ಸುದ್ದಿಗಳು

ನೀರಿಂಗಿಸೋಣ ಬನ್ನಿ”ಅಭಿಯಾನದ 5 ನೇ ಕಾರ್ಯಕ್ರಮ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸವಣೂರು: ಶ್ರೀ ಷಣ್ಮುಖ ಯುವಕ ಮಂಡಲ ಸರ್ವೆ ವತಿಯಿಂದ ಸರ್ವೆ ಗ್ರಾಮದಲ್ಲಿ ನಡೆಯುತ್ತಿರುವ “ನೀರಿಂಗಿಸೋಣ ಬನ್ನಿ”ಅಭಿಯಾನದ 5 ನೆಯ ಕಾರ್ಯಕ್ರಮವಾಗಿ ಸರ್ವೆ ಕಂಚರಮೂಲೆ ಸತೀಶ್ ಮರಡಿತ್ತಾಯ ಅವರ ಜಮೀನಿನಲ್ಲಿ ನೀರಿಂಗಿಸಲು ಬೃಹತ್ ಹೊಂಡ ನಿರ್ಮಿಸಲಾಯಿತು. ಯುವಕ ಮಂಡಲದ ಸದಸ್ಯರು ಶ್ರಮದಾನದ ಮೂಲಕ ಸುತ್ತಲಿನ ಗುಡ್ಡದಲ್ಲಿ ಬೀಳುವ ಮಳೆ ನೀರನ್ನು ಇಂಗುಗುಂಡಿಗೆ ಸಂಪರ್ಕಿಸಲು ಚರಂಡಿ ನಿರ್ಮಿಸಿದರು.

Advertisement

ಸತೀಶ್ ಮರಡಿತ್ತಾಯ ಅವರು ಮಾತನಾಡಿ ಯುವಕ ಮಂಡಲದ ಸದಸ್ಯರು ಸರ್ವೆ ಗ್ರಾಮದಲ್ಲಿ ಹಮ್ಮಿಕೊಂಡಿರುವ “ನೀರಿಂಗಿಸೋಣ ಬನ್ನಿ ” ಅಭಿಯಾನವನ್ನು ಬೆಂಬಲಿಸಿ ಇಂಗು ಗುಂಡಿ ನಿರ್ಮಿಸಿದ್ದೇನೆ. ಯುವಕ ಮಂಡಲದ ಸದಸ್ಯರು ಅಂತರ್ಜಲ ವೃದ್ಧಿಗಾಗಿ ನಮ್ಮ ಜಮೀನಿನಲ್ಲಿ ಹಮ್ಮಿಕೊಂಡಿರುವ ಶ್ರಮದಾನ ಕಾರ್ಯಕ್ರಮ ಅಭಿನಂದನೀಯ ಎಂದರು.

ಎಸ್ ಜಿ ಎಂ ಪ್ರೌಢಶಾಲೆಯ ಮುಖ್ಯಗುರುಗಳಾದ ಶ್ರೀನಿವಾಸ್ ಎಚ್ ಬಿ ಮಾತನಾಡಿ ಯುವಕ ಮಂಡಲದ ಯುವಕರೊಂದಿಗೆ “ನೀರಿಂಗಿಸೋಣ ಬನ್ನಿ ” ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದೇನೆ. ಯುವಕ ಮಂಡಲದ ಪ್ರತಿ ಜನಪರ ಕಾರ್ಯಕ್ರಮಗಳಿಗೆ ನನ್ನ ಬೆಂಬಲ ಇದೆ ಎಂದರು.

ಯುವಕ ಮಂಡಲದ ಅಧ್ಯಕ್ಷರಾದ ಕಮಲೇಶ್ ಸರ್ವೆದೋಳಗುತ್ತು ಸತೀಶ್ ಮರಡಿತ್ತಾಯ ಅವರನ್ನು ಅಭಿನಂದಿಸಿ ಮಾತನಾಡಿ ಸತೀಶ್ ಮರಡಿತ್ತಾಯ ಅವರು ತಮ್ಮ ಜಮೀನಿನಲ್ಲಿರುವ ಬಹುಪಾಲು ಕಾಡನ್ನು ಸಂರಕ್ಷಿಸಿದ್ದಾರೆ. ಕಳೆದ ವರ್ಷ್ ಅಂತರ್ಜಲ ವೃದ್ಧಿಗಾಗಿ ವೆಂಟೆಡ್ ಡ್ಯಾಮ್ ನಿರ್ಮಿಸಿಕೊಂಡಿದ್ದಾರೆ. ಇದೀಗ ಯುವಕ ಮಂಡಲದ ಅಭಿಯಾನಕ್ಕೆ ಬೆಂಬಲವಾಗಿ ಇಂಗುಗುಂಡಿ ನಿರ್ಮಿಸಿರುವುದು ಅವರ ಪರಿಸರ ಪ್ರೇಮಕ್ಕೆ ಸಾಕ್ಷಿ ಎಂದರು.

ಕಾರ್ಯಕ್ರಮ ಸಂಯೋಜಕರಾದ ನಾಗೇಶ್ ಪಟ್ಟೆಮಜಲು ಕಾರ್ಯಕ್ರಮ ಸಂಯೋಜಿಸಿದರು.  ಯುವಕ ಮಂಡಲದ  ಗೌರವಾಧ್ಯಕ್ಷರು ಹಾಗು ಮುಂಡೂರು ಗ್ರಾಮ ಪಂ ಅಧ್ಯಕ್ಷರಾದ ವಸಂತ್ ಎಸ್ ಡಿ, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷರಾದ ಸುಭ್ರಮಣ್ಯ ಕರಂಬಾರು, ಉಪಾಧ್ಯಕ್ಷರಾದ ಪ್ರವೀಣ್ ಚೆನ್ನಾವರ, ಯುವಕ ಮಂಡಲದ ಅಧ್ಯಕ್ಶರಾದ ಕಮಲೇಶ್ ಸರ್ವೆದೋಳಗುತ್ತು, ಪ್ರ ಕಾರ್ಯದರ್ಶಿ ತಿಲಕ್ ರಾಜ್ ಕರಂಬಾರು, ಮಾಜಿ ಅಧ್ಯಕ್ಷರಾದ ರಾಜೇಶ್ ಎಸ್ ಡಿ, ಪದಾಧಿಕಾರಿಗಳಾದ ರಾಮಣ್ಣ ಪೂಜಾರಿ ವಿಜಯ ಬ್ಯಾಂಕ್, , ಅಶೋಕ್ ಎಸ್ ಡಿ, ಕಿಶೋರ್ ಸರ್ವೆದೋಳಗುತ್ತು, , ಗೌತಮ್ ರಾಜ್ ಕರಂಬಾರು, ಜಯರಾಜ್ ಸುವರ್ಣ ಸೊರಕೆ, ಮನೋಜ್ ಸುವರ್ಣ ಸೊರಕೆ, ಗುರುರಾಜ್ ಪಟ್ಟೆಮಜಲು, ಸದಸ್ಯರಾದ ರಾಮಕೃಷ್ಣ ಸರ್ವೆದೋಳಗುತ್ತು , ನಂದನ್ ಸರ್ವೆದೋಳಗುತ್ತು, ಯೋಗೀಶ್ ಮಡಿವಾಳ ಕಲ್ಪಣೆ, ಮೊದಲಾದವರು ಭಾಗವಹಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿರಾಡಿ ಘಾಟಿ | ರಾಷ್ಟ್ರೀಯ ಹೆದ್ದಾರಿ -ರೈಲು ಸಂಪರ್ಕ ಅಭಿವೃದ್ದಿಗೆ ಸಂಯೋಜಿತ ಡಿಪಿಆರ್ ತಯಾರಿಸಲು ಮನವಿ

ಶಿರಾಡಿಯು ಪಶ್ಚಿಮ ಘಟ್ಟ ತಪ್ಪಲಿನಲ್ಲಿರುವುದರಿಂದ ಸೂಕ್ಷ್ಮ ಪರಿಸರ ವಲಯವಾಗಿ ಗುರುತಿಸಿಕೊಂಡಿದೆ.  ಹೀಗಿರುವಾಗ ರಸ್ತೆ ಮತ್ತು…

2 hours ago

ಮಳೆಗಾಲ ಸಿದ್ಧತೆ | ಚರಂಡಿ ಹೂಳೆತ್ತಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು ಮಹಾನಗರಪಾಲಿಕೆಯ ಎಲ್ಲಾ 60 ವಾರ್ಡುಗಳಲ್ಲಿ  ತೆರೆದ ಚರಂಡಿಗಳಲ್ಲಿರುವ ಹೂಳೆತ್ತಲು ತಕ್ಷಣವೇ ಕ್ರಮ…

2 hours ago

ಹವಾಮಾನ ವರದಿ | 17-04-2025 | ಎ.20 ರಿಂದ ರಾಜ್ಯದ ವಿವಿದೆಡೆ ಮತ್ತೆ ಮಳೆ

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ…

4 hours ago

ಪುತ್ತೂರು ಜಾತ್ರೆ ಎಂದರೆ “ನಮ್ಮ ಮನೆ ಉತ್ಸವ”

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಪುತ್ತೂರು ಶ್ರೀ ಮಹತೋಭಾರ ಶ್ರೀ…

10 hours ago

ಕೆಲವು ವಿಶೇಷ ಯೋಗಗಳು ಮತ್ತು ಗ್ರಹಗಳ ಸಂಯೋಜನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

15 hours ago

ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ

ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…

23 hours ago