ಸುದ್ದಿಗಳು

ನೀರಿಂಗಿಸೋಣ ಬನ್ನಿ”ಅಭಿಯಾನದ 5 ನೇ ಕಾರ್ಯಕ್ರಮ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸವಣೂರು: ಶ್ರೀ ಷಣ್ಮುಖ ಯುವಕ ಮಂಡಲ ಸರ್ವೆ ವತಿಯಿಂದ ಸರ್ವೆ ಗ್ರಾಮದಲ್ಲಿ ನಡೆಯುತ್ತಿರುವ “ನೀರಿಂಗಿಸೋಣ ಬನ್ನಿ”ಅಭಿಯಾನದ 5 ನೆಯ ಕಾರ್ಯಕ್ರಮವಾಗಿ ಸರ್ವೆ ಕಂಚರಮೂಲೆ ಸತೀಶ್ ಮರಡಿತ್ತಾಯ ಅವರ ಜಮೀನಿನಲ್ಲಿ ನೀರಿಂಗಿಸಲು ಬೃಹತ್ ಹೊಂಡ ನಿರ್ಮಿಸಲಾಯಿತು. ಯುವಕ ಮಂಡಲದ ಸದಸ್ಯರು ಶ್ರಮದಾನದ ಮೂಲಕ ಸುತ್ತಲಿನ ಗುಡ್ಡದಲ್ಲಿ ಬೀಳುವ ಮಳೆ ನೀರನ್ನು ಇಂಗುಗುಂಡಿಗೆ ಸಂಪರ್ಕಿಸಲು ಚರಂಡಿ ನಿರ್ಮಿಸಿದರು.

Advertisement
Advertisement

ಸತೀಶ್ ಮರಡಿತ್ತಾಯ ಅವರು ಮಾತನಾಡಿ ಯುವಕ ಮಂಡಲದ ಸದಸ್ಯರು ಸರ್ವೆ ಗ್ರಾಮದಲ್ಲಿ ಹಮ್ಮಿಕೊಂಡಿರುವ “ನೀರಿಂಗಿಸೋಣ ಬನ್ನಿ ” ಅಭಿಯಾನವನ್ನು ಬೆಂಬಲಿಸಿ ಇಂಗು ಗುಂಡಿ ನಿರ್ಮಿಸಿದ್ದೇನೆ. ಯುವಕ ಮಂಡಲದ ಸದಸ್ಯರು ಅಂತರ್ಜಲ ವೃದ್ಧಿಗಾಗಿ ನಮ್ಮ ಜಮೀನಿನಲ್ಲಿ ಹಮ್ಮಿಕೊಂಡಿರುವ ಶ್ರಮದಾನ ಕಾರ್ಯಕ್ರಮ ಅಭಿನಂದನೀಯ ಎಂದರು.

ಎಸ್ ಜಿ ಎಂ ಪ್ರೌಢಶಾಲೆಯ ಮುಖ್ಯಗುರುಗಳಾದ ಶ್ರೀನಿವಾಸ್ ಎಚ್ ಬಿ ಮಾತನಾಡಿ ಯುವಕ ಮಂಡಲದ ಯುವಕರೊಂದಿಗೆ “ನೀರಿಂಗಿಸೋಣ ಬನ್ನಿ ” ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದೇನೆ. ಯುವಕ ಮಂಡಲದ ಪ್ರತಿ ಜನಪರ ಕಾರ್ಯಕ್ರಮಗಳಿಗೆ ನನ್ನ ಬೆಂಬಲ ಇದೆ ಎಂದರು.

ಯುವಕ ಮಂಡಲದ ಅಧ್ಯಕ್ಷರಾದ ಕಮಲೇಶ್ ಸರ್ವೆದೋಳಗುತ್ತು ಸತೀಶ್ ಮರಡಿತ್ತಾಯ ಅವರನ್ನು ಅಭಿನಂದಿಸಿ ಮಾತನಾಡಿ ಸತೀಶ್ ಮರಡಿತ್ತಾಯ ಅವರು ತಮ್ಮ ಜಮೀನಿನಲ್ಲಿರುವ ಬಹುಪಾಲು ಕಾಡನ್ನು ಸಂರಕ್ಷಿಸಿದ್ದಾರೆ. ಕಳೆದ ವರ್ಷ್ ಅಂತರ್ಜಲ ವೃದ್ಧಿಗಾಗಿ ವೆಂಟೆಡ್ ಡ್ಯಾಮ್ ನಿರ್ಮಿಸಿಕೊಂಡಿದ್ದಾರೆ. ಇದೀಗ ಯುವಕ ಮಂಡಲದ ಅಭಿಯಾನಕ್ಕೆ ಬೆಂಬಲವಾಗಿ ಇಂಗುಗುಂಡಿ ನಿರ್ಮಿಸಿರುವುದು ಅವರ ಪರಿಸರ ಪ್ರೇಮಕ್ಕೆ ಸಾಕ್ಷಿ ಎಂದರು.

ಕಾರ್ಯಕ್ರಮ ಸಂಯೋಜಕರಾದ ನಾಗೇಶ್ ಪಟ್ಟೆಮಜಲು ಕಾರ್ಯಕ್ರಮ ಸಂಯೋಜಿಸಿದರು.  ಯುವಕ ಮಂಡಲದ  ಗೌರವಾಧ್ಯಕ್ಷರು ಹಾಗು ಮುಂಡೂರು ಗ್ರಾಮ ಪಂ ಅಧ್ಯಕ್ಷರಾದ ವಸಂತ್ ಎಸ್ ಡಿ, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷರಾದ ಸುಭ್ರಮಣ್ಯ ಕರಂಬಾರು, ಉಪಾಧ್ಯಕ್ಷರಾದ ಪ್ರವೀಣ್ ಚೆನ್ನಾವರ, ಯುವಕ ಮಂಡಲದ ಅಧ್ಯಕ್ಶರಾದ ಕಮಲೇಶ್ ಸರ್ವೆದೋಳಗುತ್ತು, ಪ್ರ ಕಾರ್ಯದರ್ಶಿ ತಿಲಕ್ ರಾಜ್ ಕರಂಬಾರು, ಮಾಜಿ ಅಧ್ಯಕ್ಷರಾದ ರಾಜೇಶ್ ಎಸ್ ಡಿ, ಪದಾಧಿಕಾರಿಗಳಾದ ರಾಮಣ್ಣ ಪೂಜಾರಿ ವಿಜಯ ಬ್ಯಾಂಕ್, , ಅಶೋಕ್ ಎಸ್ ಡಿ, ಕಿಶೋರ್ ಸರ್ವೆದೋಳಗುತ್ತು, , ಗೌತಮ್ ರಾಜ್ ಕರಂಬಾರು, ಜಯರಾಜ್ ಸುವರ್ಣ ಸೊರಕೆ, ಮನೋಜ್ ಸುವರ್ಣ ಸೊರಕೆ, ಗುರುರಾಜ್ ಪಟ್ಟೆಮಜಲು, ಸದಸ್ಯರಾದ ರಾಮಕೃಷ್ಣ ಸರ್ವೆದೋಳಗುತ್ತು , ನಂದನ್ ಸರ್ವೆದೋಳಗುತ್ತು, ಯೋಗೀಶ್ ಮಡಿವಾಳ ಕಲ್ಪಣೆ, ಮೊದಲಾದವರು ಭಾಗವಹಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

11 hours ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

18 hours ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

18 hours ago

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…

19 hours ago

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ  ಉಪಲೋಕಾಯುಕ್ತ ಬಿ.…

19 hours ago