Advertisement
ಜಿಲ್ಲೆ

ನೀರಿಂಗಿಸೋಣ ಬನ್ನಿ ಅಭಿಯಾನ ವಿಸ್ತರಣೆ : ಸಮಾಲೋಚನಾ ಸಭೆ

Share

ಸವಣೂರು : ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ನೀರಿಂಗಿಸೋಣ ಬನ್ನಿ ಅಭಿಯಾನವನ್ನು ಗ್ರಾಮದಾದ್ಯಂತ ವಿಸ್ತರಿಸುವ ಬಗ್ಗೆ ಸಮಾಲೋಚನಾ ಸಭೆ ಹಾಗು ಮಾಹಿತಿ ಕಾರ್ಯಕ್ರಮ ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸುರೇಶ್ ಕುಮಾರ್ ಸೊರಕೆ ಅವರ ಮನೆಯಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿ ಡಾ.ಶ್ರೀಶಕುಮಾರ್ ಅವರು , ಮಳೆ ನೀರಿಂಗಿಸುವ ವಿವಿಧ ವಿಧಾನಗಳು ಹಾಗು ಜನಜಾಗೃತಿ ಅಭಿಯಾನದ ಯಶಸ್ಸಿಗೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿ ಗ್ರಾಮದ ಪ್ರತಿ ನಾಗರಿಕರು ಮಳೆ ನೀರಿಂಗಿಸುವ ಕಾರ್ಯ ಮಾಡುವ ಮೂಲಕ ಗ್ರಾಮವನ್ನು ದೇಶದಲ್ಲೇ ಮಾದರಿ ಗ್ರಾಮವನ್ನಾಗಿ ಮಾಡಬೇಕು ಎಂದರು.

ಜಿ.ಪಂ.ಮಾಜಿ ಸದಸ್ಯ ಸುರೇಶ್ ಕುಮಾರ್ ಸೊರಕೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಯುವಕ ಮಂಡಲದ “ನೀರಿಂಗಿಸೋಣ ಬನ್ನಿ ” ಕಾರ್ಯಕ್ರಮವನ್ನು ಗ್ರಾಮದಾದ್ಯಂತ ಯಶಸ್ವಿಗೊಳಿಸಿ ಡಿಸೆಂಬರ್ ಅಂತ್ಯದಲ್ಲಿ ಸೊರಕೆ ಕಿಂಡಿ ಅಣೆಕಟ್ಟೆ ಬಳಿ ಈ ವರ್ಷದ ಸಮಾರೋಪ ಕಾರ್ಯಕ್ರಮವನ್ನು ಊರಿನ ಜನರ ಹಾಗು ಯುವಕ ಮಂಡಲದ ಸಹಭಾಗಿತ್ವದೊಂದಿಗೆ ಆಯೋಜಿಸಲಾಗುವುದು ಎಂದರು.

ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುಬ್ರಹ್ಮಣ್ಯ ಕರಂಬಾರು,ಮಾಜಿ ಅಧ್ಯಕ್ಷ ರಾಜೇಶ್ ಎಸ್ ಡಿ, ಗೌರವ ಸಲಹೆಗಾರ ಶಶಿಧರ್ ಎಸ್ ಡಿ, ಪದಾ„ಕಾರಿಗಳಾದ ಡಾ.ಪ್ರವೀಣ್ ಸರ್ವೆದೋಳಗುತ್ತು, ಅಶೋಕ್ ಎಸ್ ಡಿ, ಮನೋಜ್ ಸುವರ್ಣ ಸೊರಕೆ, ಜಯರಾಜ್ ಸುವರ್ಣ ಸೊರಕೆ, ಸದಸ್ಯರಾದ ಹರೀಶ್ ಪಾಲೆತ್ತಗುರಿ, ಸಂದೇಶ ಆಚಾರ್ಯ, ಮಾಜಿ ಪಂಚಾಯತ್ ಸದಸ್ಯರಾದ ರಾಜಗೋಪಾಲ್ ಗೌಡ ಕಂಪ, ಸ್ಥಳೀಯರಾದ ರಾಮಕೃಷ್ಣ ಪ್ರಭು, ಈರಪ್ಪ ಪೂಜಾರಿ ಸೊರಕೆ, ತಾರಾ ಸೊರಕೆ, ಹರ್ಷಿಣಿ ಸುರೇಶ್ ಸೊರಕೆ, ಸುರೇಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು.

ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ಅಧ್ಯಕ್ಷ ಕಮಲೇಶ್ ಸರ್ವೆದೋಳಗುತ್ತು ಸ್ವಾಗತಿಸಿ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

8 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

8 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

9 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

9 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

19 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

20 hours ago