Advertisement
ಸುದ್ದಿಗಳು

ನೀರಿಂಗಿಸೋಣ ಬನ್ನಿ”ಅಭಿಯಾನದ 5 ನೇ ಕಾರ್ಯಕ್ರಮ

Share

ಸವಣೂರು: ಶ್ರೀ ಷಣ್ಮುಖ ಯುವಕ ಮಂಡಲ ಸರ್ವೆ ವತಿಯಿಂದ ಸರ್ವೆ ಗ್ರಾಮದಲ್ಲಿ ನಡೆಯುತ್ತಿರುವ “ನೀರಿಂಗಿಸೋಣ ಬನ್ನಿ”ಅಭಿಯಾನದ 5 ನೆಯ ಕಾರ್ಯಕ್ರಮವಾಗಿ ಸರ್ವೆ ಕಂಚರಮೂಲೆ ಸತೀಶ್ ಮರಡಿತ್ತಾಯ ಅವರ ಜಮೀನಿನಲ್ಲಿ ನೀರಿಂಗಿಸಲು ಬೃಹತ್ ಹೊಂಡ ನಿರ್ಮಿಸಲಾಯಿತು. ಯುವಕ ಮಂಡಲದ ಸದಸ್ಯರು ಶ್ರಮದಾನದ ಮೂಲಕ ಸುತ್ತಲಿನ ಗುಡ್ಡದಲ್ಲಿ ಬೀಳುವ ಮಳೆ ನೀರನ್ನು ಇಂಗುಗುಂಡಿಗೆ ಸಂಪರ್ಕಿಸಲು ಚರಂಡಿ ನಿರ್ಮಿಸಿದರು.

ಸತೀಶ್ ಮರಡಿತ್ತಾಯ ಅವರು ಮಾತನಾಡಿ ಯುವಕ ಮಂಡಲದ ಸದಸ್ಯರು ಸರ್ವೆ ಗ್ರಾಮದಲ್ಲಿ ಹಮ್ಮಿಕೊಂಡಿರುವ “ನೀರಿಂಗಿಸೋಣ ಬನ್ನಿ ” ಅಭಿಯಾನವನ್ನು ಬೆಂಬಲಿಸಿ ಇಂಗು ಗುಂಡಿ ನಿರ್ಮಿಸಿದ್ದೇನೆ. ಯುವಕ ಮಂಡಲದ ಸದಸ್ಯರು ಅಂತರ್ಜಲ ವೃದ್ಧಿಗಾಗಿ ನಮ್ಮ ಜಮೀನಿನಲ್ಲಿ ಹಮ್ಮಿಕೊಂಡಿರುವ ಶ್ರಮದಾನ ಕಾರ್ಯಕ್ರಮ ಅಭಿನಂದನೀಯ ಎಂದರು.

ಎಸ್ ಜಿ ಎಂ ಪ್ರೌಢಶಾಲೆಯ ಮುಖ್ಯಗುರುಗಳಾದ ಶ್ರೀನಿವಾಸ್ ಎಚ್ ಬಿ ಮಾತನಾಡಿ ಯುವಕ ಮಂಡಲದ ಯುವಕರೊಂದಿಗೆ “ನೀರಿಂಗಿಸೋಣ ಬನ್ನಿ ” ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದೇನೆ. ಯುವಕ ಮಂಡಲದ ಪ್ರತಿ ಜನಪರ ಕಾರ್ಯಕ್ರಮಗಳಿಗೆ ನನ್ನ ಬೆಂಬಲ ಇದೆ ಎಂದರು.

ಯುವಕ ಮಂಡಲದ ಅಧ್ಯಕ್ಷರಾದ ಕಮಲೇಶ್ ಸರ್ವೆದೋಳಗುತ್ತು ಸತೀಶ್ ಮರಡಿತ್ತಾಯ ಅವರನ್ನು ಅಭಿನಂದಿಸಿ ಮಾತನಾಡಿ ಸತೀಶ್ ಮರಡಿತ್ತಾಯ ಅವರು ತಮ್ಮ ಜಮೀನಿನಲ್ಲಿರುವ ಬಹುಪಾಲು ಕಾಡನ್ನು ಸಂರಕ್ಷಿಸಿದ್ದಾರೆ. ಕಳೆದ ವರ್ಷ್ ಅಂತರ್ಜಲ ವೃದ್ಧಿಗಾಗಿ ವೆಂಟೆಡ್ ಡ್ಯಾಮ್ ನಿರ್ಮಿಸಿಕೊಂಡಿದ್ದಾರೆ. ಇದೀಗ ಯುವಕ ಮಂಡಲದ ಅಭಿಯಾನಕ್ಕೆ ಬೆಂಬಲವಾಗಿ ಇಂಗುಗುಂಡಿ ನಿರ್ಮಿಸಿರುವುದು ಅವರ ಪರಿಸರ ಪ್ರೇಮಕ್ಕೆ ಸಾಕ್ಷಿ ಎಂದರು.

ಕಾರ್ಯಕ್ರಮ ಸಂಯೋಜಕರಾದ ನಾಗೇಶ್ ಪಟ್ಟೆಮಜಲು ಕಾರ್ಯಕ್ರಮ ಸಂಯೋಜಿಸಿದರು.  ಯುವಕ ಮಂಡಲದ  ಗೌರವಾಧ್ಯಕ್ಷರು ಹಾಗು ಮುಂಡೂರು ಗ್ರಾಮ ಪಂ ಅಧ್ಯಕ್ಷರಾದ ವಸಂತ್ ಎಸ್ ಡಿ, ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷರಾದ ಸುಭ್ರಮಣ್ಯ ಕರಂಬಾರು, ಉಪಾಧ್ಯಕ್ಷರಾದ ಪ್ರವೀಣ್ ಚೆನ್ನಾವರ, ಯುವಕ ಮಂಡಲದ ಅಧ್ಯಕ್ಶರಾದ ಕಮಲೇಶ್ ಸರ್ವೆದೋಳಗುತ್ತು, ಪ್ರ ಕಾರ್ಯದರ್ಶಿ ತಿಲಕ್ ರಾಜ್ ಕರಂಬಾರು, ಮಾಜಿ ಅಧ್ಯಕ್ಷರಾದ ರಾಜೇಶ್ ಎಸ್ ಡಿ, ಪದಾಧಿಕಾರಿಗಳಾದ ರಾಮಣ್ಣ ಪೂಜಾರಿ ವಿಜಯ ಬ್ಯಾಂಕ್, , ಅಶೋಕ್ ಎಸ್ ಡಿ, ಕಿಶೋರ್ ಸರ್ವೆದೋಳಗುತ್ತು, , ಗೌತಮ್ ರಾಜ್ ಕರಂಬಾರು, ಜಯರಾಜ್ ಸುವರ್ಣ ಸೊರಕೆ, ಮನೋಜ್ ಸುವರ್ಣ ಸೊರಕೆ, ಗುರುರಾಜ್ ಪಟ್ಟೆಮಜಲು, ಸದಸ್ಯರಾದ ರಾಮಕೃಷ್ಣ ಸರ್ವೆದೋಳಗುತ್ತು , ನಂದನ್ ಸರ್ವೆದೋಳಗುತ್ತು, ಯೋಗೀಶ್ ಮಡಿವಾಳ ಕಲ್ಪಣೆ, ಮೊದಲಾದವರು ಭಾಗವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

1 hour ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

1 hour ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago