ಯಕ್ಷಗಾನ : ಮಾತು-ಮಸೆತ

ನೀನು ತಾಯಿಯಾಗಿ ಉಳಿಯುತ್ತಿಯೋ, ಹೆಂಡತಿಯಾಗಿ ಉಳಿಯುತ್ತಿಯೋ….

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

 

Advertisement

ಶೇಣಿ ಗೋಪಾಲಕೃಷ್ಣ ಭಟ್ಟರ ‘ಹಿರಣ್ಯಕಶಿಪು’
(ಪ್ರಸಂಗ : ಪ್ರಹ್ಲಾದ ಚರಿತ್ರೆ)

ಸಂದರ್ಭ : ಹರಿನಾಮಸ್ಮರಣೆಯನ್ನು ಬಿಡದ ಮಗನ ಕುರಿತು ಕ್ರೋಧ. ಆತನನ್ನು ಕೊಲ್ಲಿಸಲು ಯತ್ನಿಸಿದರೂ ವಿಫಲ. ಕೊನೆಗೆ ಮಡದಿಯ ಮೂಲಕ ವಿಷ ಕೊಡುವ ನಿರ್ಧಾರ.

“…. ನೀನು ತಾಯಿಯಾಗಿ ಉಳಿಯುತ್ತಿಯೋ, ಹೆಂಡತಿಯಾಗಿ ಉಳಿಯುತ್ತಿಯೋ.. ಅಂದರೆ ಇದೋ… ಹಿಡಿ… ಇದನ್ನು ಪ್ರಹ್ಲಾದನಿಗೆ ಕೊಡತಕ್ಕದ್ದು. ಇಷ್ಟವಿಲ್ಲವೋ…. ನನಗೆ ಕೊಡು ಕಯಾದು… ಇದು ನಿನಗೆ ಅಪ್ಪಣೆ.
…ಗೃಹಿಣಿಯಾಗಿ ಬಂದ ಮೇಲೆ ನಿನ್ನ ಕೈಯಿಂದ ಅಘ್ರ್ಯ, ನಿನ್ನ ಕೈಯಿಂದ ಅನ್ನಪಾನಗಳನ್ನು ಸ್ವೀಕರಿಸಿದ್ದೇನೆ. ಮಕ್ಕಳಿಗೆ ತಾಯಿಯಾಗಿ ಇಕ್ಕಿದೆ. ಗಂಡನಿಗೆ ಹೆಂಡತಿಯಾಗಿ ಇಕ್ಕಿದೆ… ಕಯಾದು.. ನಿನ್ನ ಕೈಯಲ್ಲಿರುವ ಹಾಲಾಹಲ ನನಗೆ ಇಕ್ಕು. ಅಲ್ಲಿದಿದ್ದರೆ ಅವನಿಗೆ (ಪ್ರಹ್ಲಾದನಿಗೆ) ಕೊಡು. ನೆಟ್ಟ ಕೈಯಿಂದ ಕೀಳುವುದಕ್ಕೆ ಯತ್ನಿಸಿದೆ. ಕಿತ್ತರೂ ಅದು ಮತ್ತೂ ಮತ್ತೂ ಬೇರನ್ನು ಎಲ್ಲಿಯೋ ಕ್ಷೇತ್ರದಲ್ಲಿ ಉಳಿಸಿಕೊಂಡಿದೆ. ಈಗ ಬೇರನ್ನೇ ಸುಡುವ ಯೋಚನೆ ನನ್ನದು. ಸ್ವಾತಂತ್ರ್ಯ ನಿನಗೆ ಕೊಟ್ಟಿದ್ದೇನೆ. ನೀನು ಮಗನಿಗೆ ತಾಯಿಯಾದರೆ ಸಾಕೋ; ಅಲ್ಲ, ನನಗೆ ಅರ್ಧಶರೀರೆಯಾಗಬೇಕೋ ನಿನಗೆ ಬಿಟ್ಟದ್ದು.. ನೀನು ಅವನಿಗೆ ಕೊಡುವುದಿಲ್ಲಾ… ನನಗೆ ಕೊಡು ಕಯಾದು.. ನನ್ನ ಆಜ್ಞೆ.

Advertisement

(ವಿಷ ಕುಡಿದು ಬದುಕಿ ಪುನಃ ತಂದೆಯಲ್ಲಿಗ ಪ್ರಹ್ಲಾದ ಬಂದಾಗ)
.. ಹೌದು ಮಗನೇ… ವಿಷ ಮೇಲೆ ಇದ್ದರೂ ಕೂಡಾ ಒಳಗೆ ನಿನ್ನ ಕುರಿತಾದ ‘ಅಮೃತ’ ನನಗೂ ಇದೆ. ನಿನ್ನಮ್ಮನಿಗೂ ಉಂಟು. ಆದ ಕಾರಣ ಆ ಪ್ರೇಮಾಮೃತದ ಮೇಲಿನ ‘ವಿಷ’ ಆಯಿತದು. ಬುಡದಲ್ಲಿದ್ದಂತಹ ಅಮೃತ ಈ ವಿಷದಲ್ಲಿ ಸೇರಿದ್ದು ಗೊತ್ತಾಗಲಿಲ್ಲ….
ನಿನಗೆ ಸಂಪೂರ್ಣ ಬೆಂಬಲ.. ಇನ್ನೊಬ್ಬನಿದ್ದಾನೆ.. ಮಗನೇ, ನಿನ್ನ ಅಪ್ಪ ನಾನು ಎಂದು ಊರಿನವರಿಗೆ ಮುಖ ತೋರಿಸಲು ನಾಚಿಕೆಯಾಗುತ್ತದೆ. ನನಗೆ, ಯಾಕೆ? ಪ್ರಪಂಚವನ್ನೇ ರಕ್ಷಿಸುವ ಮಹಾಪ್ರಭು ನಾನು. ಅಂತಹ ನಾನು ನಿನಗೆ ಅಪ್ಪನಾಗಿ ನನ್ನ ರಕ್ಷೆಯಲ್ಲಿ ನೀನಿಲ್ಲ, ಕಂಡವರ ಕೈಯ ರಕ್ಷೆಯಲ್ಲಿದ್ದಿ ಅಂತಾದ್ರೆ…..

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…

1 hour ago

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

6 hours ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

7 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

1 day ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago

ಹವಾಮಾನ ವರದಿ | 09-08-2025 | ಬಂಗಾಳಕೊಲ್ಲಿಯ ವಾಯುಭಾರ ಕುಸಿತ- ಮುಂಗಾರು ಚುರುಕು |

ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…

2 days ago