ಸವಣೂರು: ಶ್ರೀ ಷಣ್ಮುಖ ಯುವಕ ಮಂಡಲ ಸರ್ವೆ ವತಿಯಿಂದ ಸರ್ವೆ ಗ್ರಾಮದಲ್ಲಿ ನಡೆಯುತ್ತಿರುವ “ನೀರಿಂಗಿಸೋಣ ಬನ್ನಿ”ಅಭಿಯಾನದ 5 ನೆಯ ಕಾರ್ಯಕ್ರಮವಾಗಿ ಸರ್ವೆ ಕಂಚರಮೂಲೆ ಸತೀಶ್ ಮರಡಿತ್ತಾಯ ಅವರ ಜಮೀನಿನಲ್ಲಿ ನೀರಿಂಗಿಸಲು ಬೃಹತ್ ಹೊಂಡ ನಿರ್ಮಿಸಲಾಯಿತು. ಯುವಕ ಮಂಡಲದ ಸದಸ್ಯರು ಶ್ರಮದಾನದ ಮೂಲಕ ಸುತ್ತಲಿನ ಗುಡ್ಡದಲ್ಲಿ ಬೀಳುವ ಮಳೆ ನೀರನ್ನು ಇಂಗುಗುಂಡಿಗೆ ಸಂಪರ್ಕಿಸಲು ಚರಂಡಿ ನಿರ್ಮಿಸಿದರು.
ಸತೀಶ್ ಮರಡಿತ್ತಾಯ ಅವರು ಮಾತನಾಡಿ ಯುವಕ ಮಂಡಲದ ಸದಸ್ಯರು ಸರ್ವೆ ಗ್ರಾಮದಲ್ಲಿ ಹಮ್ಮಿಕೊಂಡಿರುವ “ನೀರಿಂಗಿಸೋಣ ಬನ್ನಿ ” ಅಭಿಯಾನವನ್ನು ಬೆಂಬಲಿಸಿ ಇಂಗು ಗುಂಡಿ ನಿರ್ಮಿಸಿದ್ದೇನೆ. ಯುವಕ ಮಂಡಲದ ಸದಸ್ಯರು ಅಂತರ್ಜಲ ವೃದ್ಧಿಗಾಗಿ ನಮ್ಮ ಜಮೀನಿನಲ್ಲಿ ಹಮ್ಮಿಕೊಂಡಿರುವ ಶ್ರಮದಾನ ಕಾರ್ಯಕ್ರಮ ಅಭಿನಂದನೀಯ ಎಂದರು.
ಎಸ್ ಜಿ ಎಂ ಪ್ರೌಢಶಾಲೆಯ ಮುಖ್ಯಗುರುಗಳಾದ ಶ್ರೀನಿವಾಸ್ ಎಚ್ ಬಿ ಮಾತನಾಡಿ ಯುವಕ ಮಂಡಲದ ಯುವಕರೊಂದಿಗೆ “ನೀರಿಂಗಿಸೋಣ ಬನ್ನಿ ” ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದೇನೆ. ಯುವಕ ಮಂಡಲದ ಪ್ರತಿ ಜನಪರ ಕಾರ್ಯಕ್ರಮಗಳಿಗೆ ನನ್ನ ಬೆಂಬಲ ಇದೆ ಎಂದರು.
ಯುವಕ ಮಂಡಲದ ಅಧ್ಯಕ್ಷರಾದ ಕಮಲೇಶ್ ಸರ್ವೆದೋಳಗುತ್ತು ಸತೀಶ್ ಮರಡಿತ್ತಾಯ ಅವರನ್ನು ಅಭಿನಂದಿಸಿ ಮಾತನಾಡಿ ಸತೀಶ್ ಮರಡಿತ್ತಾಯ ಅವರು ತಮ್ಮ ಜಮೀನಿನಲ್ಲಿರುವ ಬಹುಪಾಲು ಕಾಡನ್ನು ಸಂರಕ್ಷಿಸಿದ್ದಾರೆ. ಕಳೆದ ವರ್ಷ್ ಅಂತರ್ಜಲ ವೃದ್ಧಿಗಾಗಿ ವೆಂಟೆಡ್ ಡ್ಯಾಮ್ ನಿರ್ಮಿಸಿಕೊಂಡಿದ್ದಾರೆ. ಇದೀಗ ಯುವಕ ಮಂಡಲದ ಅಭಿಯಾನಕ್ಕೆ ಬೆಂಬಲವಾಗಿ ಇಂಗುಗುಂಡಿ ನಿರ್ಮಿಸಿರುವುದು ಅವರ ಪರಿಸರ ಪ್ರೇಮಕ್ಕೆ ಸಾಕ್ಷಿ ಎಂದರು.
ಕಾರ್ಯಕ್ರಮ ಸಂಯೋಜಕರಾದ ನಾಗೇಶ್ ಪಟ್ಟೆಮಜಲು ಕಾರ್ಯಕ್ರಮ ಸಂಯೋಜಿಸಿದರು. ಯುವಕ ಮಂಡಲದ ಗೌರವಾಧ್ಯಕ್ಷರು ಹಾಗು ಮುಂಡೂರು ಗ್ರಾಮ ಪಂ ಅಧ್ಯಕ್ಷರಾದ ವಸಂತ್ ಎಸ್ ಡಿ, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷರಾದ ಸುಭ್ರಮಣ್ಯ ಕರಂಬಾರು, ಉಪಾಧ್ಯಕ್ಷರಾದ ಪ್ರವೀಣ್ ಚೆನ್ನಾವರ, ಯುವಕ ಮಂಡಲದ ಅಧ್ಯಕ್ಶರಾದ ಕಮಲೇಶ್ ಸರ್ವೆದೋಳಗುತ್ತು, ಪ್ರ ಕಾರ್ಯದರ್ಶಿ ತಿಲಕ್ ರಾಜ್ ಕರಂಬಾರು, ಮಾಜಿ ಅಧ್ಯಕ್ಷರಾದ ರಾಜೇಶ್ ಎಸ್ ಡಿ, ಪದಾಧಿಕಾರಿಗಳಾದ ರಾಮಣ್ಣ ಪೂಜಾರಿ ವಿಜಯ ಬ್ಯಾಂಕ್, , ಅಶೋಕ್ ಎಸ್ ಡಿ, ಕಿಶೋರ್ ಸರ್ವೆದೋಳಗುತ್ತು, , ಗೌತಮ್ ರಾಜ್ ಕರಂಬಾರು, ಜಯರಾಜ್ ಸುವರ್ಣ ಸೊರಕೆ, ಮನೋಜ್ ಸುವರ್ಣ ಸೊರಕೆ, ಗುರುರಾಜ್ ಪಟ್ಟೆಮಜಲು, ಸದಸ್ಯರಾದ ರಾಮಕೃಷ್ಣ ಸರ್ವೆದೋಳಗುತ್ತು , ನಂದನ್ ಸರ್ವೆದೋಳಗುತ್ತು, ಯೋಗೀಶ್ ಮಡಿವಾಳ ಕಲ್ಪಣೆ, ಮೊದಲಾದವರು ಭಾಗವಹಿಸಿದರು.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…