Advertisement
ಜಿಲ್ಲೆ

ನೀರಿಂಗಿಸೋಣ ಬನ್ನಿ ಅಭಿಯಾನ ವಿಸ್ತರಣೆ : ಸಮಾಲೋಚನಾ ಸಭೆ

Share

ಸವಣೂರು : ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ನೀರಿಂಗಿಸೋಣ ಬನ್ನಿ ಅಭಿಯಾನವನ್ನು ಗ್ರಾಮದಾದ್ಯಂತ ವಿಸ್ತರಿಸುವ ಬಗ್ಗೆ ಸಮಾಲೋಚನಾ ಸಭೆ ಹಾಗು ಮಾಹಿತಿ ಕಾರ್ಯಕ್ರಮ ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸುರೇಶ್ ಕುಮಾರ್ ಸೊರಕೆ ಅವರ ಮನೆಯಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿ ಡಾ.ಶ್ರೀಶಕುಮಾರ್ ಅವರು , ಮಳೆ ನೀರಿಂಗಿಸುವ ವಿವಿಧ ವಿಧಾನಗಳು ಹಾಗು ಜನಜಾಗೃತಿ ಅಭಿಯಾನದ ಯಶಸ್ಸಿಗೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿ ಗ್ರಾಮದ ಪ್ರತಿ ನಾಗರಿಕರು ಮಳೆ ನೀರಿಂಗಿಸುವ ಕಾರ್ಯ ಮಾಡುವ ಮೂಲಕ ಗ್ರಾಮವನ್ನು ದೇಶದಲ್ಲೇ ಮಾದರಿ ಗ್ರಾಮವನ್ನಾಗಿ ಮಾಡಬೇಕು ಎಂದರು.

ಜಿ.ಪಂ.ಮಾಜಿ ಸದಸ್ಯ ಸುರೇಶ್ ಕುಮಾರ್ ಸೊರಕೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಯುವಕ ಮಂಡಲದ “ನೀರಿಂಗಿಸೋಣ ಬನ್ನಿ ” ಕಾರ್ಯಕ್ರಮವನ್ನು ಗ್ರಾಮದಾದ್ಯಂತ ಯಶಸ್ವಿಗೊಳಿಸಿ ಡಿಸೆಂಬರ್ ಅಂತ್ಯದಲ್ಲಿ ಸೊರಕೆ ಕಿಂಡಿ ಅಣೆಕಟ್ಟೆ ಬಳಿ ಈ ವರ್ಷದ ಸಮಾರೋಪ ಕಾರ್ಯಕ್ರಮವನ್ನು ಊರಿನ ಜನರ ಹಾಗು ಯುವಕ ಮಂಡಲದ ಸಹಭಾಗಿತ್ವದೊಂದಿಗೆ ಆಯೋಜಿಸಲಾಗುವುದು ಎಂದರು.

ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುಬ್ರಹ್ಮಣ್ಯ ಕರಂಬಾರು,ಮಾಜಿ ಅಧ್ಯಕ್ಷ ರಾಜೇಶ್ ಎಸ್ ಡಿ, ಗೌರವ ಸಲಹೆಗಾರ ಶಶಿಧರ್ ಎಸ್ ಡಿ, ಪದಾ„ಕಾರಿಗಳಾದ ಡಾ.ಪ್ರವೀಣ್ ಸರ್ವೆದೋಳಗುತ್ತು, ಅಶೋಕ್ ಎಸ್ ಡಿ, ಮನೋಜ್ ಸುವರ್ಣ ಸೊರಕೆ, ಜಯರಾಜ್ ಸುವರ್ಣ ಸೊರಕೆ, ಸದಸ್ಯರಾದ ಹರೀಶ್ ಪಾಲೆತ್ತಗುರಿ, ಸಂದೇಶ ಆಚಾರ್ಯ, ಮಾಜಿ ಪಂಚಾಯತ್ ಸದಸ್ಯರಾದ ರಾಜಗೋಪಾಲ್ ಗೌಡ ಕಂಪ, ಸ್ಥಳೀಯರಾದ ರಾಮಕೃಷ್ಣ ಪ್ರಭು, ಈರಪ್ಪ ಪೂಜಾರಿ ಸೊರಕೆ, ತಾರಾ ಸೊರಕೆ, ಹರ್ಷಿಣಿ ಸುರೇಶ್ ಸೊರಕೆ, ಸುರೇಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು.

ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ಅಧ್ಯಕ್ಷ ಕಮಲೇಶ್ ಸರ್ವೆದೋಳಗುತ್ತು ಸ್ವಾಗತಿಸಿ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

1 hour ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

1 hour ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

12 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

13 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

17 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago