಅಸಮಧಾನಗೊಂಡಿದ್ದು, ಅಧಿಕಾರಿಗಳ ಬೇಜಾವಾಬ್ದಾರಿ ವರ್ತನೆಗೆ ಬೇಸತ್ತು ನೂರಾರು ಮಂದಿ ಭಕ್ತರು ಈ ಬಾರಿಯ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ.
ಮಸ್ಕಾಂ ಇಲಾಖಾಧಿಕಾರಿಗಳು ಚುನಾವಣೆ ನೀತಿ ಸಂಹಿತೆ ಕಾರಣವೊಡ್ಡಿ ಸ್ಥಳಾಂತರಿಸಲು ವ್ಯವಸ್ಥೆಗಳನ್ನು ಮಾಡುತಿಲ್ಲ. ಅನುಮತಿಗಾಗಿ ಚುನಾವಣೆ ಅಧಿಕಾರಿಗಳಿಗೂ ದೇವಸ್ಥಾನದ ಕಡೆಯಿಂದ ಮನವಿಯನ್ನು ನೀಡಿ ಅನುಮತಿಗೆ ಕೇಳಲಾಗಿದೆ. ಇದುವರೆಗೂ ಅದಕ್ಕೆ ಉತ್ತರ ಬಂದಿಲ್ಲ. ಕಂಬ ತೆರವುಗೊಳಿಸದೆ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ರಸ್ತೆ ಅಗೆದಿರಿಸಲಾಗಿದ್ದು ಸಾರ್ವಜನಿಕರ ಓಡಾಟಕ್ಕೆ ಅನಾನುಕೂಲವಾಗುತ್ತಿದೆ. ಕುಮಾರಧಾರ ಸ್ವಾಗತ ಗೋಪುರದಿಂದ ರಸ್ತೆಗೆ ಜಲ್ಲಿ ಹಾಕದೆ ಧೂಳು, ಕೆಸರು ತುಂಬಿಕೊಂಡು ಸಂಚರಿಸಲು ಕಷ್ಟವಾಗಿದೆ. ವಾಹನಗಳಲ್ಲಿ ಸಂಚರಿಸುವಾಗ ಅಪಾಯಕಾರಿ ಸನ್ನಿವೇಶಗಳು ನಿರ್ಮಾಣಗೊಂಡು ಅಪಘಾತಗಳು ಸಂಭವಿಸುತ್ತಿವೆ. ತತ್‍ಕ್ಷಣಕ್ಕೆ ಆರಂಭ ಹಂತದ ಆರು ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಿದಲ್ಲಿ ಕಾಮಗಾರಿ ಮುಂದುವರೆಸಲು ಅನುಕೂಲವಾಗುತ್ತದೆ. ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಸ್ಥಳಾಂತರಿಸದೆ ಇರುವುದರಿಂದ ಸಾರ್ವಜನಿಕರಿಗೆ, ಕ್ಷೇತ್ರಕ್ಕೆ ಬರುವ ಭಕ್ತರಿಗೆ ತೊಂದರೆ ನೀಡಿದಂತಾಗಿದೆ. ಮಂಜೂರುಗೊಂಡ ಕಾಮಗಾರಿಗಳಿಗೆ ಅಧಿಕಾರಿಗಳು ಅಡ್ಡಿಪಡಿಸುತ್ತಿರುವುದರಿಂದ ಭಕ್ತರಿಗೆ ತೊಂದರೆ ಆಗುತ್ತಿರುವ ಕಾರಣ ನಾವು ಈ ಬಾರಿಯ ಚುನಾವಣೆಯನ್ನು ಬಹಿಷ್ಕರಿಸುತ್ತಿದ್ದೇವೆ ಎಂದು ನೂರಕ್ಕೂ ಅಧಿಕ ಮಂದಿ ಬಹಿಷ್ಕಾರದ ಸಹಿ ಮಾಡಿರುವ ಮನವಿಯನ್ನು ಚುನಾವಣಾ ಆಯೋಗದ ಅಧಿಕಾರಿಗಳಿಗೆ ಹಾಗೂ ಸಂಬಂಧಿಸಿದ ಇತರೆ ಅಧಿಕಾರಿಗಳಿಗೆ ಕಳುಹಿಸಿಕೊಟ್ಟಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

13 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

16 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

17 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 day ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

1 day ago