Advertisement
ಜಿಲ್ಲೆ

ನೀರಿಂಗಿಸೋಣ ಬನ್ನಿ ಅಭಿಯಾನ ವಿಸ್ತರಣೆ : ಸಮಾಲೋಚನಾ ಸಭೆ

Share

ಸವಣೂರು : ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ನೀರಿಂಗಿಸೋಣ ಬನ್ನಿ ಅಭಿಯಾನವನ್ನು ಗ್ರಾಮದಾದ್ಯಂತ ವಿಸ್ತರಿಸುವ ಬಗ್ಗೆ ಸಮಾಲೋಚನಾ ಸಭೆ ಹಾಗು ಮಾಹಿತಿ ಕಾರ್ಯಕ್ರಮ ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸುರೇಶ್ ಕುಮಾರ್ ಸೊರಕೆ ಅವರ ಮನೆಯಲ್ಲಿ ನಡೆಯಿತು.

Advertisement
Advertisement

ಸಂಪನ್ಮೂಲ ವ್ಯಕ್ತಿ ಡಾ.ಶ್ರೀಶಕುಮಾರ್ ಅವರು , ಮಳೆ ನೀರಿಂಗಿಸುವ ವಿವಿಧ ವಿಧಾನಗಳು ಹಾಗು ಜನಜಾಗೃತಿ ಅಭಿಯಾನದ ಯಶಸ್ಸಿಗೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿ ಗ್ರಾಮದ ಪ್ರತಿ ನಾಗರಿಕರು ಮಳೆ ನೀರಿಂಗಿಸುವ ಕಾರ್ಯ ಮಾಡುವ ಮೂಲಕ ಗ್ರಾಮವನ್ನು ದೇಶದಲ್ಲೇ ಮಾದರಿ ಗ್ರಾಮವನ್ನಾಗಿ ಮಾಡಬೇಕು ಎಂದರು.

Advertisement

ಜಿ.ಪಂ.ಮಾಜಿ ಸದಸ್ಯ ಸುರೇಶ್ ಕುಮಾರ್ ಸೊರಕೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಯುವಕ ಮಂಡಲದ “ನೀರಿಂಗಿಸೋಣ ಬನ್ನಿ ” ಕಾರ್ಯಕ್ರಮವನ್ನು ಗ್ರಾಮದಾದ್ಯಂತ ಯಶಸ್ವಿಗೊಳಿಸಿ ಡಿಸೆಂಬರ್ ಅಂತ್ಯದಲ್ಲಿ ಸೊರಕೆ ಕಿಂಡಿ ಅಣೆಕಟ್ಟೆ ಬಳಿ ಈ ವರ್ಷದ ಸಮಾರೋಪ ಕಾರ್ಯಕ್ರಮವನ್ನು ಊರಿನ ಜನರ ಹಾಗು ಯುವಕ ಮಂಡಲದ ಸಹಭಾಗಿತ್ವದೊಂದಿಗೆ ಆಯೋಜಿಸಲಾಗುವುದು ಎಂದರು.

ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುಬ್ರಹ್ಮಣ್ಯ ಕರಂಬಾರು,ಮಾಜಿ ಅಧ್ಯಕ್ಷ ರಾಜೇಶ್ ಎಸ್ ಡಿ, ಗೌರವ ಸಲಹೆಗಾರ ಶಶಿಧರ್ ಎಸ್ ಡಿ, ಪದಾ„ಕಾರಿಗಳಾದ ಡಾ.ಪ್ರವೀಣ್ ಸರ್ವೆದೋಳಗುತ್ತು, ಅಶೋಕ್ ಎಸ್ ಡಿ, ಮನೋಜ್ ಸುವರ್ಣ ಸೊರಕೆ, ಜಯರಾಜ್ ಸುವರ್ಣ ಸೊರಕೆ, ಸದಸ್ಯರಾದ ಹರೀಶ್ ಪಾಲೆತ್ತಗುರಿ, ಸಂದೇಶ ಆಚಾರ್ಯ, ಮಾಜಿ ಪಂಚಾಯತ್ ಸದಸ್ಯರಾದ ರಾಜಗೋಪಾಲ್ ಗೌಡ ಕಂಪ, ಸ್ಥಳೀಯರಾದ ರಾಮಕೃಷ್ಣ ಪ್ರಭು, ಈರಪ್ಪ ಪೂಜಾರಿ ಸೊರಕೆ, ತಾರಾ ಸೊರಕೆ, ಹರ್ಷಿಣಿ ಸುರೇಶ್ ಸೊರಕೆ, ಸುರೇಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು.

Advertisement

ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ಅಧ್ಯಕ್ಷ ಕಮಲೇಶ್ ಸರ್ವೆದೋಳಗುತ್ತು ಸ್ವಾಗತಿಸಿ ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

7 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

7 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

11 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

12 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

12 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

14 hours ago