ಯಕ್ಷಗಾನ : ಮಾತು-ಮಸೆತ

ನೀನು ತಾಯಿಯಾಗಿ ಉಳಿಯುತ್ತಿಯೋ, ಹೆಂಡತಿಯಾಗಿ ಉಳಿಯುತ್ತಿಯೋ….

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

 

Advertisement
Advertisement

ಶೇಣಿ ಗೋಪಾಲಕೃಷ್ಣ ಭಟ್ಟರ ‘ಹಿರಣ್ಯಕಶಿಪು’
(ಪ್ರಸಂಗ : ಪ್ರಹ್ಲಾದ ಚರಿತ್ರೆ)

ಸಂದರ್ಭ : ಹರಿನಾಮಸ್ಮರಣೆಯನ್ನು ಬಿಡದ ಮಗನ ಕುರಿತು ಕ್ರೋಧ. ಆತನನ್ನು ಕೊಲ್ಲಿಸಲು ಯತ್ನಿಸಿದರೂ ವಿಫಲ. ಕೊನೆಗೆ ಮಡದಿಯ ಮೂಲಕ ವಿಷ ಕೊಡುವ ನಿರ್ಧಾರ.

“…. ನೀನು ತಾಯಿಯಾಗಿ ಉಳಿಯುತ್ತಿಯೋ, ಹೆಂಡತಿಯಾಗಿ ಉಳಿಯುತ್ತಿಯೋ.. ಅಂದರೆ ಇದೋ… ಹಿಡಿ… ಇದನ್ನು ಪ್ರಹ್ಲಾದನಿಗೆ ಕೊಡತಕ್ಕದ್ದು. ಇಷ್ಟವಿಲ್ಲವೋ…. ನನಗೆ ಕೊಡು ಕಯಾದು… ಇದು ನಿನಗೆ ಅಪ್ಪಣೆ.
…ಗೃಹಿಣಿಯಾಗಿ ಬಂದ ಮೇಲೆ ನಿನ್ನ ಕೈಯಿಂದ ಅಘ್ರ್ಯ, ನಿನ್ನ ಕೈಯಿಂದ ಅನ್ನಪಾನಗಳನ್ನು ಸ್ವೀಕರಿಸಿದ್ದೇನೆ. ಮಕ್ಕಳಿಗೆ ತಾಯಿಯಾಗಿ ಇಕ್ಕಿದೆ. ಗಂಡನಿಗೆ ಹೆಂಡತಿಯಾಗಿ ಇಕ್ಕಿದೆ… ಕಯಾದು.. ನಿನ್ನ ಕೈಯಲ್ಲಿರುವ ಹಾಲಾಹಲ ನನಗೆ ಇಕ್ಕು. ಅಲ್ಲಿದಿದ್ದರೆ ಅವನಿಗೆ (ಪ್ರಹ್ಲಾದನಿಗೆ) ಕೊಡು. ನೆಟ್ಟ ಕೈಯಿಂದ ಕೀಳುವುದಕ್ಕೆ ಯತ್ನಿಸಿದೆ. ಕಿತ್ತರೂ ಅದು ಮತ್ತೂ ಮತ್ತೂ ಬೇರನ್ನು ಎಲ್ಲಿಯೋ ಕ್ಷೇತ್ರದಲ್ಲಿ ಉಳಿಸಿಕೊಂಡಿದೆ. ಈಗ ಬೇರನ್ನೇ ಸುಡುವ ಯೋಚನೆ ನನ್ನದು. ಸ್ವಾತಂತ್ರ್ಯ ನಿನಗೆ ಕೊಟ್ಟಿದ್ದೇನೆ. ನೀನು ಮಗನಿಗೆ ತಾಯಿಯಾದರೆ ಸಾಕೋ; ಅಲ್ಲ, ನನಗೆ ಅರ್ಧಶರೀರೆಯಾಗಬೇಕೋ ನಿನಗೆ ಬಿಟ್ಟದ್ದು.. ನೀನು ಅವನಿಗೆ ಕೊಡುವುದಿಲ್ಲಾ… ನನಗೆ ಕೊಡು ಕಯಾದು.. ನನ್ನ ಆಜ್ಞೆ.

(ವಿಷ ಕುಡಿದು ಬದುಕಿ ಪುನಃ ತಂದೆಯಲ್ಲಿಗ ಪ್ರಹ್ಲಾದ ಬಂದಾಗ)
.. ಹೌದು ಮಗನೇ… ವಿಷ ಮೇಲೆ ಇದ್ದರೂ ಕೂಡಾ ಒಳಗೆ ನಿನ್ನ ಕುರಿತಾದ ‘ಅಮೃತ’ ನನಗೂ ಇದೆ. ನಿನ್ನಮ್ಮನಿಗೂ ಉಂಟು. ಆದ ಕಾರಣ ಆ ಪ್ರೇಮಾಮೃತದ ಮೇಲಿನ ‘ವಿಷ’ ಆಯಿತದು. ಬುಡದಲ್ಲಿದ್ದಂತಹ ಅಮೃತ ಈ ವಿಷದಲ್ಲಿ ಸೇರಿದ್ದು ಗೊತ್ತಾಗಲಿಲ್ಲ….
ನಿನಗೆ ಸಂಪೂರ್ಣ ಬೆಂಬಲ.. ಇನ್ನೊಬ್ಬನಿದ್ದಾನೆ.. ಮಗನೇ, ನಿನ್ನ ಅಪ್ಪ ನಾನು ಎಂದು ಊರಿನವರಿಗೆ ಮುಖ ತೋರಿಸಲು ನಾಚಿಕೆಯಾಗುತ್ತದೆ. ನನಗೆ, ಯಾಕೆ? ಪ್ರಪಂಚವನ್ನೇ ರಕ್ಷಿಸುವ ಮಹಾಪ್ರಭು ನಾನು. ಅಂತಹ ನಾನು ನಿನಗೆ ಅಪ್ಪನಾಗಿ ನನ್ನ ರಕ್ಷೆಯಲ್ಲಿ ನೀನಿಲ್ಲ, ಕಂಡವರ ಕೈಯ ರಕ್ಷೆಯಲ್ಲಿದ್ದಿ ಅಂತಾದ್ರೆ…..

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.‌10 ಕಳೆಯುವ ಹೊತ್ತಿಗೆ ವಾತಾವರಣ…

2 hours ago

ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |

ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…

3 hours ago

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

10 hours ago

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

19 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

19 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

20 hours ago