Advertisement
Categories: ಮಾಹಿತಿ

ನೀತಿ ಸಂಹಿತೆ ನೆಪದಲ್ಲಿ ಅಭಿವೃದ್ಧಿಗೆ ಮೆಸ್ಕಾಂ ಅಡ್ಡಿ ಆರೋಪ

Share

ಕುಕ್ಕೆ: ನೂರಕ್ಕೂ ಅಧಿಕ ಭಕ್ತರಿಂದ ಮತದಾನ ಬಹಿಷ್ಕಾರದ ಎಚ್ಚರಿಕೆ
ಸುಬ್ರಹ್ಮಣ್ಯ: ಮಾಸ್ಟರ್ ಪ್ಲಾನ್ ಯೋಜನೆಯಡಿ ಕುಕ್ಕೆ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಭಾಗವಾಗಿ ಕುಮಾರಧಾರೆ-ಕಾಶಿಕಟ್ಟೆ ನಡುವಿನ ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದು ಈ ವೇಳೆ ರಸ್ತೆ ಬದಿ ಇರುವ ಆರು ವಿದ್ಯುತ್ ಕಂಬಗಳನ್ನು ಮೆಸ್ಕಾಂ ಇಲಾಖೆ ತಾತ್ಕಾಲಿಕವಾಗಿ ಸ್ಥ್ಥಳಾಂತರಿಸಿ ಅಭಿವೃದ್ಧಿಗೆ ಸಹಕರಿಸದೆ ಇರುವುದಕ್ಕೆ ಕ್ಷೇತ್ರದ ಭಕ್ತರು ಅಸಮಧಾನಗೊಂಡಿದ್ದು, ಅಧಿಕಾರಿಗಳ ಬೇಜಾವಾಬ್ದಾರಿ ವರ್ತನೆಗೆ ಬೇಸತ್ತು ನೂರಾರು ಮಂದಿ ಭಕ್ತರು ಈ ಬಾರಿಯ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ.
ಮಸ್ಕಾಂ ಇಲಾಖಾಧಿಕಾರಿಗಳು ಚುನಾವಣೆ ನೀತಿ ಸಂಹಿತೆ ಕಾರಣವೊಡ್ಡಿ ಸ್ಥಳಾಂತರಿಸಲು ವ್ಯವಸ್ಥೆಗಳನ್ನು ಮಾಡುತಿಲ್ಲ. ಅನುಮತಿಗಾಗಿ ಚುನಾವಣೆ ಅಧಿಕಾರಿಗಳಿಗೂ ದೇವಸ್ಥಾನದ ಕಡೆಯಿಂದ ಮನವಿಯನ್ನು ನೀಡಿ ಅನುಮತಿಗೆ ಕೇಳಲಾಗಿದೆ. ಇದುವರೆಗೂ ಅದಕ್ಕೆ ಉತ್ತರ ಬಂದಿಲ್ಲ. ಕಂಬ ತೆರವುಗೊಳಿಸದೆ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ರಸ್ತೆ ಅಗೆದಿರಿಸಲಾಗಿದ್ದು ಸಾರ್ವಜನಿಕರ ಓಡಾಟಕ್ಕೆ ಅನಾನುಕೂಲವಾಗುತ್ತಿದೆ. ಕುಮಾರಧಾರ ಸ್ವಾಗತ ಗೋಪುರದಿಂದ ರಸ್ತೆಗೆ ಜಲ್ಲಿ ಹಾಕದೆ ಧೂಳು, ಕೆಸರು ತುಂಬಿಕೊಂಡು ಸಂಚರಿಸಲು ಕಷ್ಟವಾಗಿದೆ. ವಾಹನಗಳಲ್ಲಿ ಸಂಚರಿಸುವಾಗ ಅಪಾಯಕಾರಿ ಸನ್ನಿವೇಶಗಳು ನಿರ್ಮಾಣಗೊಂಡು ಅಪಘಾತಗಳು ಸಂಭವಿಸುತ್ತಿವೆ. ತತ್‍ಕ್ಷಣಕ್ಕೆ ಆರಂಭ ಹಂತದ ಆರು ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಿದಲ್ಲಿ ಕಾಮಗಾರಿ ಮುಂದುವರೆಸಲು ಅನುಕೂಲವಾಗುತ್ತದೆ. ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಸ್ಥಳಾಂತರಿಸದೆ ಇರುವುದರಿಂದ ಸಾರ್ವಜನಿಕರಿಗೆ, ಕ್ಷೇತ್ರಕ್ಕೆ ಬರುವ ಭಕ್ತರಿಗೆ ತೊಂದರೆ ನೀಡಿದಂತಾಗಿದೆ. ಮಂಜೂರುಗೊಂಡ ಕಾಮಗಾರಿಗಳಿಗೆ ಅಧಿಕಾರಿಗಳು ಅಡ್ಡಿಪಡಿಸುತ್ತಿರುವುದರಿಂದ ಭಕ್ತರಿಗೆ ತೊಂದರೆ ಆಗುತ್ತಿರುವ ಕಾರಣ ನಾವು ಈ ಬಾರಿಯ ಚುನಾವಣೆಯನ್ನು ಬಹಿಷ್ಕರಿಸುತ್ತಿದ್ದೇವೆ ಎಂದು ನೂರಕ್ಕೂ ಅಧಿಕ ಮಂದಿ ಬಹಿಷ್ಕಾರದ ಸಹಿ ಮಾಡಿರುವ ಮನವಿಯನ್ನು ಚುನಾವಣಾ ಆಯೋಗದ ಅಧಿಕಾರಿಗಳಿಗೆ ಹಾಗೂ ಸಂಬಂಧಿಸಿದ ಇತರೆ ಅಧಿಕಾರಿಗಳಿಗೆ ಕಳುಹಿಸಿಕೊಟ್ಟಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

6 hours ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

8 hours ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

18 hours ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

18 hours ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

1 day ago