Advertisement
Categories: ಮಾಹಿತಿ

ನೀತಿ ಸಂಹಿತೆ ನೆಪದಲ್ಲಿ ಅಭಿವೃದ್ಧಿಗೆ ಮೆಸ್ಕಾಂ ಅಡ್ಡಿ ಆರೋಪ

Share

ಕುಕ್ಕೆ: ನೂರಕ್ಕೂ ಅಧಿಕ ಭಕ್ತರಿಂದ ಮತದಾನ ಬಹಿಷ್ಕಾರದ ಎಚ್ಚರಿಕೆ
ಸುಬ್ರಹ್ಮಣ್ಯ: ಮಾಸ್ಟರ್ ಪ್ಲಾನ್ ಯೋಜನೆಯಡಿ ಕುಕ್ಕೆ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಭಾಗವಾಗಿ ಕುಮಾರಧಾರೆ-ಕಾಶಿಕಟ್ಟೆ ನಡುವಿನ ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದು ಈ ವೇಳೆ ರಸ್ತೆ ಬದಿ ಇರುವ ಆರು ವಿದ್ಯುತ್ ಕಂಬಗಳನ್ನು ಮೆಸ್ಕಾಂ ಇಲಾಖೆ ತಾತ್ಕಾಲಿಕವಾಗಿ ಸ್ಥ್ಥಳಾಂತರಿಸಿ ಅಭಿವೃದ್ಧಿಗೆ ಸಹಕರಿಸದೆ ಇರುವುದಕ್ಕೆ ಕ್ಷೇತ್ರದ ಭಕ್ತರು ಅಸಮಧಾನಗೊಂಡಿದ್ದು, ಅಧಿಕಾರಿಗಳ ಬೇಜಾವಾಬ್ದಾರಿ ವರ್ತನೆಗೆ ಬೇಸತ್ತು ನೂರಾರು ಮಂದಿ ಭಕ್ತರು ಈ ಬಾರಿಯ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ.
ಮಸ್ಕಾಂ ಇಲಾಖಾಧಿಕಾರಿಗಳು ಚುನಾವಣೆ ನೀತಿ ಸಂಹಿತೆ ಕಾರಣವೊಡ್ಡಿ ಸ್ಥಳಾಂತರಿಸಲು ವ್ಯವಸ್ಥೆಗಳನ್ನು ಮಾಡುತಿಲ್ಲ. ಅನುಮತಿಗಾಗಿ ಚುನಾವಣೆ ಅಧಿಕಾರಿಗಳಿಗೂ ದೇವಸ್ಥಾನದ ಕಡೆಯಿಂದ ಮನವಿಯನ್ನು ನೀಡಿ ಅನುಮತಿಗೆ ಕೇಳಲಾಗಿದೆ. ಇದುವರೆಗೂ ಅದಕ್ಕೆ ಉತ್ತರ ಬಂದಿಲ್ಲ. ಕಂಬ ತೆರವುಗೊಳಿಸದೆ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ರಸ್ತೆ ಅಗೆದಿರಿಸಲಾಗಿದ್ದು ಸಾರ್ವಜನಿಕರ ಓಡಾಟಕ್ಕೆ ಅನಾನುಕೂಲವಾಗುತ್ತಿದೆ. ಕುಮಾರಧಾರ ಸ್ವಾಗತ ಗೋಪುರದಿಂದ ರಸ್ತೆಗೆ ಜಲ್ಲಿ ಹಾಕದೆ ಧೂಳು, ಕೆಸರು ತುಂಬಿಕೊಂಡು ಸಂಚರಿಸಲು ಕಷ್ಟವಾಗಿದೆ. ವಾಹನಗಳಲ್ಲಿ ಸಂಚರಿಸುವಾಗ ಅಪಾಯಕಾರಿ ಸನ್ನಿವೇಶಗಳು ನಿರ್ಮಾಣಗೊಂಡು ಅಪಘಾತಗಳು ಸಂಭವಿಸುತ್ತಿವೆ. ತತ್‍ಕ್ಷಣಕ್ಕೆ ಆರಂಭ ಹಂತದ ಆರು ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಿದಲ್ಲಿ ಕಾಮಗಾರಿ ಮುಂದುವರೆಸಲು ಅನುಕೂಲವಾಗುತ್ತದೆ. ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಸ್ಥಳಾಂತರಿಸದೆ ಇರುವುದರಿಂದ ಸಾರ್ವಜನಿಕರಿಗೆ, ಕ್ಷೇತ್ರಕ್ಕೆ ಬರುವ ಭಕ್ತರಿಗೆ ತೊಂದರೆ ನೀಡಿದಂತಾಗಿದೆ. ಮಂಜೂರುಗೊಂಡ ಕಾಮಗಾರಿಗಳಿಗೆ ಅಧಿಕಾರಿಗಳು ಅಡ್ಡಿಪಡಿಸುತ್ತಿರುವುದರಿಂದ ಭಕ್ತರಿಗೆ ತೊಂದರೆ ಆಗುತ್ತಿರುವ ಕಾರಣ ನಾವು ಈ ಬಾರಿಯ ಚುನಾವಣೆಯನ್ನು ಬಹಿಷ್ಕರಿಸುತ್ತಿದ್ದೇವೆ ಎಂದು ನೂರಕ್ಕೂ ಅಧಿಕ ಮಂದಿ ಬಹಿಷ್ಕಾರದ ಸಹಿ ಮಾಡಿರುವ ಮನವಿಯನ್ನು ಚುನಾವಣಾ ಆಯೋಗದ ಅಧಿಕಾರಿಗಳಿಗೆ ಹಾಗೂ ಸಂಬಂಧಿಸಿದ ಇತರೆ ಅಧಿಕಾರಿಗಳಿಗೆ ಕಳುಹಿಸಿಕೊಟ್ಟಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

4 minutes ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

26 minutes ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

16 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago