Advertisement
ಯಕ್ಷಗಾನ : ಮಾತು-ಮಸೆತ

ನೀನು ತಾಯಿಯಾಗಿ ಉಳಿಯುತ್ತಿಯೋ, ಹೆಂಡತಿಯಾಗಿ ಉಳಿಯುತ್ತಿಯೋ….

Share

 

ಶೇಣಿ ಗೋಪಾಲಕೃಷ್ಣ ಭಟ್ಟರ ‘ಹಿರಣ್ಯಕಶಿಪು’
(ಪ್ರಸಂಗ : ಪ್ರಹ್ಲಾದ ಚರಿತ್ರೆ)

ಸಂದರ್ಭ : ಹರಿನಾಮಸ್ಮರಣೆಯನ್ನು ಬಿಡದ ಮಗನ ಕುರಿತು ಕ್ರೋಧ. ಆತನನ್ನು ಕೊಲ್ಲಿಸಲು ಯತ್ನಿಸಿದರೂ ವಿಫಲ. ಕೊನೆಗೆ ಮಡದಿಯ ಮೂಲಕ ವಿಷ ಕೊಡುವ ನಿರ್ಧಾರ.

“…. ನೀನು ತಾಯಿಯಾಗಿ ಉಳಿಯುತ್ತಿಯೋ, ಹೆಂಡತಿಯಾಗಿ ಉಳಿಯುತ್ತಿಯೋ.. ಅಂದರೆ ಇದೋ… ಹಿಡಿ… ಇದನ್ನು ಪ್ರಹ್ಲಾದನಿಗೆ ಕೊಡತಕ್ಕದ್ದು. ಇಷ್ಟವಿಲ್ಲವೋ…. ನನಗೆ ಕೊಡು ಕಯಾದು… ಇದು ನಿನಗೆ ಅಪ್ಪಣೆ.
…ಗೃಹಿಣಿಯಾಗಿ ಬಂದ ಮೇಲೆ ನಿನ್ನ ಕೈಯಿಂದ ಅಘ್ರ್ಯ, ನಿನ್ನ ಕೈಯಿಂದ ಅನ್ನಪಾನಗಳನ್ನು ಸ್ವೀಕರಿಸಿದ್ದೇನೆ. ಮಕ್ಕಳಿಗೆ ತಾಯಿಯಾಗಿ ಇಕ್ಕಿದೆ. ಗಂಡನಿಗೆ ಹೆಂಡತಿಯಾಗಿ ಇಕ್ಕಿದೆ… ಕಯಾದು.. ನಿನ್ನ ಕೈಯಲ್ಲಿರುವ ಹಾಲಾಹಲ ನನಗೆ ಇಕ್ಕು. ಅಲ್ಲಿದಿದ್ದರೆ ಅವನಿಗೆ (ಪ್ರಹ್ಲಾದನಿಗೆ) ಕೊಡು. ನೆಟ್ಟ ಕೈಯಿಂದ ಕೀಳುವುದಕ್ಕೆ ಯತ್ನಿಸಿದೆ. ಕಿತ್ತರೂ ಅದು ಮತ್ತೂ ಮತ್ತೂ ಬೇರನ್ನು ಎಲ್ಲಿಯೋ ಕ್ಷೇತ್ರದಲ್ಲಿ ಉಳಿಸಿಕೊಂಡಿದೆ. ಈಗ ಬೇರನ್ನೇ ಸುಡುವ ಯೋಚನೆ ನನ್ನದು. ಸ್ವಾತಂತ್ರ್ಯ ನಿನಗೆ ಕೊಟ್ಟಿದ್ದೇನೆ. ನೀನು ಮಗನಿಗೆ ತಾಯಿಯಾದರೆ ಸಾಕೋ; ಅಲ್ಲ, ನನಗೆ ಅರ್ಧಶರೀರೆಯಾಗಬೇಕೋ ನಿನಗೆ ಬಿಟ್ಟದ್ದು.. ನೀನು ಅವನಿಗೆ ಕೊಡುವುದಿಲ್ಲಾ… ನನಗೆ ಕೊಡು ಕಯಾದು.. ನನ್ನ ಆಜ್ಞೆ.

(ವಿಷ ಕುಡಿದು ಬದುಕಿ ಪುನಃ ತಂದೆಯಲ್ಲಿಗ ಪ್ರಹ್ಲಾದ ಬಂದಾಗ)
.. ಹೌದು ಮಗನೇ… ವಿಷ ಮೇಲೆ ಇದ್ದರೂ ಕೂಡಾ ಒಳಗೆ ನಿನ್ನ ಕುರಿತಾದ ‘ಅಮೃತ’ ನನಗೂ ಇದೆ. ನಿನ್ನಮ್ಮನಿಗೂ ಉಂಟು. ಆದ ಕಾರಣ ಆ ಪ್ರೇಮಾಮೃತದ ಮೇಲಿನ ‘ವಿಷ’ ಆಯಿತದು. ಬುಡದಲ್ಲಿದ್ದಂತಹ ಅಮೃತ ಈ ವಿಷದಲ್ಲಿ ಸೇರಿದ್ದು ಗೊತ್ತಾಗಲಿಲ್ಲ….
ನಿನಗೆ ಸಂಪೂರ್ಣ ಬೆಂಬಲ.. ಇನ್ನೊಬ್ಬನಿದ್ದಾನೆ.. ಮಗನೇ, ನಿನ್ನ ಅಪ್ಪ ನಾನು ಎಂದು ಊರಿನವರಿಗೆ ಮುಖ ತೋರಿಸಲು ನಾಚಿಕೆಯಾಗುತ್ತದೆ. ನನಗೆ, ಯಾಕೆ? ಪ್ರಪಂಚವನ್ನೇ ರಕ್ಷಿಸುವ ಮಹಾಪ್ರಭು ನಾನು. ಅಂತಹ ನಾನು ನಿನಗೆ ಅಪ್ಪನಾಗಿ ನನ್ನ ರಕ್ಷೆಯಲ್ಲಿ ನೀನಿಲ್ಲ, ಕಂಡವರ ಕೈಯ ರಕ್ಷೆಯಲ್ಲಿದ್ದಿ ಅಂತಾದ್ರೆ…..

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

1 minute ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

18 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

24 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

24 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

24 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

24 hours ago