Advertisement
ಜಿಲ್ಲೆ

ನೀರಿಂಗಿಸೋಣ ಬನ್ನಿ ಅಭಿಯಾನ ವಿಸ್ತರಣೆ : ಸಮಾಲೋಚನಾ ಸಭೆ

Share

ಸವಣೂರು : ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ನೀರಿಂಗಿಸೋಣ ಬನ್ನಿ ಅಭಿಯಾನವನ್ನು ಗ್ರಾಮದಾದ್ಯಂತ ವಿಸ್ತರಿಸುವ ಬಗ್ಗೆ ಸಮಾಲೋಚನಾ ಸಭೆ ಹಾಗು ಮಾಹಿತಿ ಕಾರ್ಯಕ್ರಮ ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸುರೇಶ್ ಕುಮಾರ್ ಸೊರಕೆ ಅವರ ಮನೆಯಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿ ಡಾ.ಶ್ರೀಶಕುಮಾರ್ ಅವರು , ಮಳೆ ನೀರಿಂಗಿಸುವ ವಿವಿಧ ವಿಧಾನಗಳು ಹಾಗು ಜನಜಾಗೃತಿ ಅಭಿಯಾನದ ಯಶಸ್ಸಿಗೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿ ಗ್ರಾಮದ ಪ್ರತಿ ನಾಗರಿಕರು ಮಳೆ ನೀರಿಂಗಿಸುವ ಕಾರ್ಯ ಮಾಡುವ ಮೂಲಕ ಗ್ರಾಮವನ್ನು ದೇಶದಲ್ಲೇ ಮಾದರಿ ಗ್ರಾಮವನ್ನಾಗಿ ಮಾಡಬೇಕು ಎಂದರು.

ಜಿ.ಪಂ.ಮಾಜಿ ಸದಸ್ಯ ಸುರೇಶ್ ಕುಮಾರ್ ಸೊರಕೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಯುವಕ ಮಂಡಲದ “ನೀರಿಂಗಿಸೋಣ ಬನ್ನಿ ” ಕಾರ್ಯಕ್ರಮವನ್ನು ಗ್ರಾಮದಾದ್ಯಂತ ಯಶಸ್ವಿಗೊಳಿಸಿ ಡಿಸೆಂಬರ್ ಅಂತ್ಯದಲ್ಲಿ ಸೊರಕೆ ಕಿಂಡಿ ಅಣೆಕಟ್ಟೆ ಬಳಿ ಈ ವರ್ಷದ ಸಮಾರೋಪ ಕಾರ್ಯಕ್ರಮವನ್ನು ಊರಿನ ಜನರ ಹಾಗು ಯುವಕ ಮಂಡಲದ ಸಹಭಾಗಿತ್ವದೊಂದಿಗೆ ಆಯೋಜಿಸಲಾಗುವುದು ಎಂದರು.

ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುಬ್ರಹ್ಮಣ್ಯ ಕರಂಬಾರು,ಮಾಜಿ ಅಧ್ಯಕ್ಷ ರಾಜೇಶ್ ಎಸ್ ಡಿ, ಗೌರವ ಸಲಹೆಗಾರ ಶಶಿಧರ್ ಎಸ್ ಡಿ, ಪದಾ„ಕಾರಿಗಳಾದ ಡಾ.ಪ್ರವೀಣ್ ಸರ್ವೆದೋಳಗುತ್ತು, ಅಶೋಕ್ ಎಸ್ ಡಿ, ಮನೋಜ್ ಸುವರ್ಣ ಸೊರಕೆ, ಜಯರಾಜ್ ಸುವರ್ಣ ಸೊರಕೆ, ಸದಸ್ಯರಾದ ಹರೀಶ್ ಪಾಲೆತ್ತಗುರಿ, ಸಂದೇಶ ಆಚಾರ್ಯ, ಮಾಜಿ ಪಂಚಾಯತ್ ಸದಸ್ಯರಾದ ರಾಜಗೋಪಾಲ್ ಗೌಡ ಕಂಪ, ಸ್ಥಳೀಯರಾದ ರಾಮಕೃಷ್ಣ ಪ್ರಭು, ಈರಪ್ಪ ಪೂಜಾರಿ ಸೊರಕೆ, ತಾರಾ ಸೊರಕೆ, ಹರ್ಷಿಣಿ ಸುರೇಶ್ ಸೊರಕೆ, ಸುರೇಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು.

ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ಅಧ್ಯಕ್ಷ ಕಮಲೇಶ್ ಸರ್ವೆದೋಳಗುತ್ತು ಸ್ವಾಗತಿಸಿ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

37 minutes ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

2 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

11 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

11 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

11 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

16 hours ago