Advertisement
Categories: ಮಾಹಿತಿ

ನೀತಿ ಸಂಹಿತೆ ನೆಪದಲ್ಲಿ ಅಭಿವೃದ್ಧಿಗೆ ಮೆಸ್ಕಾಂ ಅಡ್ಡಿ ಆರೋಪ

Share

ಕುಕ್ಕೆ: ನೂರಕ್ಕೂ ಅಧಿಕ ಭಕ್ತರಿಂದ ಮತದಾನ ಬಹಿಷ್ಕಾರದ ಎಚ್ಚರಿಕೆ
ಸುಬ್ರಹ್ಮಣ್ಯ: ಮಾಸ್ಟರ್ ಪ್ಲಾನ್ ಯೋಜನೆಯಡಿ ಕುಕ್ಕೆ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಭಾಗವಾಗಿ ಕುಮಾರಧಾರೆ-ಕಾಶಿಕಟ್ಟೆ ನಡುವಿನ ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದು ಈ ವೇಳೆ ರಸ್ತೆ ಬದಿ ಇರುವ ಆರು ವಿದ್ಯುತ್ ಕಂಬಗಳನ್ನು ಮೆಸ್ಕಾಂ ಇಲಾಖೆ ತಾತ್ಕಾಲಿಕವಾಗಿ ಸ್ಥ್ಥಳಾಂತರಿಸಿ ಅಭಿವೃದ್ಧಿಗೆ ಸಹಕರಿಸದೆ ಇರುವುದಕ್ಕೆ ಕ್ಷೇತ್ರದ ಭಕ್ತರು ಅಸಮಧಾನಗೊಂಡಿದ್ದು, ಅಧಿಕಾರಿಗಳ ಬೇಜಾವಾಬ್ದಾರಿ ವರ್ತನೆಗೆ ಬೇಸತ್ತು ನೂರಾರು ಮಂದಿ ಭಕ್ತರು ಈ ಬಾರಿಯ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ.
ಮಸ್ಕಾಂ ಇಲಾಖಾಧಿಕಾರಿಗಳು ಚುನಾವಣೆ ನೀತಿ ಸಂಹಿತೆ ಕಾರಣವೊಡ್ಡಿ ಸ್ಥಳಾಂತರಿಸಲು ವ್ಯವಸ್ಥೆಗಳನ್ನು ಮಾಡುತಿಲ್ಲ. ಅನುಮತಿಗಾಗಿ ಚುನಾವಣೆ ಅಧಿಕಾರಿಗಳಿಗೂ ದೇವಸ್ಥಾನದ ಕಡೆಯಿಂದ ಮನವಿಯನ್ನು ನೀಡಿ ಅನುಮತಿಗೆ ಕೇಳಲಾಗಿದೆ. ಇದುವರೆಗೂ ಅದಕ್ಕೆ ಉತ್ತರ ಬಂದಿಲ್ಲ. ಕಂಬ ತೆರವುಗೊಳಿಸದೆ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ರಸ್ತೆ ಅಗೆದಿರಿಸಲಾಗಿದ್ದು ಸಾರ್ವಜನಿಕರ ಓಡಾಟಕ್ಕೆ ಅನಾನುಕೂಲವಾಗುತ್ತಿದೆ. ಕುಮಾರಧಾರ ಸ್ವಾಗತ ಗೋಪುರದಿಂದ ರಸ್ತೆಗೆ ಜಲ್ಲಿ ಹಾಕದೆ ಧೂಳು, ಕೆಸರು ತುಂಬಿಕೊಂಡು ಸಂಚರಿಸಲು ಕಷ್ಟವಾಗಿದೆ. ವಾಹನಗಳಲ್ಲಿ ಸಂಚರಿಸುವಾಗ ಅಪಾಯಕಾರಿ ಸನ್ನಿವೇಶಗಳು ನಿರ್ಮಾಣಗೊಂಡು ಅಪಘಾತಗಳು ಸಂಭವಿಸುತ್ತಿವೆ. ತತ್‍ಕ್ಷಣಕ್ಕೆ ಆರಂಭ ಹಂತದ ಆರು ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಿದಲ್ಲಿ ಕಾಮಗಾರಿ ಮುಂದುವರೆಸಲು ಅನುಕೂಲವಾಗುತ್ತದೆ. ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಸ್ಥಳಾಂತರಿಸದೆ ಇರುವುದರಿಂದ ಸಾರ್ವಜನಿಕರಿಗೆ, ಕ್ಷೇತ್ರಕ್ಕೆ ಬರುವ ಭಕ್ತರಿಗೆ ತೊಂದರೆ ನೀಡಿದಂತಾಗಿದೆ. ಮಂಜೂರುಗೊಂಡ ಕಾಮಗಾರಿಗಳಿಗೆ ಅಧಿಕಾರಿಗಳು ಅಡ್ಡಿಪಡಿಸುತ್ತಿರುವುದರಿಂದ ಭಕ್ತರಿಗೆ ತೊಂದರೆ ಆಗುತ್ತಿರುವ ಕಾರಣ ನಾವು ಈ ಬಾರಿಯ ಚುನಾವಣೆಯನ್ನು ಬಹಿಷ್ಕರಿಸುತ್ತಿದ್ದೇವೆ ಎಂದು ನೂರಕ್ಕೂ ಅಧಿಕ ಮಂದಿ ಬಹಿಷ್ಕಾರದ ಸಹಿ ಮಾಡಿರುವ ಮನವಿಯನ್ನು ಚುನಾವಣಾ ಆಯೋಗದ ಅಧಿಕಾರಿಗಳಿಗೆ ಹಾಗೂ ಸಂಬಂಧಿಸಿದ ಇತರೆ ಅಧಿಕಾರಿಗಳಿಗೆ ಕಳುಹಿಸಿಕೊಟ್ಟಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ರೈತರ ಪಾಲಿಗೆ ನೆರವಾದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ : 17ನೇ ಕಂತಿನ ಹಣ ರೈತರ ಖಾತೆಗೆ ಯಾವಗ ಬರುತ್ತೆ..?

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌(PM Kisan) ಯೋಜನೆ ಆರಂಭವಾದಗಿಂದಲೂ ರೈತರ(Farmer) ಖಾತೆಗೆ ನೇರವಾಗಿ…

11 mins ago

ಇವರು ಎಲ್ಲಾ ಕುಂದುಕೊರತೆಗಳ ನಡುವೆಯೂ ಮತದಾನ ಮಾಡ್ತಾರೆ…! | ಅವರು ಎಲ್ಲಾ ಸೌಕರ್ಯ ಇದ್ದರೂ ಮತದಾನ ಮಾಡಲಾರರು..!

ನಗರದಲ್ಲಿ ಮತದಾನ ಕಡಿಮೆಯಾಗಿರುವ ಬಗ್ಗೆ ಹಾಗೂ ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ಪ್ರಬಂಧ…

51 mins ago

Karnataka Weather | 29-04-2024 | ರಾಜ್ಯದ ಹಲವು ಕಡೆ ಅಧಿಕ ತಾಪಮಾನ | ಮಲೆನಾಡು ಭಾಗದ ಕೆಲವು ಕಡೆ ಮಳೆ ನಿರೀಕ್ಷೆ |

ಈಗಿನಂತೆ ಅಧಿಕ ತಾಪಮಾನದ ವಾತಾವರಣದ ಇನ್ನೂ 3 ರಿಂದ 4 ದಿನಗಳ ಕಾಲ…

2 hours ago

ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ನಾಯಕ | ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…

3 hours ago

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

17 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

17 hours ago